ಸಾಂದರ್ಭಿಕ ಚಿತ್ರ 
ದೇಶ

ಮುಖ್ಯಮಂತ್ರಿ ಚಂದ್ರಶೇಖರ್ ರಾವ್ ಅಧಿಕೃತ ನಿವಾಸದಲ್ಲಿನ ಶ್ವಾನ ಮರಣ, ಪಶುವೈದ್ಯರ ವಿರುದ್ಧ ಪ್ರಕರಣ ದಾಖಲು 

ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಅವರ ಅಧಿಕೃತ ನಿವಾಸ ಪ್ರಗತಿ ಭವನದಲ್ಲಿನ  11 ತಿಂಗಳ ಸಾಕು   ನಾಯಿ ಮರಣವನ್ನಪ್ಪಿದೆ. ಈ ಶ್ವಾನ ಪೋಷಣೆ ಮಾಡುತ್ತಿದ್ದವರು ನೀಡಿದ ದೂರಿನ ಹಿನ್ನೆಲೆಯಲ್ಲಿ  ಖಾಸಗಿ ಪಶುವೈದ್ಯರ ವಿರುದ್ಧ ಖಾಸಗಿ ಪಶು ವೈದ್ಯರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಹೈದ್ರಾಬಾದ್: ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಅವರ ಅಧಿಕೃತ ನಿವಾಸ ಪ್ರಗತಿ ಭವನದಲ್ಲಿನ  11 ತಿಂಗಳ ಸಾಕು   ನಾಯಿ ಮರಣವನ್ನಪ್ಪಿದೆ. ಈ ಶ್ವಾನ ಪೋಷಣೆ ಮಾಡುತ್ತಿದ್ದವರು ನೀಡಿದ ದೂರಿನ ಹಿನ್ನೆಲೆಯಲ್ಲಿ  ಖಾಸಗಿ ಪಶುವೈದ್ಯರ ವಿರುದ್ಧ ಖಾಸಗಿ ಪಶು ವೈದ್ಯರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಐಪಿಸಿ ಸೆಕ್ಷನ್ 429  ಮತ್ತು1960ರ ಪ್ರಾಣಿ ಹತ್ಯೆ ತಡೆ ಕಾಯ್ದೆ ಸೆಕ್ಷನ್ 11(4) ರ ಅಡಿಯಲ್ಲಿ ಪಶು ವೈದ್ಯ ರಂಜಿತ್ ವಿರುದ್ಧ ಬಂಜಾರ ಹಿಲ್ಸ್  ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಅವರ ಅಧಿಕೃತ ನಿವಾಸ ಪ್ರಗತಿ ಭವನದಲ್ಲಿನ ನಾಯಿಗಳನ್ನು ಅಸಿಫ್ ಆಲಿ ಸೇರಿದಂತೆ 9 ಕ್ಕೂ ಹೆಚ್ಚು ಮಂದಿ ನೋಡಿಕೊಳ್ಳುತ್ತಿದ್ದರು ಎಂದು ಪೊಲೀಸ್ ಮೂಲಗಳಿಂದ ತಿಳಿದುಬಂದಿದೆ.

ಕೆಲ ದಿನಗಳ ಹಿಂದೆ 11 ತಿಂಗಳ ಹಾಸ್ಕಿ ಹೆಸರಿನ ಶ್ವಾನ ಅನಾರೋಗ್ಯಕ್ಕೊಳಗಾಗಿದ್ದು, ಆಹಾರವನ್ನು ತ್ಯಜಿಸಿದೆ. ಈ ಮಾಹಿತಿ ತಿಳಿದ ನಂತರ ಶ್ವಾನ ನೋಡಿಕೊಳ್ಳುತ್ತಿದ್ದ ಅಲಿ ಖಾನ್ ಸ್ಥಳಕ್ಕೆ ಭೇಟಿ ನೀಡಿದ್ದಾಗ ಅದು ಜ್ವರದಿಂದ ನರಳುತ್ತಿರುವುದು ಕಂಡುಬಂದಿದೆ. 

ತದನಂತರ ಅಲಿಖಾನ್ ಆ ಶ್ವಾನವನ್ನು ಬಂಜಾರ ಹಿಲ್ಸ್  ಬಳಿಯ ಡಾಕ್ಟರ್ ರಂಜಿತ್ ಬಳಿಗೆ ಕರೆದುಕೊಂಡು ಹೋಗಿದ್ದು, ಡಾಕ್ಟರ್ ಇಂಜೆಕ್ಷನ್ ನೀಡಿದ ಕೂಡಲೇ ಆ ಶ್ವಾನ ಮೃತಪಟ್ಟಿದೆ.

ಡಾಕ್ಟರ್ ನಿರ್ಲಕ್ಷ್ಯದಿಂದಾಗಿ ಶ್ವಾನು  ಮೃತಪಟ್ಟಿದೆ ಎಂದು ಆರೋಪಿಸಿ ಅಲಿಖಾನ್ ಪೊಲೀಸರಿಗೆ ದೂರು ನೀಡಿದ್ದರು. ಈ ದೂರಿನ ಆಧಾರದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT