ವ್ಯಾಪಾರ ಮಂಡಳಿ ಸಭೆಯಲ್ಲಿ ಕೇಂದ್ರ ಸಚಿವ ಪಿಯೂಷ್ ಗೋಯಲ್ 
ದೇಶ

'ಐನ್‌ಸ್ಟೈನ್ ಗುರುತ್ವಾಕರ್ಷಣೆಯನ್ನು ಕಂಡುಹಿಡಿದರು' ಹೇಳಿಕೆಗೆ ಸಚಿವ ಪಿಯೂಷ್ ಗೋಯಲ್ ಸ್ಪಷ್ಟನೆ 

ದೇಶದ ಆರ್ಥಿಕತೆ ಬಗ್ಗೆ ಪ್ರಧಾನಿ ಮೋದಿಯವರ ನೀತಿಯನ್ನು ಸಮರ್ಥಿಸಿ ದೆಹಲಿಯಲ್ಲಿ ವ್ಯಾಪಾರಿಗಳ ಮಂಡಳಿ ಸಭೆಯಲ್ಲಿ ಕೇಂದ್ರ ವಾಣಿಜ್ಯ ಖಾತೆ ಸಚಿವ ಪಿಯೂಷ್ ಗೋಯಲ್ ಐನ್ ಸ್ಟೈನ್ ನ ಗುರುತ್ವಾಕರ್ಷಣೆಗೆ ಗಣಿತವನ್ನು ಹೋಲಿಸಿ ನೀಡಿದ್ದ ಹೇಳಿಕೆ ನಿನ್ನೆ ಟ್ವಿಟ್ಟರ್ ನಲ್ಲಿ ವ್ಯಾಪಕವಾಗಿ ವೈರಲ್ ಆಗಿ ಸಾಕಷ್ಟು ಟೀಕೆಗಳು, ಹಾಸ್ಯ, ವಂಗ್ಯಮಿಶ್ರಿತ ಪ್ರತಿಕ್ರಿಯೆಗಳು ಕೇಳಿಬಂದಿದ್ದವ

ನವದೆಹಲಿ; ದೇಶದ ಆರ್ಥಿಕತೆ ಬಗ್ಗೆ ಪ್ರಧಾನಿ ಮೋದಿಯವರ ನೀತಿಯನ್ನು ಸಮರ್ಥಿಸಿ ದೆಹಲಿಯಲ್ಲಿ ವ್ಯಾಪಾರಿಗಳ ಮಂಡಳಿ ಸಭೆಯಲ್ಲಿ ಕೇಂದ್ರ ವಾಣಿಜ್ಯ ಖಾತೆ ಸಚಿವ ಪಿಯೂಷ್ ಗೋಯಲ್ ಐನ್ ಸ್ಟೈನ್ ನ ಗುರುತ್ವಾಕರ್ಷಣೆಗೆ ಗಣಿತವನ್ನು ಹೋಲಿಸಿ ನೀಡಿದ್ದ ಹೇಳಿಕೆ ನಿನ್ನೆ ಟ್ವಿಟ್ಟರ್ ನಲ್ಲಿ ವ್ಯಾಪಕವಾಗಿ ವೈರಲ್ ಆಗಿ ಸಾಕಷ್ಟು ಟೀಕೆಗಳು, ಹಾಸ್ಯ, ವಂಗ್ಯಮಿಶ್ರಿತ ಪ್ರತಿಕ್ರಿಯೆಗಳು ಕೇಳಿಬಂದಿದ್ದವು.


ನಂತರ ಅದಕ್ಕೆ ಸ್ವತಃ ಸಚಿವ ಪಿಯೂಷ್ ಗೋಯಲ್ ಅವರೇ ಸುದ್ದಿಸಂಸ್ಥೆಗೆ ಸ್ಪಷ್ಟನೆ ನೀಡಿದ್ದಾರೆ.''ನಾನು ನಿರ್ದಿಷ್ಟ ವಿಷಯವನ್ನು ಮಾತನಾಡುವಾಗ ಈ ಹೇಳಿಕೆಯನ್ನು ನೀಡಿದ್ದೇನೆ. ದುರದೃಷ್ಟವಶಾತ್ ಕೆಲವು ಸ್ನೇಹಿತರು ಆ ಸಂದರ್ಭವನ್ನು ತೆಗೆದುಹಾಕಿ, ನಾನು ಹೇಳಿರುವುದರಲ್ಲಿ ಒಂದು ಸಾಲನ್ನು ಎತ್ತಿಕೊಂಡು ತುಂಬಾ ಚೇಷ್ಟೆಯ ವಿವರಣೆಯನ್ನು ನೀಡಿದ್ದಾರೆ ಎಂದಿದ್ದಾರೆ.
ಆದರೆ ನಂತರವೂ ಪಿಯೂಷ್ ಅವರು ಐನ್ ಸ್ಟೈನ್ ನ ಸಿದ್ಧಾಂತಕ್ಕೆ ಬದ್ಧರಾಗಿದ್ದರು. 


ಕೇಂದ್ರ ಸಚಿವರ ಈ ಹೇಳಿಕೆಗೆ ಸಾಕಷ್ಟು ಟೀಕೆಗಳು ಕೇಳಿಬಂದಿವೆ. ಕೇಂದ್ರದ ಮಾಜಿ ಸಚಿವ ಜೈರಾಮ್ ರಮೇಶ್ ನಿನ್ನೆ ಟ್ವೀಟ್ ಮಾಡಿ,ನ್ಯೂಟನ್ ಈಗಾಗಲೇ ಆ ಕೆಲಸ ಮಾಡಿರುವುದರಿಂದ ಐನ್ ಸ್ಟೈನ್ ಗೆ ಗುರುತ್ವಾಕರ್ಷಣೆಯನ್ನು ಕಂಡುಹಿಡಿಯಲು ಗಣಿತದ ಅಗತ್ಯವಿರಲಿಲ್ಲ. ಇನ್ನು ನ್ಯೂಟನ್ ಗೆ ಮೊದಲೇ ನಮ್ಮ ಪೂರ್ವಜರು ಗುರುತ್ವಾಕರ್ಷಣೆ ಬಗ್ಗೆ ಎಲ್ಲವೂ ತಿಳಿದುಕೊಂಡಿದ್ದರು ಎಂದು ಮಾನವ ಸಂಪನ್ಮೂಲ ಸಚಿವರು ಹೇಳಿತ್ತಾರೆ ಕಾಯುತ್ತಿರಿ, ಅಥವಾ ಈಗಾಗಲೇ ಹೇಳಿದ್ದಾರೆಯೇ, ಇಂತಹ ಸಚಿವರನ್ನು ಸಂಪುಟದಲ್ಲಿ ಇಟ್ಟುಕೊಂಡು ನಮ್ಮ ದೇಶದ ಆರ್ಥಿಕತೆಯನ್ನು ದೇವರೇ ಕಾಪಾಡಬೇಕು ಎಂದು ವ್ಯಂಗ್ಯವಾಡಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ಮೆಟ್ರೋ ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

SCROLL FOR NEXT