ಸಂಸತ್ತು 
ದೇಶ

ಅಧಿಕೃತ ಸರ್ಕಾರಿ ಬಂಗಲೆ ಖಾಲಿ ಮಾಡದ 82 ಮಾಜಿ ಸಂಸದರು

ಲೋಕಸಭೆ ಹೌಸಿಂಗ್ ಸಮಿತಿಯ ಕಠಿಣ ಎಚ್ಚರಿಕೆಯ ನಡುವೆಯೂ ಇನ್ನು 82 ಮಾಜಿ ಸಂಸದರು ದೆಹಲಿಯ ಲುಟಿಯನ್ಸ್ ನ ಸರ್ಕಾರಿ ಅಧಿಕೃತ ಬಂಗಲೆಗಳನ್ನು ಖಾಲಿ ಮಾಡಿಲ್ಲ ಎಂಬುದು ಮೂಲಗಳಿಂದ ತಿಳಿದುಬಂದಿದೆ.

ನವದೆಹಲಿ: ಲೋಕಸಭೆ ಹೌಸಿಂಗ್ ಸಮಿತಿಯ ಕಠಿಣ ಎಚ್ಚರಿಕೆಯ ನಡುವೆಯೂ ಇನ್ನು 82 ಮಾಜಿ ಸಂಸದರು ದೆಹಲಿಯ ಲುಟಿಯನ್ಸ್ ನ ಸರ್ಕಾರಿ ಅಧಿಕೃತ ಬಂಗಲೆಗಳನ್ನು ಖಾಲಿ ಮಾಡಿಲ್ಲ ಎಂಬುದು ಮೂಲಗಳಿಂದ ತಿಳಿದುಬಂದಿದೆ.

ಇಂತಹ ಮಾಜಿ ಸಂಸದರನ್ನು ಆದಷ್ಟು ಬೇಗ ಹೊರಹಾಕಲು ಸಾರ್ವಜನಿಕ ಆವರಣದಲ್ಲಿ ಅನಧಿಕೃತ ನಿವಾಸಿಗಳ ಹೊರಹಾಕುವಿಕೆ ಕಾಯ್ದೆಯಡಿ ಕ್ರಮ ಕೈಗೊಳ್ಳಲು ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ತಿಳಿಸಿದೆ. 

ಮೂರು ದಿನಗಳೊಳಗೆ ಸರ್ಕಾರಿ ಬಂಗಲೆ ತೆರವುಗೊಳಿಸದಿದ್ದಲ್ಲಿ ವಿದ್ಯುತ್, ನೀರು, ಗ್ಯಾಸಿನ ಸಂಪರ್ಕವನ್ನು ಕಡಿತಗೊಳಿಸಲಾಗುವುದು ಎಂದು ಸಿ ಆರ್ ಪಾಟೀಲ್ ನೇತೃತ್ವದ ಲೋಕಸಭೆ ಹೌಸಿಂಗ್ ಸಮಿತಿ ಆಗಸ್ಟ್ 19ರಂದೇ ಎಚ್ಚರಿಕೆ ನೀಡಿತ್ತು.

ಆದರೆ, ಸಮಿತಿ ಆದೇಶ ನೀಡಿದ್ದರೂ 82 ಮಾಜಿ ಸಂಸದರು ಇನ್ನೂ ಸರ್ಕಾರಿ ಅಧಿಕೃತ ಬಂಗಲೆಗಳನ್ನು ತೆರವುಗೊಳಿಸಿಲ್ಲ ಎಂದು ಮೂಲಗಳನ್ನು ಉಲ್ಲೇಖಿಸಿ ಪಿಟಿಐ ಸುದ್ದಿಸಂಸ್ಥೆ ವರದಿ ಮಾಡಿದೆ.

ಸರ್ಕಾರಿ ಬಂಗಲೆ ಖಾಲಿ ಮಾಡದ ಮಾಜಿ ಸಂಸದರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಲೋಕಸಭಾ ಹೌಸಿಂಗ್ ಸಮಿತಿ ಎಚ್ಚರಿಕೆ ನೀಡಿದೆ.  

ಮಾಜಿ ಸಂಸದರು ಸರ್ಕಾರಿ ಬಂಗಲೆ ತೆರವುಗೊಳಿಸಲಾಗಿದೆ ಮಾಜಿ ಸಂಸದರಿಗೆ ಸೂಚನೆ ನೀಡಲಾಗಿದೆ. ಆದಾಗ್ಯೂ, ಕೆಲವರು ಇನ್ನೂ ಖಾಲಿ ಮಾಡಿಲ್ಲ, ಇದನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ, ಅಂತಹವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಸಮಿತಿ ಹೇಳಿದೆ. 

2014ರಲ್ಲಿ ನೀಡಲಾಗಿರುವ ಸರ್ಕಾರಿ ಬಂಗಲೆಗಳನ್ನು ಖಾಲಿ ಮಾಡುವಂತೆ ಮಾಜಿ ಸಂಸದರಿಗೆ ನೋಟಿಸ್ ನೀಡಲಾಗಿದೆ. ಒಂದು ವೇಳೆ ಖಾಲಿ ಮಾಡದಿದ್ದಲ್ಲಿ ಸಾರ್ವಜನಿಕ ಆವರಣದಲ್ಲಿ ಅನಧಿಕೃತ ನಿವಾಸಿಗಳ ಹೊರಹಾಕುವಿಕೆ ಕಾಯ್ದೆಯಡಿ ಕ್ರಮ ಕೈಗೊಳ್ಳಲಾಗುವುದು ಎಂದು ಸಮಿತಿ ಎಚ್ಚರಿಕೆ ನೀಡಿದೆ ಎಂದು ತಿಳಿದುಬಂದಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT