ಸಂಗ್ರಹ ಚಿತ್ರ 
ದೇಶ

ಭಾರತ-ಚೀನಾ ಸೇನಾ ಮಧ್ಯೆ ಚಕಮಕಿ ನಡೆದಿಲ್ಲ, ಮುಖಾಮುಖಿಯಾಗಿದೆಯಷ್ಟೇ: ಜೈಶಂಕರ್

ಲಡಾಖ್"ನ ಪ್ಯಾಂಗಾಂಗ್ನಲ್ಲಿ ಭಾರತ ಹಾಗೂ ಚೀನಾ ಸೇನಾ ನಡುವೆ ಯಾವುದೇ ಚಕಮಕಿಗಳೂ ನಡೆದಿಲ್ಲ, ಸೇನೆಗಳು ಮುಖಾಮುಖಿಯಾಗಿವೆ ಎಂದು ಕೇಂದ್ರ ವಿದೇಶಾಂಗ ಸಚಿವ ಎಸ್.ಜೈಶಂಕರ್ ಅವರು ಮಂಗಳವಾರ ಹೇಳಿದ್ದಾರೆ.

ನವದೆಹಲಿ: ಲಡಾಖ್"ನ ಪ್ಯಾಂಗಾಂಗ್ನಲ್ಲಿ ಭಾರತ ಹಾಗೂ ಚೀನಾ ಸೇನಾ ನಡುವೆ ಯಾವುದೇ ಚಕಮಕಿಗಳೂ ನಡೆದಿಲ್ಲ, ಸೇನೆಗಳು ಮುಖಾಮುಖಿಯಾಗಿವೆ ಎಂದು ಕೇಂದ್ರ ವಿದೇಶಾಂಗ ಸಚಿವ ಎಸ್.ಜೈಶಂಕರ್ ಅವರು ಮಂಗಳವಾರ ಹೇಳಿದ್ದಾರೆ. 
 
ಭಾರತ ಹಾಗೂ ಚೀನಾ ನಡುವೆ ನಡೆದಿದ್ದ ಮುಖಾಮುಖಿ ಪ್ರಕರಣ ಸುಖಾಂತ್ಯ ಕಂಡಿದೆ. ಗಡಿ ನಿಯಂತ್ರಣ ರೇಖೆ ವಿಚಾರದಲ್ಲಿ ಉಭಯ ರಾಷ್ಟ್ರಗಳ ಸೇನೆ ನಡುವೆ ಭಿನ್ನಾಭಿಪ್ರಾಯ ಉಂಟಾಗಿತ್ತು. ಆದರೆ, ಸೂಕ್ತ ರೀತಿಯಲ್ಲಿ ಪರಿಸ್ಥಿತಿ ನಿಭಾಯಿಸಿದ್ದೇವೆಂದು ಹೇಳಿದ್ದಾರೆ. 

ಕೆಲ ದಿನಗಳ ಹಿಂದಷ್ಟೇ ಜಮ್ಮು ಮತ್ತು ಕಾಶ್ಮೀರದ ಲಡಾಖ್ ನಲ್ಲಿರುವ ಪ್ಯಾಂಗಾಂಗ್ ಸರೋವರದ ಬಳಿ ಭಾರತ ಮತ್ತು ಚೀನಾ ಸೇನೆ ನಡುವೆ ಸಂಘರ್ಷ ಏರ್ಪಟ್ಟಿತ್ತು ಎಂದು ವರದಿಗಳು ಕೇಳಿ ಬಂದಿದ್ದವು. 

ಪ್ಯಾಂಗಾಂಗ್ ಸರೋವರದ ಬಳಿ ವಾಸ್ತವಿಕ ಗಡಿ ರೇಖೆಯ ಬಳಿ ಭಾರತೀಯ ಸೇನೆ ಗಸ್ತು ತಿರುತ್ತಿದ್ದ ವೇಳೆ ಚೀನಾ ಸೈನಿಕರು ಆಕ್ಷೇಪ ವ್ಯಕ್ತಪಡಿಸಿದ್ದರು. ಬಳಿಕ ಉಭಯ ಸೇನೆಗಳ ನಡುವೆ ಸಂಘರ್ಷ ಏರ್ಪಟ್ಟು, ಕೆಲ ಕಾಲ ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು. ಈ ವಾತಾವರಣ ಸಂಜೆಯವರೆಗೂ ಹಾಗೆಯೇ ಮುಂದುವರೆದಿತ್ತು. ಬಳಿಕ ಉಭಯ ಸೇನೆಗಳು ಹೆಚ್ಚುವರಿ ಸೈನಿಕರನ್ನು ಸ್ಥಳಕ್ಕೆ ಕರೆಸಿಕೊಂಡಿತ್ತು. ಸಂಜೆ ವೇಳೆಗೆ ಭಾರತ ಮತ್ತು ಚೀನಾ ಸೇನೆಯ ಅಧಿಕಾರಿಗಳು ಸಭೆ ನಡೆಸಿ, ಸಮಸ್ಯೆಯನ್ನು ಬಗೆಹರಿಸಿದ್ದರು. 

ಪ್ಯಾಂಗಾಂಗ್ ಸರೋವರದ ಬಳಿ ಈ ಹಿಂದೆ ಕೂಡ ಚೀನಾ ಇದೇ ರೀತಿ ಕ್ಯಾತೆ ತೆಗೆದಿತ್ತು. 2017ರ ಆಗಸ್ಟ್ 15ರಂದು ಚೀನಾ ಸೇನೆ ಭಾರತದ ಗಡಿಯೊಳಗೆ ಅತಿಕ್ರಮ ಪ್ರವೇಶ ಮಾಡಲು ಯತ್ನಿಸಿತ್ತು. ಈ ವೇಳೆ ಭಾರತೀಯ ಸೇನೆ ಚೀನಾ ಸೈನಿಕರನ್ನು ತಡೆದಿದ್ದರು. ಬಳಿಕ ಸ್ಥಳದಲ್ಲಿ ಉಭಯ ದೇಶಗಳ ಸೈನಿಕರು ಕಲ್ಲು ತೂರಾಟ ನಡೆಸಿದ್ದರಲ್ಲದೆ, ಪರಸ್ಪರ ತಳ್ಳಾಡಿಕೊಂಡಿದ್ದರು. ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT