ಸಂಗ್ರಹ ಚಿತ್ರ 
ದೇಶ

ನಿರ್ಮಲಾಗೆ ಆರ್ಥಿಕತೆ ಬಗ್ಗೆ ಎಳ್ಳಷ್ಚೂ ಜ್ಞಾನವಿಲ್ಲ ಎಂದೆನಿಸುತ್ತದೆ: ಕಾಂಗ್ರೆಸ್ ಟೀಕೆ

ಆರ್ಥಿಕ ಸುಧಾರಣೆಗೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಘೋಷಣೆ ಮಾಡಿರುವ ಕ್ರಮಗಳು ಕೇವಲ ಅದನ್ನು 'ಕಾಸ್ಮೆಟಿಕ್' (ಅಂದಗೊಳಿಸುವ) ಪ್ರಯತ್ನವಷ್ಚೇ ಎಂದು ಕಾಂಗ್ರೆಸ್ ಟೀಕೆ ಮಾಡಿದೆ.

ಆರ್ಥಿಕ ಸುಧಾರಣೆಗೆ ವಿತ್ತ ಸಚಿವರ ಕ್ರಮಗಳು ಅಂದಗೊಳಿಸುವ ಪ್ರಯತ್ನವಷ್ಟೇ

ನವದೆಹಲಿ: ಆರ್ಥಿಕ ಸುಧಾರಣೆಗೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಘೋಷಣೆ ಮಾಡಿರುವ ಕ್ರಮಗಳು ಕೇವಲ ಅದನ್ನು 'ಕಾಸ್ಮೆಟಿಕ್' (ಅಂದಗೊಳಿಸುವ) ಪ್ರಯತ್ನವಷ್ಚೇ ಎಂದು ಕಾಂಗ್ರೆಸ್ ಟೀಕೆ ಮಾಡಿದೆ.

ಈ ಕುರಿತಂತೆ ಮಾತನಾಡಿರುವ ಕಾಂಗ್ರೆಸ್ ಮುಖಂಡ ಆನಂದ್ ಶರ್ಮಾ, ನಿರ್ಮಲಾ ಸೀತಾರಾಮನ್ ಗೆ ಆರ್ಥಿಕತೆ ಬಗ್ಗೆ ಎಳ್ಳಷ್ಚೂ ಜ್ಞಾನವಿಲ್ಲ ಎಂದೆನಿಸುತ್ತದೆ. ನಿರ್ಮಲಾಗೆ ಆರ್ಥಿಕ ಸಂಕಷ್ಟವನ್ನು ಹೇಗೆ ನಿಭಾಯಿಸಬೇಕು ಎಂಬುದು ತಿಳಿದಂತಿಲ್ಲ ಎಂದು ಟೀಕಿಸಿದ್ದಾರೆ. ನಿರ್ಮಲಾ ಕೈಗೊಂಡಿರುವ ಆರ್ಥಿಕ ಉತ್ತೇಜನ ಕ್ರಮಗಳು ನೈಜ ಸಮಸ್ಯೆಗಳಿಗೆ ಯಾವುದ ರೀತಿಯ ಲಾಭವಾಗುವುದಿಲ್ಲ. ಇನ್ನೂ ಸಮಸ್ಯೆ ಉಲ್ಬಣವಾಗಲಿದೆ ಎಂದು ಹೇಳಿದ್ದಾರೆ.

ಆರ್ಥಿಕ ಸಂಕಷ್ಟದ ಈ ಪರಿಸ್ಥಿತಿಯಲ್ಲಿ ನಾವು ಕೇಂದ್ರ ಸರ್ಕಾರದಿಂದ ಸಾಕಷ್ಚು ನಿರೀಕ್ಷಿಸಿದ್ದೆವು. ಆದರೆ ಅದು ಸುಳ್ಳಾಗಿದೆ. ನಿರ್ಮಲಾ ಕೈಗೊಂಡಿರುವ ಕ್ರಮಗಳು ಕೇವಲ ಕಾಸ್ಮೆಟಿಕ್ (ಅಂದಗೊಳಿಸುವ ಪ್ರಯತ್ನ)ವಾಗಿದ್ದು, ಇದು ಸರ್ಕಾರದ ದುರಹಂಕಾರದ ಪರಮಾವಧಿ ಎಂದು ಅನಂದ್ ಶರ್ಮಾ ಟೀಕಿಸಿದ್ದಾರೆ.

ಇನ್ನು ಆರ್ಥಿಕ ಹಿನ್ನಡೆಯನ್ನು ಪರೋಕ್ಷವಾಗಿ ಒಪ್ಪಿಕೊಂಡಿದ್ದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ಇದಕ್ಕಾಗಿ ಸುಮಾರು 70 ಸಾವಿರ ಆರ್ಥಿಕ ಪ್ಯಾಕೇಜ್ ಘೋಷಣೆ ಮಾಡಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ದಿನದ ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥರು ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟದ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

ಡೆವಿಲ್‌' ಸಿನಿಮಾದ 'ಇದ್ರೆ ನೆಮ್ಮದಿಯಾಗಿ ಇರಬೇಕು' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT