ದೇಶ

ಪ್ರಧಾನಿ ವಿರುದ್ಧದ ಅವಹೇಳನಕಾರಿ ಹೇಳಿಕೆ: ಮಣಿಶಂಕರ್ ಅಯ್ಯರ್ ಗೆ ಕ್ಲೀನ್ ಚಿಟ್ 

Srinivas Rao BV

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಎರಡು ಪ್ರಕರಣಗಳಲ್ಲಿ ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಗೆ ಕ್ಲೀನ್ ಚಿಟ್ ನೀಡಲಾಗಿದೆ.
 
ದೆಹಲಿ ಪೊಲೀಸರು ಮಣಿಶಂಕರ್ ಅಯ್ಯರ್ ಗೆ ಕ್ಲೀನ್ ಚಿಟ್ ನೀಡಿದ್ದಾರೆ. ಇದೇ ವೇಳೆ ಶಿಷ್ಟಾಚಾರ ಪಾಲಿಸದೇ ಪಾಕಿಸ್ತಾನದ ಅಧಿಕಾರಿಗಳನ್ನು ಭೇಟಿ ಮಾಡಿದ್ದ ಪ್ರಕರಣದಲ್ಲಿಯೂ ಕ್ಲೀನ್ ಚಿಟ್ ನೀಡಲಾಗಿದೆ.

ಮಣಿಶಂಕರ್ ಅಯ್ಯರ್ ವಿರುದ್ಧ ಅಡ್ವೊಕೇಟ್ ಹಾಗೂ ರಾಜಕಾರಣಿ ಅಜಯ್ ಅಗರ್ವಾಲ್, ಪ್ರಕರಣ ದಾಖಲಿಸಿದ್ದರು. ಆದರೆ ಪೊಲೀಸ್ ಇಲಾಖೆ ಎಟಿಆರ್ ನಲ್ಲಿ ಮಣಿಶಂಕರ್ ಅಯ್ಯರ್ ವಿರುದ್ಧದ ಪ್ರಕರಣಗಳನ್ನು ಕೈಬಿಡುವಂತೆ ಸೂಚನೆ ನೀಡಿದೆ. 

ಮಣಿಶಂಕರ್ ಅಯ್ಯರ್ ಉದ್ದೇಶಪೂರ್ವಕವಾಗಿ ಪ್ರಧಾನಿ ವಿರುದ್ಧ ಅವಹೇಳನಕಾರಿ ಪದ ಬಳಕೆ ಮಾಡಿಲ್ಲ ಆದ್ದರಿಂದ ಮಣಿಶಂಕರ್ ಅಯ್ಯರ್ ವಿರುದ್ಧ ದೇಶದ್ರೋಹ ಅಥವಾ ಅವಹೇಳನಕಾರಿ ಹೇಳಿಕೆಯ ಆರೋಪ ಹೊರಿಸಲು ಸಾಧ್ಯವಿಲ್ಲ ಎಂದು ಕೋರ್ಟ್ ಗೆ ತಿಳಿಸಲಾಗಿದೆ. 2017 ರ ಡಿ.7 ರಂದು ನೀಚ್ ಆದ್ಮಿ ಎಂಬ ಹೇಳಿಕೆ ನೀಡಿದ್ದ ಮಣಿಶಂಕರ್ ಅಯ್ಯರ್ ಅವರನ್ನು ಕಾಂಗ್ರೆಸ್ ಪಕ್ಷದಿಂದ ಉಚ್ಚಾಟನೆ ಮಾಡಲಾಗಿತ್ತು. 2018 ರ ಆ.18 ರಂದು ಅವರ ಅಮಾನತು ಆದೇಶವನ್ನು ಕಾಂಗ್ರೆಸ್ ಹಿಂಪಡೆದಿತ್ತು.

SCROLL FOR NEXT