ಜಯಗೋಪಾಲ್ 
ದೇಶ

ಬ್ಯಾನರ್ ಬಿದ್ದು ಯುವತಿ ಸಾವು: ಎಐಎಡಿಎಂಕೆ ನಾಯಕನ ವಿರುದ್ಧ ಕೇಸ್ ದಾಖಲು

ತಲೆ ಮೇಲೆ ಬ್ಯಾನರ್ ಬಿದ್ದು ಯುವತಿ  ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎಐಎಡಿಎಂಕೆ ನಾಯಕ ಹಾಗೂ ಮಾಜಿ ಕೌನ್ಸಿಲರ್ ಎಸ್ ಜಯಗೋಪಾಲ್ ಅವರ ವಿರುದ್ಧ ಪಾಲಿಕರಣೈಯಲ್ಲಿ ಪೊಲೀಸರ್ ಎಫ್ಐಆರ್ ದಾಖಲಿಸಿದ್ದಾರೆ.

ಚೆನ್ನೈ: ತಲೆ ಮೇಲೆ ಬ್ಯಾನರ್ ಬಿದ್ದು ಯುವತಿ  ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎಐಎಡಿಎಂಕೆ ನಾಯಕ ಹಾಗೂ ಮಾಜಿ ಕೌನ್ಸಿಲರ್ ಎಸ್ ಜಯಗೋಪಾಲ್ ಅವರ ವಿರುದ್ಧ ಪಾಲಿಕರಣೈಯಲ್ಲಿ ಪೊಲೀಸರ್ ಎಫ್ಐಆರ್ ದಾಖಲಿಸಿದ್ದಾರೆ.

ಜಯಗೋಪಾಲ್ ಅವರು ತಮ್ಮ ಪುತ್ರನ ಮದುವೆಗಾಗಿ ಅಳವಡಿಸಿದ್ದ ಬ್ಯಾನರ್ ಕುಸಿದುಬಿದ್ದು ನಿನ್ನೆ ಶುಭಶ್ರೀ ಎಂಬ ಯುವತಿ ಮೃಪಟ್ಟಿದ್ದರು. 

ಶುಭಶ್ರೀ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ವೇಳೆ ಬ್ಯಾನರ್ ಕುಸಿ ಬಿದ್ದಿದೆ. ಪರಿಣಾಮ ಶುಭಶ್ರೀ ಗಾಯಗೊಂಡು ಕೆಳಗೆ ಬಿದ್ದಿದ್ದಾಳೆ. ಇದೇ ವೇಳೆ ಹಿಂಬದಿಯಿಂದ ಬರುತ್ತಿದ್ದ ಲಾರಿಯೊಂದು ಯುವತಿಯ ಮೇಲೆ ಹರಿದು ಹೋಗಿದೆ.

ಅನುಮತಿ ಪಡೆಯದೇ ಬ್ಯಾನರ್ ಹಾಕಿದ ಆರೋಪದ ಮೇಲೆ ಜಯಗೋಪಾಲ್ ಅವರ ವಿರುದ್ಧ ಪೊಲೀಸ್ ಕೇಸ್ ದಾಖಲಿಸಿದ್ದಾರೆ. 

ಈ ಮಧ್ಯೆ, ಮದ್ರಾಸ್ ಹೈಕೋರ್ಟ್ ಘಟನೆಯ ಕುರಿತು ತನಿಖೆಗೆ ಆದೇಶಿಸಿದೆ ಮತ್ತು ಮೃತ ಯುವತಿಯ ಪೋಷಕರಿಗೆ 5 ಲಕ್ಷ ರೂಪಾಯಿ ಪರಿಹಾರ ನೀಡುವಂತೆ ತಮಿಳುನಾಡು ಸರ್ಕಾರಕ್ಕೆ ಸೂಚಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT