ಫಾರೂಖ್ ಅಬ್ದುಲ್ಲಾ 
ದೇಶ

ಸಾರ್ವಜನಿಕ ಸುರಕ್ಷತಾ ಕಾಯ್ದೆಯಡಿ ಫಾರೂಖ್ ಬಂಧನ: ಕಾಂಗ್ರೆಸ್ ಖಂಡನೆ

ಸಾರ್ವಜನಿಕ ಸುರಕ್ಷತಾ ಕಾಯ್ದೆಯಡಿಯಲ್ಲಿ ಜಮ್ಮು- ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಖ್ ಅಬ್ದುಲ್ಲಾ ಅವರನ್ನು ಬಂಧಿಸಿರುವುದನ್ನು ಕಾಂಗ್ರೆಸ್ ತೀವ್ರವಾಗಿ ಖಂಡಿಸಿದೆ. ದೇಶದ ಏಕತೆ ಹಾಗೂ ಸಮಗ್ರತೆಗಾಗಿ ಹೋರಾಡಿದ  ಇಂತಹ ನಾಯಕರನ್ನು ಬಂಧಿಸಿರುವುದು ದುರದೃಷ್ಟ ಎಂದು ಕಾಂಗ್ರೆಸ್ ಹೇಳಿದೆ. 

ನವದೆಹಲಿ:ಸಾರ್ವಜನಿಕ ಸುರಕ್ಷತಾ ಕಾಯ್ದೆಯಡಿಯಲ್ಲಿ ಜಮ್ಮು- ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಖ್ ಅಬ್ದುಲ್ಲಾ ಅವರನ್ನು ಬಂಧಿಸಿರುವುದನ್ನು ಕಾಂಗ್ರೆಸ್ ತೀವ್ರವಾಗಿ ಖಂಡಿಸಿದೆ. ದೇಶದ ಏಕತೆ ಹಾಗೂ ಸಮಗ್ರತೆಗಾಗಿ ಹೋರಾಡಿದ  ಇಂತಹ ನಾಯಕರನ್ನು ಬಂಧಿಸಿರುವುದು ದುರದೃಷ್ಟ ಎಂದು ಕಾಂಗ್ರೆಸ್ ಹೇಳಿದೆ. 

ಸಾರ್ವಜನಿಕ ಸುರಕ್ಷತಾ ಕಾಯ್ದೆಯಡಿ ಫಾರೂಖ್ ಅವರನ್ನು ಬಂಧಿಸಲಾಗಿದೆ. ಈ ಕಾಯ್ದೆ ಪ್ರಕಾರ ವಿಚಾರಣೆ ಇಲ್ಲದೆ ಎರಡು ವರ್ಷಗಳ ಕಾಲ ಬಂಧನದಲ್ಲಿಡಲು ಸಂಬಂಧಿಸಿದ ಸಂಸ್ಥೆಗಳಿಗೆ ಅಧಿಕಾರವಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪ್ರತಿಕ್ರಿಯೆ ನೀಡಿದೆಯ 

 ಜಮ್ಮು- ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ರದ್ದುಗೊಳಿಸಿ ಎರಡು ಕೇಂದ್ರಾಡಳಿತ ಪ್ರದೇಶಗಳನ್ನಾಗಿ ವಿಭಜನಿಸಿದ ನಂತರ ಆಗಸ್ಟ್  5 ರಿಂದಲೂ ನ್ಯಾಷನಲ್ ಕಾನ್ಫರೆನ್ಸ್ ಹಿರಿಯ ಮುಖಂಡ 81 ವರ್ಷದ ಫಾರೂಖ್ ಅಬ್ದುಲ್ಲಾ ಅವರನ್ನು ಗೃಹ ಬಂಧನದಲ್ಲಿ ಇರಿಸಲಾಗಿದೆ, 

ಕಾಶ್ಮೀರದ ಅತ್ಯಂತ ಹಳೆಯ ರಾಜಕೀಯ ಪಕ್ಷವೊಂದರ ಮುಖಂಡರು ಹಾಗೂ ಮಾಜಿ ಮುಖ್ಯಮಂತ್ರಿಯಾಗಿರುವ ಫಾರೂಖ್ ಅಬ್ದುಲ್ಲಾ ಅವರನ್ನು ಬಂಧಿಸಿರುವುದು ದುರದೃಷ್ಟಕರವಾಗಿದ್ದು, ತೀವ್ರವಾಗಿ ಖಂಡಿಸುವುದಾಗಿ ರಾಜ್ಯಸಭೆಯಲ್ಲಿನ ಪ್ರತಿಪಕ್ಷಗಳ ನಾಯಕ ಗುಲಾಂ ನಬೀ ಅಜಾದ್ ಹೇಳಿದ್ದಾರೆ.

ಜಮ್ಮು- ಕಾಶ್ಮೀರದಲ್ಲಿನ ನ್ಯಾಷನಲ್ ಕಾನ್ಫರೆನ್ಸ್ ಹಾಗೂ ಪಿಡಿಪಿ , ಕಾಂಗ್ರೆಸ್ ಉಗ್ರರ ವಿರುದ್ಧ ಹೋರಾಡಿವೆ.  ಇಂದು ಉಗ್ರರ ಉಪಟಳ ಕಡಿಮೆಯಾಗಿರುವುದಕ್ಕೆ ಈ ಪಕ್ಷಗಳೇ ಕಾರಣ ಹೊರತು ಬಿಜೆಪಿ ಅಲ್ಲ ಎಂದಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel