ಇಲ್ತಿಜ-ಮೆಹಬೂಬಾ ಮುಫ್ತಿ 
ದೇಶ

ಮಿ. ಮೋದಿ, ನಿಮ್ಮ ತಾಯಿನ ಭೇಟಿಯಾದ್ರಿ, ನನಗೆ ಯಾಕೆ ಆ ಅವಕಾಶವಿಲ್ಲ: ಮೆಹಬೂಬಾ ಪುತ್ರಿ ಇಲ್ತಿಜ ಪ್ರಶ್ನೆ

ಮಿಸ್ಟರ್ ನರೇಂದ್ರ ಮೋದಿ ನೀವು ನಿಮ್ಮ ತಾಯಿಯನ್ನು ಭೇಟಿಯಾದಿರೀ, ಆದರೆ ನಮಗೆ ಯಾಕೆ ಆ ಅವಕಾಶವಿಲ್ಲ ಎಂದು ಮಾಜಿ ಸಿಎಂ ಮೆಹಬೂಬಾ ಮುಫ್ತಿ ಪುತ್ರಿ ಇಲ್ತಿಜ ಪ್ರಶ್ನೆ ಮಾಡಿದ್ದಾರೆ.

ಮುಂಬೈ: ಮಿಸ್ಟರ್ ನರೇಂದ್ರ ಮೋದಿ ನೀವು ನಿಮ್ಮ ತಾಯಿಯನ್ನು ಭೇಟಿಯಾದಿರೀ, ಆದರೆ ನಮಗೆ ಯಾಕೆ ಆ ಅವಕಾಶವಿಲ್ಲ ಎಂದು ಮಾಜಿ ಸಿಎಂ ಮೆಹಬೂಬಾ ಮುಫ್ತಿ ಪುತ್ರಿ ಇಲ್ತಿಜ ಪ್ರಶ್ನೆ ಮಾಡಿದ್ದಾರೆ. 

ಚಂದ್ರಯಾನ 2 ವಿಫಲವಾದಾಗ ಇಡೀ ಭಾರತವೇ ಶೋಕಿಸಿತ್ತು. ಆದರೆ ಕಾಶ್ಮೀರದ ಈ ದುಃಸ್ಥಿತಿಗೆ ಮರುಗುವವರೇ ಇಲ್ಲ. ಕಾಶ್ಮೀರಿಗರು ಆಘಾತ ಮತ್ತು ದ್ರೋಹದ ಆಳವಾದ ನೋವನ್ನು ಅನುಭವಿಸುತ್ತಿದ್ದಾರೆ ಎಂದರು.

ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನ(ಆರ್ಟಿಕಲ್ 370) ರದ್ದುಗೊಳಿಸಿ ನೀವು ಉಂಟು ಮಾಡಿರುವ ನೋವನ್ನು ಹೇಗೆ ಪರಿಹರಿಸುತ್ತೀರಿ. 370ನೇ ವಿಧಿ ರದ್ದತಿ ಬಳಿಕ ನಮ್ಮ ತಾಯಿ ಬಂಧನದಲ್ಲಿದ್ದಾರೆ ಎಂದು ಇಲ್ತಿಜ ಹೇಳಿದ್ದಾರೆ. 

ಆರ್ಟಿಕಲ್ 370 ರದ್ಧತಿಯಿಂದ ಕಾಶ್ಮೀರದ ಅಭಿವೃದ್ಧಿ ಮತ್ತು ಮಹಿಳೆಯರ ವಿಮೋಚನೆಗೆ ನೆರವಾಗುತ್ತದೆ ಎಂದು ಬಿಜೆಪಿ ಹೇಳುತ್ತಿದೆ. ಆದರೆ ದೇಶದ ಏಕೈಕ ಮುಸ್ಲಿಂ ಬಹುಸಂಖ್ಯಾತ ರಾಜ್ಯದಲ್ಲಿ ಜನಸಂಖ್ಯೆ ಬದಲಾವಣೆಗೆ ಈ ಕ್ರಮವನ್ನು ತೆಗೆದುಕೊಳ್ಳಲಾಗಿದೆ ಎಂದು ಇಲ್ತಿಜ ಆರೋಪಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಡಿಕೆಶಿ RSS ಗೀತೆ ಹೇಳಿದ್ದೂ ರಾಹುಲ್‌ ಗಾಂಧಿಗೆ ತಲುಪಲಿ: ಶಾಕ್ ಕೊಟ್ಟ ಸತೀಶ್‌ ಜಾರಕಿಹೊಳಿ ಹೇಳಿಕೆ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

SCROLL FOR NEXT