ಸಂಗ್ರಹ ಚಿತ್ರ 
ದೇಶ

ತ್ರಿವಳಿ ತಲಾಖ್ ನಿಷೇಧ ಕಾಯ್ದೆ ಪ್ರಶ್ನಿಸಿ ಮತ್ತೊಂದು ಆರ್ಜಿ, ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ನೊಟೀಸ್

ತ್ರಿವಳಿ ತಲಾಖ್ ಆಚರಣೆಯನ್ನು ಅಪರಾಧ ಎಂದು ಪರಿಗಣಿಸುವ ಕೇಂದ್ರ ಸರ್ಕಾರದ ಹೊಸ ಕಾಯ್ದೆಯ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸಿ ಹೊಸದಾಗಿ ಸಲ್ಲಿಕೆಯಾಗಿರುವ ಆರ್ಜಿ ಸಂಬಂಧ ಸುಪ್ರೀಂ ಕೋರ್ಟ್ ಶುಕ್ರವಾರ ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

ನವದೆಹಲಿ: ತ್ರಿವಳಿ ತಲಾಖ್ ಆಚರಣೆಯನ್ನು ಅಪರಾಧ ಎಂದು ಪರಿಗಣಿಸುವ ಕೇಂದ್ರ ಸರ್ಕಾರದ ಹೊಸ ಕಾಯ್ದೆಯ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸಿ ಹೊಸದಾಗಿ ಸಲ್ಲಿಕೆಯಾಗಿರುವ ಆರ್ಜಿ ಸಂಬಂಧ ಸುಪ್ರೀಂ ಕೋರ್ಟ್ ಶುಕ್ರವಾರ ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

ನ್ಯಾಯಮೂರ್ತಿ ಎನ್ ವಿ ರಮಣ, ಇಂದಿರಾ ಬ್ಯಾನರ್ಜಿ ಹಾಗೂ ಅಜಯ್ ರಸ್ತೋಗಿ ಅವರನ್ನೊಳಗೊಂಡ ನ್ಯಾಯಪೀಠ, ತಮಿಳುನಾಡಿನ ಮುಸ್ಲಿಂ ವಕೀಲರ ಆಸೋಸಿಯೇಷನ್ ಸಲ್ಲಿಸಿರುವ ಆರ್ಜಿ ಸಂಬಂಧ ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ. ಅಲ್ಲದೆ, ಈ ಆರ್ಜಿಯನ್ನು ಇದೇ ವಿಷಯವಾಗಿ ಸಲ್ಲಿಕೆಯಾಗಿರುವ ಆರ್ಜಿಗಳೊಂದಿಗೆ ಸೇರ್ಪಡೆಗೊಳಿಸಿದೆ.

ಸಂಸತ್ತು ಕಳೆದ ಜುಲೈ ತಿಂಗಳಲ್ಲಿ ಅಂಗೀಕರಿಸಿದ ಮುಸ್ಲಿಂ ಮಹಿಳೆಯರ ವಿವಾಹ ಹಕ್ಕುಗಳ ಸಂರಕ್ಷಣಾ ಕಾಯ್ದೆಯ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸಿ ಈ ಆರ್ಜಿ ಸಲ್ಲಿಸಲಾಗಿದೆ. ಲಿಖಿತ ಅಥವಾ ಎಲೆಕ್ಟ್ರಾನಿಕ್ ವಿಧಾನ ಸೇರಿದಂತೆ ತ್ವರಿತ ತ್ರಿವಳಿ ತಲಾಖ್ ನ ಎಲ್ಲಾ ಘೋಷಣೆಗಳು ಅನೂರ್ಜಿತ, ಕಾನೂನುಬಾಹಿರ ಎಂದು ತ್ರಿವಳಿ ತಲಾಖ್ ನಿಷೇಷ ಕಾಯ್ದೆ ಹೇಳುತ್ತದೆ. ತ್ವರಿತ ತ್ರಿವಳಿ ತಲಾಖ್ ನೀಡಿದ ಪತಿಗೆ ಗರಿಷ್ಠ ಮೂರು ವರ್ಷಗಳ ಜೈಲು ಶಿಕ್ಷೆ ಮತ್ತು ದಂಡವನ್ನು ವಿಧಿಸಬಹುದಾಗಿದೆ. ದಂಡದ ಮೊತ್ತವನ್ನು ಮ್ಯಾಜಿಸ್ಟ್ರೇಟ್ ನಿರ್ಧರಿಸಲಿದ್ದಾರೆ. ಅಪರಾಧಕ್ಕೆ ಸಂಬಂಧಿಸಿದ ಮಾಹಿತಿಯನ್ನು ಪತ್ನಿ ಅಥವಾ ಆಕೆಯ ರಕ್ತ ಸಂಬಂಧಿ ನೀಡಿದರೆ ಮಾತ್ರ ಅಪರಾಧ ಮಾನ್ಯತೆ ಪಡೆಯುತ್ತದೆ.

ಅಪರಾಧ ಜಾಮೀನು ರಹಿತವಾಗಿದೆ. ಆದರೆ ಮ್ಯಾಜಿಸ್ಟ್ರೇಟ್ ಬಳಿ ಆರೋಪಿಗಳಿಗೆ ಜಾಮೀನು ನೀಡುವ ಅವಕಾಶವಿದೆ. ಜಾಮೀನು ನೀಡಲು ಸಮಂಜಸವಾದ ಕಾರಣಗಳು ಮ್ಯಾಜಿಸ್ಟ್ರೇಟ್ ಗೆ ತೃಪ್ತಿ ಹೊಂದಿದ್ದರೆ ಪತ್ನಿಯನ್ನು ಕೇಳಿದ ನಂತರವೇ ಜಾಮೀನು ನೀಡಬಹುದು ಎಂದು ಕಾಯ್ದೆ ಹೇಳುತ್ತದೆ. ಹೆಂಡತಿಗೆ ಜೀವನಾಂಶ ಭತ್ಯೆಗೆ ಅರ್ಹತೆ ಇದೆ. ಮೊತ್ತವನ್ನು ಮ್ಯಾಜಿಸ್ಟ್ರೇಟ್ ನಿರ್ಧರಿಸುತ್ತಾರೆ. ತನ್ನ ಅಪ್ರಾಪ್ತ ಮಕ್ಕಳನ್ನು ವಶಕ್ಕೆ ಪಡೆಯಲು ಪತ್ನಿಗೆ ಅರ್ಹತೆ ಇದೆ. ಬಂಧನದ ವಿಧಾನವನ್ನು ಮ್ಯಾಜಿಸ್ಟ್ರೇಟ್ ನಿರ್ಧರಿಸುತ್ತಾರೆ ಎಂದು ಹೊಸಕಾಯ್ದೆ ಹೇಳುತ್ತದೆ. ಈ ಮೊದಲು ಸುಪ್ರೀಂ ಕೋರ್ಟ್ ಗೆ ಸಲ್ಲಿಸಲಾಗಿರುವ ಇತರ ಮೂರು ಆರ್ಜಿಗಳನ್ನು ಸಮಸ್ತ ಕೇರಳ ಜಮೈಥುಲ್ ಉಲೇಮಾ,ಸಯ್ಯದ್ ಫಾರೂಕ್ ಹಾಗೂ ಜಮೈತ್ ಉಲೇಮಾ –ಹಿ- ಹಿಂದ್ ಸಲ್ಲಿಸಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT