ಸಾಂದರ್ಭಿಕ ಚಿತ್ರ 
ದೇಶ

ಮುಖ್ಯಮಂತ್ರಿ ಚಂದ್ರಶೇಖರ್ ರಾವ್ ಅಧಿಕೃತ ನಿವಾಸದಲ್ಲಿನ ಶ್ವಾನ ಮರಣ, ಪಶುವೈದ್ಯರ ವಿರುದ್ಧ ಪ್ರಕರಣ ದಾಖಲು 

ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಅವರ ಅಧಿಕೃತ ನಿವಾಸ ಪ್ರಗತಿ ಭವನದಲ್ಲಿನ  11 ತಿಂಗಳ ಸಾಕು   ನಾಯಿ ಮರಣವನ್ನಪ್ಪಿದೆ. ಈ ಶ್ವಾನ ಪೋಷಣೆ ಮಾಡುತ್ತಿದ್ದವರು ನೀಡಿದ ದೂರಿನ ಹಿನ್ನೆಲೆಯಲ್ಲಿ  ಖಾಸಗಿ ಪಶುವೈದ್ಯರ ವಿರುದ್ಧ ಖಾಸಗಿ ಪಶು ವೈದ್ಯರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಹೈದ್ರಾಬಾದ್: ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಅವರ ಅಧಿಕೃತ ನಿವಾಸ ಪ್ರಗತಿ ಭವನದಲ್ಲಿನ  11 ತಿಂಗಳ ಸಾಕು   ನಾಯಿ ಮರಣವನ್ನಪ್ಪಿದೆ. ಈ ಶ್ವಾನ ಪೋಷಣೆ ಮಾಡುತ್ತಿದ್ದವರು ನೀಡಿದ ದೂರಿನ ಹಿನ್ನೆಲೆಯಲ್ಲಿ  ಖಾಸಗಿ ಪಶುವೈದ್ಯರ ವಿರುದ್ಧ ಖಾಸಗಿ ಪಶು ವೈದ್ಯರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಐಪಿಸಿ ಸೆಕ್ಷನ್ 429  ಮತ್ತು1960ರ ಪ್ರಾಣಿ ಹತ್ಯೆ ತಡೆ ಕಾಯ್ದೆ ಸೆಕ್ಷನ್ 11(4) ರ ಅಡಿಯಲ್ಲಿ ಪಶು ವೈದ್ಯ ರಂಜಿತ್ ವಿರುದ್ಧ ಬಂಜಾರ ಹಿಲ್ಸ್  ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಅವರ ಅಧಿಕೃತ ನಿವಾಸ ಪ್ರಗತಿ ಭವನದಲ್ಲಿನ ನಾಯಿಗಳನ್ನು ಅಸಿಫ್ ಆಲಿ ಸೇರಿದಂತೆ 9 ಕ್ಕೂ ಹೆಚ್ಚು ಮಂದಿ ನೋಡಿಕೊಳ್ಳುತ್ತಿದ್ದರು ಎಂದು ಪೊಲೀಸ್ ಮೂಲಗಳಿಂದ ತಿಳಿದುಬಂದಿದೆ.

ಕೆಲ ದಿನಗಳ ಹಿಂದೆ 11 ತಿಂಗಳ ಹಾಸ್ಕಿ ಹೆಸರಿನ ಶ್ವಾನ ಅನಾರೋಗ್ಯಕ್ಕೊಳಗಾಗಿದ್ದು, ಆಹಾರವನ್ನು ತ್ಯಜಿಸಿದೆ. ಈ ಮಾಹಿತಿ ತಿಳಿದ ನಂತರ ಶ್ವಾನ ನೋಡಿಕೊಳ್ಳುತ್ತಿದ್ದ ಅಲಿ ಖಾನ್ ಸ್ಥಳಕ್ಕೆ ಭೇಟಿ ನೀಡಿದ್ದಾಗ ಅದು ಜ್ವರದಿಂದ ನರಳುತ್ತಿರುವುದು ಕಂಡುಬಂದಿದೆ. 

ತದನಂತರ ಅಲಿಖಾನ್ ಆ ಶ್ವಾನವನ್ನು ಬಂಜಾರ ಹಿಲ್ಸ್  ಬಳಿಯ ಡಾಕ್ಟರ್ ರಂಜಿತ್ ಬಳಿಗೆ ಕರೆದುಕೊಂಡು ಹೋಗಿದ್ದು, ಡಾಕ್ಟರ್ ಇಂಜೆಕ್ಷನ್ ನೀಡಿದ ಕೂಡಲೇ ಆ ಶ್ವಾನ ಮೃತಪಟ್ಟಿದೆ.

ಡಾಕ್ಟರ್ ನಿರ್ಲಕ್ಷ್ಯದಿಂದಾಗಿ ಶ್ವಾನು  ಮೃತಪಟ್ಟಿದೆ ಎಂದು ಆರೋಪಿಸಿ ಅಲಿಖಾನ್ ಪೊಲೀಸರಿಗೆ ದೂರು ನೀಡಿದ್ದರು. ಈ ದೂರಿನ ಆಧಾರದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT