ಸಂಗ್ರಹ ಚಿತ್ರ 
ದೇಶ

ಭಾರತ-ಚೀನಾ ಸೇನಾ ಮಧ್ಯೆ ಚಕಮಕಿ ನಡೆದಿಲ್ಲ, ಮುಖಾಮುಖಿಯಾಗಿದೆಯಷ್ಟೇ: ಜೈಶಂಕರ್

ಲಡಾಖ್"ನ ಪ್ಯಾಂಗಾಂಗ್ನಲ್ಲಿ ಭಾರತ ಹಾಗೂ ಚೀನಾ ಸೇನಾ ನಡುವೆ ಯಾವುದೇ ಚಕಮಕಿಗಳೂ ನಡೆದಿಲ್ಲ, ಸೇನೆಗಳು ಮುಖಾಮುಖಿಯಾಗಿವೆ ಎಂದು ಕೇಂದ್ರ ವಿದೇಶಾಂಗ ಸಚಿವ ಎಸ್.ಜೈಶಂಕರ್ ಅವರು ಮಂಗಳವಾರ ಹೇಳಿದ್ದಾರೆ.

ನವದೆಹಲಿ: ಲಡಾಖ್"ನ ಪ್ಯಾಂಗಾಂಗ್ನಲ್ಲಿ ಭಾರತ ಹಾಗೂ ಚೀನಾ ಸೇನಾ ನಡುವೆ ಯಾವುದೇ ಚಕಮಕಿಗಳೂ ನಡೆದಿಲ್ಲ, ಸೇನೆಗಳು ಮುಖಾಮುಖಿಯಾಗಿವೆ ಎಂದು ಕೇಂದ್ರ ವಿದೇಶಾಂಗ ಸಚಿವ ಎಸ್.ಜೈಶಂಕರ್ ಅವರು ಮಂಗಳವಾರ ಹೇಳಿದ್ದಾರೆ. 
 
ಭಾರತ ಹಾಗೂ ಚೀನಾ ನಡುವೆ ನಡೆದಿದ್ದ ಮುಖಾಮುಖಿ ಪ್ರಕರಣ ಸುಖಾಂತ್ಯ ಕಂಡಿದೆ. ಗಡಿ ನಿಯಂತ್ರಣ ರೇಖೆ ವಿಚಾರದಲ್ಲಿ ಉಭಯ ರಾಷ್ಟ್ರಗಳ ಸೇನೆ ನಡುವೆ ಭಿನ್ನಾಭಿಪ್ರಾಯ ಉಂಟಾಗಿತ್ತು. ಆದರೆ, ಸೂಕ್ತ ರೀತಿಯಲ್ಲಿ ಪರಿಸ್ಥಿತಿ ನಿಭಾಯಿಸಿದ್ದೇವೆಂದು ಹೇಳಿದ್ದಾರೆ. 

ಕೆಲ ದಿನಗಳ ಹಿಂದಷ್ಟೇ ಜಮ್ಮು ಮತ್ತು ಕಾಶ್ಮೀರದ ಲಡಾಖ್ ನಲ್ಲಿರುವ ಪ್ಯಾಂಗಾಂಗ್ ಸರೋವರದ ಬಳಿ ಭಾರತ ಮತ್ತು ಚೀನಾ ಸೇನೆ ನಡುವೆ ಸಂಘರ್ಷ ಏರ್ಪಟ್ಟಿತ್ತು ಎಂದು ವರದಿಗಳು ಕೇಳಿ ಬಂದಿದ್ದವು. 

ಪ್ಯಾಂಗಾಂಗ್ ಸರೋವರದ ಬಳಿ ವಾಸ್ತವಿಕ ಗಡಿ ರೇಖೆಯ ಬಳಿ ಭಾರತೀಯ ಸೇನೆ ಗಸ್ತು ತಿರುತ್ತಿದ್ದ ವೇಳೆ ಚೀನಾ ಸೈನಿಕರು ಆಕ್ಷೇಪ ವ್ಯಕ್ತಪಡಿಸಿದ್ದರು. ಬಳಿಕ ಉಭಯ ಸೇನೆಗಳ ನಡುವೆ ಸಂಘರ್ಷ ಏರ್ಪಟ್ಟು, ಕೆಲ ಕಾಲ ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು. ಈ ವಾತಾವರಣ ಸಂಜೆಯವರೆಗೂ ಹಾಗೆಯೇ ಮುಂದುವರೆದಿತ್ತು. ಬಳಿಕ ಉಭಯ ಸೇನೆಗಳು ಹೆಚ್ಚುವರಿ ಸೈನಿಕರನ್ನು ಸ್ಥಳಕ್ಕೆ ಕರೆಸಿಕೊಂಡಿತ್ತು. ಸಂಜೆ ವೇಳೆಗೆ ಭಾರತ ಮತ್ತು ಚೀನಾ ಸೇನೆಯ ಅಧಿಕಾರಿಗಳು ಸಭೆ ನಡೆಸಿ, ಸಮಸ್ಯೆಯನ್ನು ಬಗೆಹರಿಸಿದ್ದರು. 

ಪ್ಯಾಂಗಾಂಗ್ ಸರೋವರದ ಬಳಿ ಈ ಹಿಂದೆ ಕೂಡ ಚೀನಾ ಇದೇ ರೀತಿ ಕ್ಯಾತೆ ತೆಗೆದಿತ್ತು. 2017ರ ಆಗಸ್ಟ್ 15ರಂದು ಚೀನಾ ಸೇನೆ ಭಾರತದ ಗಡಿಯೊಳಗೆ ಅತಿಕ್ರಮ ಪ್ರವೇಶ ಮಾಡಲು ಯತ್ನಿಸಿತ್ತು. ಈ ವೇಳೆ ಭಾರತೀಯ ಸೇನೆ ಚೀನಾ ಸೈನಿಕರನ್ನು ತಡೆದಿದ್ದರು. ಬಳಿಕ ಸ್ಥಳದಲ್ಲಿ ಉಭಯ ದೇಶಗಳ ಸೈನಿಕರು ಕಲ್ಲು ತೂರಾಟ ನಡೆಸಿದ್ದರಲ್ಲದೆ, ಪರಸ್ಪರ ತಳ್ಳಾಡಿಕೊಂಡಿದ್ದರು. ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT