ಸಾಂದರ್ಭಿಕ ಚಿತ್ರ 
ದೇಶ

ಮಾಟ-ಮಂತ್ರ ಮಾಡಿದ ಶಂಕೆ: ಆಟೋ ಡ್ರೈವರ್ ನನ್ನು ಚಿತೆಗೆ ಎಸೆದ ಗ್ರಾಮಸ್ತರು!

ಮಾಟಮಂತ್ರ ಮಾಡಿಸಿದ ಪರಿಣಾಮ ಮಹಿಳೆ ಸಾವನ್ನಪ್ಪಿದ್ದಾರೆಂದು ವ್ಯಕ್ತಿಯೊಬ್ಬರ ಮೇಲೆ ಅನುಮಾನಗೊಂಡ ಗ್ರಾಮಸ್ಥರು ಮಹಿಳೆಯ ಚಿತೆಯೊಂದಿಗೆಯೇ ವ್ಯಕ್ತಿಯನ್ನೂ ಜೀವಂತವಾಗಿ ಸುಟ್ಟು ಹಾಕಿರುವ ಘಟನೆಯೊಂದು ಹೈದರಾಬಾದ್'ನ ಅದ್ರಸ್ಪಲ್ಲಿ ಗ್ರಾಮದಲ್ಲಿ ನಡೆದಿದೆ. 

ಹೈದರಾಬಾದ್: ಮಾಟಮಂತ್ರ ಮಾಡಿಸಿದ ಪರಿಣಾಮ ಮಹಿಳೆ ಸಾವನ್ನಪ್ಪಿದ್ದಾರೆಂದು ವ್ಯಕ್ತಿಯೊಬ್ಬರ ಮೇಲೆ ಅನುಮಾನಗೊಂಡ ಗ್ರಾಮಸ್ಥರು ಮಹಿಳೆಯ ಚಿತೆಯೊಂದಿಗೆಯೇ ವ್ಯಕ್ತಿಯನ್ನೂ ಜೀವಂತವಾಗಿ ಸುಟ್ಟು ಹಾಕಿರುವ ಘಟನೆಯೊಂದು ಹೈದರಾಬಾದ್'ನ ಅದ್ರಸ್ಪಲ್ಲಿ ಗ್ರಾಮದಲ್ಲಿ ನಡೆದಿದೆ. 

ಬೊಯಿನಿ ಆಂಜನೇಯುಲು ಸಾವನ್ನಪ್ಪಿದ್ದ ವ್ಯಕ್ತಿಯಾಗಿದ್ದಾನೆ. ಆಟೋ ಚಾಲಕನಾಗಿರುವ ಈತ ಹಲವು ದಿನಗಳಿಂದ ನಾಪತ್ತೆಯಾಗಿದ್ದು, ಪೊಲೀಸರು ಹುಡುಕಾಟ ನಡೆಸಿದ್ದರು. 

ಗ್ಯಾರ ಲಕ್ಷ್ಮಿ ಎಂಬ ಮಹಿಳೆ ಮೇಲೆ ಆಂಜನೇಯುಲು ಮಾಟಮಂಟ್ರ ಮಾಡಿಸಿದ ಪರಿಣಾಮ ತಿಂಗಳುಗಳಿಂದ ಅನಾರೋಗ್ಯಕ್ಕೀಡಾಗಿದ್ದ ಮಹಿಳೆ, ನಂತರ ಸಾವನ್ನಪ್ಪಿದ್ದಾಳೆಂದು ಹೇಳಲಾಗುತ್ತಿತ್ತು. ಇದನ್ನು ಅರಿತ ಗ್ರಾಮಸ್ಥರು ಕೆಂಡಾಮಂಡಲಗೊಂಡು ಅಂತ್ಯ ಸಂಸ್ಕಾರದ ವೇಳೆ ಸ್ಥಳದಲ್ಲಿದ್ದ ಆಂಜನೇಯುಲುನನ್ನು ಥಳಿಸಿ ಮಹಿಳೆಯ ಚಿತೆ ಮೇಲೆಯೇ ಸಜೀವವಾಗಿ ಸುಟ್ಟು ಹಾಕಿದ್ದಾರೆ. 

ಘಟನೆಯ ಮಾಹಿತಿ ತಿಳಿದ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ತನಿಖೆ ಆರಂಭಿಸಿದ್ದಾರೆ. 

ಆಂಜನೇಯುಲು ಎಲ್ಲಿದ್ದಾರೆಂಬುದು ಯಾರಿಗೂ ತಿಳಿದಿಲ್ಲ. ಊರಿನಲ್ಲಿಯೂ ಎಲ್ಲಿಯೂ ಕಾಣುತ್ತಿಲ್ಲ. ಆದರೆ, ಅಂತ್ಯ ಸಂಸ್ಕಾರ ನಡೆದ ಸ್ಥಳದಲ್ಲಿ ವ್ಯಕ್ತಿಯ ಪಾದರಕ್ಷೆಗಳು ದೊರೆತಿವೆ ಎಂದು ಆತನ ಸಂಬಂಧಿಕರು ಹೇಳುತ್ತಿದ್ದಾರೆ. ಮತ್ತಷ್ಟು ಮಾಹಿತಿಗಾಗಿ ಗ್ರಾಮದಲ್ಲಿಯೇ ವಿಚಾರಣೆ ನಡೆಸಲಾಗುತ್ತಿದೆ. ತನಿಖೆ ಪ್ರಗತಿಯಲ್ಲಿದೆ ಎಂದು ಶಮೀರ್ಪೇಟ್ ಪೊಲೀಸ್ ಅಧಿಕಾರಿ ಬಿ.ನವೀನ್ ರೆಡ್ಡಿ ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT