ಸಂಗ್ರಹ ಚಿತ್ರ 
ದೇಶ

ಉದ್ಯೋಗ ಭದ್ರತೆ ಆಗ್ರಹಿಸಿ ಅ 22 ರಂದು ಬ್ಯಾಂಕ್ ಮುಷ್ಕರ

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅಕ್ಟೋಬರ್ 22 ರಂದು ಮುಷ್ಕರ ನಡೆಸುವುದಾಗಿ ಭಾರತೀಯ ಬ್ಯಾಂಕ್ ಸಂಘ (ಐಬಿಎ) ಅಧ್ಯಕ್ಷ ಸುನಿಲ್ ಮೆಹ್ತಾ ಮತ್ತು ಕೇಂದ್ರ ಮುಖ್ಯ ಕಾರ್ಮಿಕ ಆಯುಕ್ತ ರಾಜನ್ ವರ್ಮಾ ಅವರುಗಳಿಗೆ ಅಖಿಲ ಭಾರತ ಬ್ಯಾಂಕ್ ಉದ್ಯೋಗಿಗಳ ಸಂಘ (ಎಐಬಿಇಎ) ಮತ್ತು ಭಾರತದ ಬ್ಯಾಂಕ್ ಉದ್ಯೋಗಿಗಳ ಒಕ್ಕೂಟ (ಬಿಇಎಫ್ಐ) ತಿಳಿಸಿದೆ.

ಹೈದರಾಬಾದ್: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅಕ್ಟೋಬರ್ 22 ರಂದು ಮುಷ್ಕರ ನಡೆಸುವುದಾಗಿ ಭಾರತೀಯ ಬ್ಯಾಂಕ್ ಸಂಘ (ಐಬಿಎ) ಅಧ್ಯಕ್ಷ ಸುನಿಲ್ ಮೆಹ್ತಾ ಮತ್ತು ಕೇಂದ್ರ ಮುಖ್ಯ ಕಾರ್ಮಿಕ ಆಯುಕ್ತ ರಾಜನ್ ವರ್ಮಾ ಅವರುಗಳಿಗೆ ಅಖಿಲ ಭಾರತ ಬ್ಯಾಂಕ್ ಉದ್ಯೋಗಿಗಳ ಸಂಘ (ಎಐಬಿಇಎ) ಮತ್ತು ಭಾರತದ ಬ್ಯಾಂಕ್ ಉದ್ಯೋಗಿಗಳ ಒಕ್ಕೂಟ (ಬಿಇಎಫ್ಐ) ತಿಳಿಸಿದೆ.

ಆರು ಪ್ರಮುಖ ಬೇಡಿಕೆಗಾಳಾದ – ಬ್ಯಾಂಕಿಂಗ್ ಸುಧಾರಣಾ ಕ್ರಮದ ನೆಪದಲ್ಲಿ ಬ್ಯಾಂಕ್ ಗಳ ವಿಲೀನ ತಡೆ, ಕೆಟ್ಟ ಸಾಲಗಳ ವಾಪಸಾತಿ ಖಾತರಿ, ಸುಸ್ತಿದಾರರ ವಿರುದ್ಧ ಕಠಿಣ ಕ್ರಮ - ಗ್ರಾಹಕರಿಗೆ ದಂಡದಂತಹ ಕಿರುಕುಳ ತಡೆ, ಸೇವಾ ಶುಲ್ಕ ಹೆಚ್ಚಳ ನಿಯಂತ್ರಣ, ಠೇವಣಿಗಳ ಮೇಲಿನ ಬಡ್ಡಿ ದರ ಹೆಚ್ಚಳ, ಉದ್ಯೋಗ ಭದ್ರತೆಗೆ ಆಗ್ರಹಿಸಿ ಅ 22 ರ ಬೆಳಗ್ಗೆ 6 ರಿಂದ ಅ 23 ರ ಬೆಳಗ್ಗೆ 6 ಗಂಟೆವರೆಗೆ ಮುಷ್ಕರ ನಡೆಸಲಾಗುವುದು ಎಂದು ಎಐಬಿಎ ಪ್ರಧಾನ ಕಾರ್ಯದರ್ಶಿ ವೆಂಕಟಾಚಲಂ ಮತ್ತು ಬಿಇಎಫ್ಐ ಪ್ರಧಾನ ಕಾರ್ಯದರ್ಶಿ ದೆಬಾಶಿಶ್ ಬಸು ಚೌಧರಿ ಹೇಳಿದ್ದಾರೆ.

ಸೆ.30 ರಂದು ಸಿಬ್ಬಂದಿ ಕಪ್ಪು ಪಟ್ಟಿ ಧರಿಸಲಿದ್ದಾರೆ, ಅ 4 ರಂದು ಎಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ, ಅ 14 ರಂದು ಮುಂಬೈ, ದೆಹಲಿ, ಕೋಲ್ಕತಾ, ಚೆನ್ನೈ, ಹೈದರಾಬಾದ್, ಬೆಂಗಳೂರು ಮತ್ತು ಮಂಗಳೂರಿನಲ್ಲಿ ಧರಣಿ ಮತ್ತು ಅ 21 ರಂದು ಎಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ವೆಂಕಟಾಚಲಂ ಯುಎನ್ಐ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

Afghan-Pak War: 'ಅಲ್ಲಾ ಕಾಪಾಡು' ಅಫ್ಘಾನ್ ಪ್ರತೀಕಾರದ ದಾಳಿ; ಆಗಸದೆತ್ತರಕ್ಕೆ ಚಿಮ್ಮಿದ ಪಾಕ್ ಸೈನಿಕರ ಶವಗಳು, ಗಡಿಯಿಂದ ಕಾಲ್ಕಿತ್ತ ಸೇನೆ, Video

ಯಾವುದೇ ಸಿದ್ಧಾಂತ ಅಥವಾ ಅಜೆಂಡಾವನ್ನು ಪ್ರಚಾರ ಮಾಡುತ್ತಿಲ್ಲ; 'ಕಾಂತಾರ: ಚಾಪ್ಟರ್ 1' ಕುರಿತು ರಿಷಬ್ ಶೆಟ್ಟಿ

'ಆಕೆ ಮಧ್ಯರಾತ್ರಿ 12.30ಕ್ಕೆ ಹೇಗೆ ಹೊರಬಂದಳು?': ಗ್ಯಾಂಗ್ ರೇಪ್ ಕುರಿತು ಮಮತಾ ಬ್ಯಾನರ್ಜಿ ಹೇಳಿಕೆ

ಹಾಸನಾಂಬ ದರ್ಶನಕ್ಕೆ ಭಕ್ತರ ಸಂಖ್ಯೆ ಹೆಚ್ಚಳ: ಎರಡೇ ದಿನಗಳಲ್ಲಿ ರೂ. 2.24 ಕೋಟಿ ಆದಾಯ, ಆರು ಸಿಬ್ಬಂದಿ ಅಮಾನತು!

SCROLL FOR NEXT