ಬಿ.ಎನ್. ಯುಗಂಧರ್ 
ದೇಶ

ಮೈಕ್ರೋಸಾಫ್ಟ್​ ಸಿಇಒ ಸತ್ಯ ನಾಡೆಲ್ಲಾ ತಂದೆ, ನಿವೃತ್ತ ಐಎಎಸ್​ ಅಧಿಕಾರಿ ಯುಗಂಧರ್​ ನಿಧನ

ಸಾಫ್ಟ್ ವೇರ್ ದೈತ್ಯ ಮೈಕ್ರೋಸಾಫ್ಟ್​ ಸಿಇಒ ಸತ್ಯ ನಾಡೆಲ್ಲಾ ಅವರ ತಂದೆ, ನಿವೃತ್ತ ಐಎಎಸ್​ ಅಧಿಕಾರಿ ಬಿ.ಎನ್. ಯುಗಂಧರ್​(82) ಅವರು ಶುಕ್ರವಾರ ಹೈದರಾಬಾದ್​ನಲ್ಲಿ ನಿಧನರಾಗಿದ್ದಾರೆ.

ಹೈದರಾಬಾದ್​: ಸಾಫ್ಟ್ ವೇರ್ ದೈತ್ಯ ಮೈಕ್ರೋಸಾಫ್ಟ್​ ಸಿಇಒ ಸತ್ಯ ನಾಡೆಲ್ಲಾ ಅವರ ತಂದೆ, ನಿವೃತ್ತ ಐಎಎಸ್​ ಅಧಿಕಾರಿ ಬಿ.ಎನ್. ಯುಗಂಧರ್​(82) ಅವರು ಶುಕ್ರವಾರ ಹೈದರಾಬಾದ್​ನಲ್ಲಿ ನಿಧನರಾಗಿದ್ದಾರೆ.

ಕಳೆದ ಕೆಲವು ದಿನಗಳಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಯುಗಂಧರ್ ಅವರು ಇಂದು ಮಧ್ಯಾಹ್ನ ನಿಧನರಾದರು ಎಂದು ಅವರ ಆಪ್ತರು ತಿಳಿಸಿದ್ದಾರೆ. ಯುಗಂಧರ್ ಅವರ ಪತ್ನಿ ಈ ಮೊದಲೇ ನಿಧನರಾಗಿದ್ದು, ಸತ್ಯ ನಾಡೆಲ್ಲ ಅವರು ಏಕೈಕ ಪುತ್ರ.

1962ನೇ ಬ್ಯಾಚಿನ ಐಎಎಸ್​ ಅಧಿಕಾರಿಯಾದ ಯುಗಂಧರ್ ಅವರು ಪಿ.ವಿ.ನರಸಿಂಹರಾವ್​ ಸರ್ಕಾರದಲ್ಲಿ ಪ್ರಧಾನಮಂತ್ರಿ ಕಚೇರಿಯಲ್ಲಿ ಸೇವೆ ಸಲ್ಲಿಸಿದ್ದರು.

ಮುಸ್ಸೂರಿಯ ಲಾಲ್​ ಬಹದ್ದೂರ್ ಶಾಸ್ತ್ರಿ ನ್ಯಾಷನಲ್​ ಆಕಾಡೆಮಿ ಆಫ್​ ಅಡ್ಮಿನಿಸ್ಟ್ರೇಷನ್​ನ ನಿರ್ದೇಶಕರಾಗಿಯೂ ಯುಗಂಧರ್ ಅವರು ಸೇವೆ ಸಲ್ಲಿಸಿದ್ದರು.

2004-09ರ ಅವಧಿಯಲ್ಲಿ ಯೋಜನಾ ಆಯೋಗದ ಸದಸ್ಯರಾಗಿ ಮತ್ತು​ ಕೇಂದ್ರ ಗ್ರಾಮೀಣ ಅಭಿವೃದ್ಧಿ ಸಚಿವಾಲಯದ ಕಾರ್ಯದರ್ಶಿಯಾಗಿಯೂ ಯುಗಂಧರ್​ ಕಾರ್ಯನಿರ್ವಹಿಸಿದ್ದರು.

ಯುಗಂಧರ್​ ಅವರ ಸಾವಿಗೆ ಹಲವು ಐಎಎಸ್​ ಅಧಿಕಾರಿಗಳು, ರಾಜಕಾರಣಿಗಳು ಸಂತಾಪ ಸೂಚಿಸಿದ್ದಾರೆ. ತೆಲಂಗಾಣದ ಮುಖ್ಯಮಂತ್ರಿ ಕೆ.ಚಂದ್ರಶೇಖರರಾವ್​ ಅವರು ಯುಗಾಂಧರ್​ ಅವರ ಸರಳತೆ, ಪ್ರಾಮಾಣಿಕತೆ ವೃತ್ತಬದ್ಧತೆಯನ್ನು ಸ್ಮರಿಸಿಕೊಂಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT