ಮಾಜಿ ಪೊಲೀಸ್ ಆಯುಕ್ತ ರಾಜೀವ್ ಕುಮಾರ್ 
ದೇಶ

ಶಾರದಾ ಹಗರಣ; ಮಾಜಿ ಪೊಲೀಸ್ ಆಯುಕ್ತರಿಗೆ ನೀಡಿದ್ದ ರಕ್ಷಣೆ ಹಿಂಪಡೆದ ಹೈಕೋರ್ಟ್

ಶಾರದಾ ಚಿಟ್ ಫಂಡ್ ಹಗರಣದ ಆರೋಪಿ ಮಾಜಿ ಪೊಲೀಸ್ ಆಯುಕ್ತ ರಾಜೀವ್ ಕುಮಾರ್ ಅವರಿಗೆ ಬಂಧಿಸದಂತೆ ನೀಡಿದ್ದ ರಕ್ಷಣೆಯನ್ನು ಕೋಲ್ಕತಾ ಹೈಕೋರ್ಟ್ ಶುಕ್ರವಾರ ಹಿಂಪಡೆದಿದೆ. ಇದರಿಂದ ರಾಜೀವ್ ಕುಮಾರ್ ಗೆ ಬಂಧನದ ಭೀತಿ ಎದುರಾಗಿದೆ. 

ಕೋಲ್ಕತಾ: ಶಾರದಾ ಚಿಟ್ ಫಂಡ್ ಹಗರಣದ ಆರೋಪಿ ಮಾಜಿ ಪೊಲೀಸ್ ಆಯುಕ್ತ ರಾಜೀವ್ ಕುಮಾರ್ ಅವರಿಗೆ ಬಂಧಿಸದಂತೆ ನೀಡಿದ್ದ ರಕ್ಷಣೆಯನ್ನು ಕೋಲ್ಕತಾ ಹೈಕೋರ್ಟ್ ಶುಕ್ರವಾರ ಹಿಂಪಡೆದಿದೆ. ಇದರಿಂದ ರಾಜೀವ್ ಕುಮಾರ್ ಗೆ ಬಂಧನದ ಭೀತಿ ಎದುರಾಗಿದೆ. 

ತನ್ನ ವಿರುದ್ಧ ಪ್ರಕರಣ ದಾಖಲಿಸಿರುವುದರಿಂದ ಗೌರವ, ಘನತೆಗೆ ಧಕ್ಕೆಯಾಗಿದೆ. ಆದ್ದರಿಂದ ವಿಚಾರಣೆ ವೇಳೆ ತಮ್ಮನ್ನು ಬಂಧಿಸದಂತೆ ನಿರ್ದೇಶನ ನೀಡಬೇಕು ಎಂದು ಕೋರಿ ರಾಜೀವ್ ಕುಮಾರ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಮಧುಮಿತ ಮಿತ್ರಾ, ಕಾನೂನಿನಿಂದ ಯಾರೊಬ್ಬರೂ ದೊಡ್ಡವರಲ್ಲ. ಸುಪ್ರೀಂ ಕೋರ್ಟ್ ಆದೇಶದ ಮೇರೆಗೆ ಸಿಬಿಐ ಅಧಿಕಾರಿಗಳು ಯಾವಾಗ ಬೇಕಾದರೂ ಅವರನ್ನು ವಿಚಾರಣೆಗೆ ಕರೆಯಬಹುದು ಎಂದು ಅಭಿಪ್ರಾಯಪಟ್ಟಿದೆ. 

ಸಿಬಿಐ ಪರ ವಕೀಲರು, ಆರೋಪಿ ಅನೇಕ ಸತ್ಯಾಂಶಗಳನ್ನು ಮುಚ್ಚಿಡಲು ಯತ್ನಿಸುತ್ತಿದ್ದು, ತನಿಖೆಗೆ ಸಹಕರಿಸುತ್ತಿಲ್ಲ . ಇದರಿಂದ ತನಿಖೆ ವಿಳಂಬವಾಗುತ್ತಿದೆ ಎಂದು ಆರೋಪಿಸಿದರು.  ಸಿಬಿಐ ಅಧಿಕಾರಿಗಳು ಶುಕ್ರವಾರ ರಾಜೀವ್ ಕುಮಾರ್ ಅವರನ್ನು ಶಾರದಾ ಹಾಗೂ ರೋಸ್ ವ್ಯಾಲಿ ಚಿಟ್ ಫಂಡ್ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದರು. 

ಈ ಹಿಂದೆ ಸುಪ್ರೀಂ ಕೋರ್ಟ್ ಕೋಲ್ಕತಾ ಮಾಜಿ ಆಯುಕ್ತ ರಾಜೀವ್ ಕುಮಾರ್ ಅವರಿಗೆ ರಕ್ಷಣೆ ಕೋರಿ ಹೈಕೋರ್ಟ್ ಮೆಟ್ಟಿಲೇರಲು ಅವಕಾಶ ಕಲ್ಪಿಸಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT