ಸಂಸತ್ತು 
ದೇಶ

ಅಧಿಕೃತ ಸರ್ಕಾರಿ ಬಂಗಲೆ ಖಾಲಿ ಮಾಡದ 82 ಮಾಜಿ ಸಂಸದರು

ಲೋಕಸಭೆ ಹೌಸಿಂಗ್ ಸಮಿತಿಯ ಕಠಿಣ ಎಚ್ಚರಿಕೆಯ ನಡುವೆಯೂ ಇನ್ನು 82 ಮಾಜಿ ಸಂಸದರು ದೆಹಲಿಯ ಲುಟಿಯನ್ಸ್ ನ ಸರ್ಕಾರಿ ಅಧಿಕೃತ ಬಂಗಲೆಗಳನ್ನು ಖಾಲಿ ಮಾಡಿಲ್ಲ ಎಂಬುದು ಮೂಲಗಳಿಂದ ತಿಳಿದುಬಂದಿದೆ.

ನವದೆಹಲಿ: ಲೋಕಸಭೆ ಹೌಸಿಂಗ್ ಸಮಿತಿಯ ಕಠಿಣ ಎಚ್ಚರಿಕೆಯ ನಡುವೆಯೂ ಇನ್ನು 82 ಮಾಜಿ ಸಂಸದರು ದೆಹಲಿಯ ಲುಟಿಯನ್ಸ್ ನ ಸರ್ಕಾರಿ ಅಧಿಕೃತ ಬಂಗಲೆಗಳನ್ನು ಖಾಲಿ ಮಾಡಿಲ್ಲ ಎಂಬುದು ಮೂಲಗಳಿಂದ ತಿಳಿದುಬಂದಿದೆ.

ಇಂತಹ ಮಾಜಿ ಸಂಸದರನ್ನು ಆದಷ್ಟು ಬೇಗ ಹೊರಹಾಕಲು ಸಾರ್ವಜನಿಕ ಆವರಣದಲ್ಲಿ ಅನಧಿಕೃತ ನಿವಾಸಿಗಳ ಹೊರಹಾಕುವಿಕೆ ಕಾಯ್ದೆಯಡಿ ಕ್ರಮ ಕೈಗೊಳ್ಳಲು ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ತಿಳಿಸಿದೆ. 

ಮೂರು ದಿನಗಳೊಳಗೆ ಸರ್ಕಾರಿ ಬಂಗಲೆ ತೆರವುಗೊಳಿಸದಿದ್ದಲ್ಲಿ ವಿದ್ಯುತ್, ನೀರು, ಗ್ಯಾಸಿನ ಸಂಪರ್ಕವನ್ನು ಕಡಿತಗೊಳಿಸಲಾಗುವುದು ಎಂದು ಸಿ ಆರ್ ಪಾಟೀಲ್ ನೇತೃತ್ವದ ಲೋಕಸಭೆ ಹೌಸಿಂಗ್ ಸಮಿತಿ ಆಗಸ್ಟ್ 19ರಂದೇ ಎಚ್ಚರಿಕೆ ನೀಡಿತ್ತು.

ಆದರೆ, ಸಮಿತಿ ಆದೇಶ ನೀಡಿದ್ದರೂ 82 ಮಾಜಿ ಸಂಸದರು ಇನ್ನೂ ಸರ್ಕಾರಿ ಅಧಿಕೃತ ಬಂಗಲೆಗಳನ್ನು ತೆರವುಗೊಳಿಸಿಲ್ಲ ಎಂದು ಮೂಲಗಳನ್ನು ಉಲ್ಲೇಖಿಸಿ ಪಿಟಿಐ ಸುದ್ದಿಸಂಸ್ಥೆ ವರದಿ ಮಾಡಿದೆ.

ಸರ್ಕಾರಿ ಬಂಗಲೆ ಖಾಲಿ ಮಾಡದ ಮಾಜಿ ಸಂಸದರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಲೋಕಸಭಾ ಹೌಸಿಂಗ್ ಸಮಿತಿ ಎಚ್ಚರಿಕೆ ನೀಡಿದೆ.  

ಮಾಜಿ ಸಂಸದರು ಸರ್ಕಾರಿ ಬಂಗಲೆ ತೆರವುಗೊಳಿಸಲಾಗಿದೆ ಮಾಜಿ ಸಂಸದರಿಗೆ ಸೂಚನೆ ನೀಡಲಾಗಿದೆ. ಆದಾಗ್ಯೂ, ಕೆಲವರು ಇನ್ನೂ ಖಾಲಿ ಮಾಡಿಲ್ಲ, ಇದನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ, ಅಂತಹವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಸಮಿತಿ ಹೇಳಿದೆ. 

2014ರಲ್ಲಿ ನೀಡಲಾಗಿರುವ ಸರ್ಕಾರಿ ಬಂಗಲೆಗಳನ್ನು ಖಾಲಿ ಮಾಡುವಂತೆ ಮಾಜಿ ಸಂಸದರಿಗೆ ನೋಟಿಸ್ ನೀಡಲಾಗಿದೆ. ಒಂದು ವೇಳೆ ಖಾಲಿ ಮಾಡದಿದ್ದಲ್ಲಿ ಸಾರ್ವಜನಿಕ ಆವರಣದಲ್ಲಿ ಅನಧಿಕೃತ ನಿವಾಸಿಗಳ ಹೊರಹಾಕುವಿಕೆ ಕಾಯ್ದೆಯಡಿ ಕ್ರಮ ಕೈಗೊಳ್ಳಲಾಗುವುದು ಎಂದು ಸಮಿತಿ ಎಚ್ಚರಿಕೆ ನೀಡಿದೆ ಎಂದು ತಿಳಿದುಬಂದಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ