ಸಾಂದರ್ಭಿಕ ಚಿತ್ರ 
ದೇಶ

ಮುಖ್ಯಮಂತ್ರಿ ಚಂದ್ರಶೇಖರ್ ರಾವ್ ಅಧಿಕೃತ ನಿವಾಸದಲ್ಲಿನ ಶ್ವಾನ ಮರಣ, ಪಶುವೈದ್ಯರ ವಿರುದ್ಧ ಪ್ರಕರಣ ದಾಖಲು 

ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಅವರ ಅಧಿಕೃತ ನಿವಾಸ ಪ್ರಗತಿ ಭವನದಲ್ಲಿನ  11 ತಿಂಗಳ ಸಾಕು   ನಾಯಿ ಮರಣವನ್ನಪ್ಪಿದೆ. ಈ ಶ್ವಾನ ಪೋಷಣೆ ಮಾಡುತ್ತಿದ್ದವರು ನೀಡಿದ ದೂರಿನ ಹಿನ್ನೆಲೆಯಲ್ಲಿ  ಖಾಸಗಿ ಪಶುವೈದ್ಯರ ವಿರುದ್ಧ ಖಾಸಗಿ ಪಶು ವೈದ್ಯರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಹೈದ್ರಾಬಾದ್: ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಅವರ ಅಧಿಕೃತ ನಿವಾಸ ಪ್ರಗತಿ ಭವನದಲ್ಲಿನ  11 ತಿಂಗಳ ಸಾಕು   ನಾಯಿ ಮರಣವನ್ನಪ್ಪಿದೆ. ಈ ಶ್ವಾನ ಪೋಷಣೆ ಮಾಡುತ್ತಿದ್ದವರು ನೀಡಿದ ದೂರಿನ ಹಿನ್ನೆಲೆಯಲ್ಲಿ  ಖಾಸಗಿ ಪಶುವೈದ್ಯರ ವಿರುದ್ಧ ಖಾಸಗಿ ಪಶು ವೈದ್ಯರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಐಪಿಸಿ ಸೆಕ್ಷನ್ 429  ಮತ್ತು1960ರ ಪ್ರಾಣಿ ಹತ್ಯೆ ತಡೆ ಕಾಯ್ದೆ ಸೆಕ್ಷನ್ 11(4) ರ ಅಡಿಯಲ್ಲಿ ಪಶು ವೈದ್ಯ ರಂಜಿತ್ ವಿರುದ್ಧ ಬಂಜಾರ ಹಿಲ್ಸ್  ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಅವರ ಅಧಿಕೃತ ನಿವಾಸ ಪ್ರಗತಿ ಭವನದಲ್ಲಿನ ನಾಯಿಗಳನ್ನು ಅಸಿಫ್ ಆಲಿ ಸೇರಿದಂತೆ 9 ಕ್ಕೂ ಹೆಚ್ಚು ಮಂದಿ ನೋಡಿಕೊಳ್ಳುತ್ತಿದ್ದರು ಎಂದು ಪೊಲೀಸ್ ಮೂಲಗಳಿಂದ ತಿಳಿದುಬಂದಿದೆ.

ಕೆಲ ದಿನಗಳ ಹಿಂದೆ 11 ತಿಂಗಳ ಹಾಸ್ಕಿ ಹೆಸರಿನ ಶ್ವಾನ ಅನಾರೋಗ್ಯಕ್ಕೊಳಗಾಗಿದ್ದು, ಆಹಾರವನ್ನು ತ್ಯಜಿಸಿದೆ. ಈ ಮಾಹಿತಿ ತಿಳಿದ ನಂತರ ಶ್ವಾನ ನೋಡಿಕೊಳ್ಳುತ್ತಿದ್ದ ಅಲಿ ಖಾನ್ ಸ್ಥಳಕ್ಕೆ ಭೇಟಿ ನೀಡಿದ್ದಾಗ ಅದು ಜ್ವರದಿಂದ ನರಳುತ್ತಿರುವುದು ಕಂಡುಬಂದಿದೆ. 

ತದನಂತರ ಅಲಿಖಾನ್ ಆ ಶ್ವಾನವನ್ನು ಬಂಜಾರ ಹಿಲ್ಸ್  ಬಳಿಯ ಡಾಕ್ಟರ್ ರಂಜಿತ್ ಬಳಿಗೆ ಕರೆದುಕೊಂಡು ಹೋಗಿದ್ದು, ಡಾಕ್ಟರ್ ಇಂಜೆಕ್ಷನ್ ನೀಡಿದ ಕೂಡಲೇ ಆ ಶ್ವಾನ ಮೃತಪಟ್ಟಿದೆ.

ಡಾಕ್ಟರ್ ನಿರ್ಲಕ್ಷ್ಯದಿಂದಾಗಿ ಶ್ವಾನು  ಮೃತಪಟ್ಟಿದೆ ಎಂದು ಆರೋಪಿಸಿ ಅಲಿಖಾನ್ ಪೊಲೀಸರಿಗೆ ದೂರು ನೀಡಿದ್ದರು. ಈ ದೂರಿನ ಆಧಾರದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

SCROLL FOR NEXT