ವೆಂಕಯ್ಯ ನಾಯ್ಡು 
ದೇಶ

ಹೆಚ್ಚು ಭಾಷೆ ಕಲಿಯಿರಿ, ಮಾತೃ ಭಾಷೆ ಮರೆಯದಿರಿ: ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು

ಜನರು ಸಾಧ್ಯವಾದಷ್ಟು ಹೆಚ್ಚು ಭಾಷೆಗಳನ್ನು ಕಲಿಯಬೇಕು ಯಾವುದೇ ಭಾಷೆಯನ್ನು ಬಲವಂತವಾಗಿ ಹೇರಬಾರದು,ಅದೆ ರೀತಿ ಯಾವುದೇ ನಿರ್ದಿಷ್ಟ ಭಾಷೆಯ ವಿರುದ್ಧ ಕಠಿಣ ವಿರೋಧವೂ ಇರಬಾರದು ಎಂದು ಉಪರಾಷ್ಟಪತಿ ಎಂ.ವೆಂಕಯ್ಯ ನಾಯ್ಡು ಅವರು ಕರೆ ನೀಡಿದ್ದಾರೆ.

ನವದೆಹಲಿ: ಜನರು ಸಾಧ್ಯವಾದಷ್ಟು ಹೆಚ್ಚು ಭಾಷೆಗಳನ್ನು ಕಲಿಯಬೇಕು ಯಾವುದೇ ಭಾಷೆಯನ್ನು ಬಲವಂತವಾಗಿ ಹೇರಬಾರದು,ಅದೆ ರೀತಿ ಯಾವುದೇ ನಿರ್ದಿಷ್ಟ ಭಾಷೆಯ ವಿರುದ್ಧ ಕಠಿಣ ವಿರೋಧವೂ ಇರಬಾರದು ಎಂದು ಉಪರಾಷ್ಟಪತಿ ಎಂ.ವೆಂಕಯ್ಯ ನಾಯ್ಡು ಅವರು ಕರೆ ನೀಡಿದ್ದಾರೆ.

ಶಾರದಾ ರೆಸಿಡೆನ್ಶಿಯಲ್ ಶಾಲೆಯ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದ ಅವರು, ಭಾರತವು ಅನೇಕ ವೈವಿಧ್ಯ ಸಮೃದ್ಧ ಭಾಷೆಗಳಿಂದ ಕೂಡಿದೆ ಹೆಚ್ಚುಭಾಷೆ ಕಲಿತರೂ ಮಾತೃಭಾಷೆಗೆ ಮಹತ್ವ ಕೊಡಬೇಕು,ಮರೆಯಬಾರದು ಎಂದೂ ವಿದ್ಯಾರ್ಥಿಗಳು ಮತ್ತು ಶಿಕ್ಷಕರಿಗೆ ಒತ್ತಿ ಹೇಳಿದರು. ಶಿಕ್ಷಣ ಮತ್ತು ಉತ್ತಮ ಕಲಿಕೆಯ ಅನುಭವ ಸಂಸ್ಕೃತಿ, ಪರಂಪರೆ, ಭಾಷೆ ಮತ್ತು ಪಾಕ ಪದ್ಧತಿಯ ವಿವಿಧ ಅಂಶಗಳನ್ನು ತಿಳಿದುಕೊಳ್ಳಲು ಎಲ್ಲಾ ಪ್ರಮುಖ ಪ್ರವಾಸಿ ಸ್ಥಳಗಳಿಗೆ ಭೇಟಿ ನೀಡುವಂತೆ ವಿದ್ಯಾರ್ಥಿಗಳಿಗೆ ಅವರು ಸಲಹೆ ಮಾಡಿದರು. 

ದೇಶಿಯ ಪ್ರವಾಸೋದ್ಯಮ ಉತ್ತೇಜಿಸಲು 2022 ರ ವೇಳೆಗೆ ಭಾರತದ 15 ಪ್ರವಾಸಿ ಸ್ಥಳಗಳಿಗೆ ಭೇಟಿ ನೀಡುವಂತೆ ಪ್ರಧಾನಿ ನರೇಂದ್ರ ಮೋದಿ ಅವರು ನೀಡಿದ ಕರೆಯನ್ನು ಉಲ್ಲೇಖಿಸಿದ ಅವರು ಭಾರತದ ಐತಿಹಾಸಿಕ,ಆಧ್ಯಾತ್ಮಿಕ, ರಮಣೀಯ ಪ್ರವಾಸಿ ಸ್ಥಳಗಳಿಗೆ ಭೇಟಿ ನೀಡಿ ಸಾಂಸ್ಕೃತಿಕ ಪರಂಪರೆ ಅನ್ವೇಷಿಸಲು ಸಲಹೆ ನೀಡಿ ಇದರಿಂದ ವಿದ್ಯಾರ್ಥಿಗಳ ಜ್ಞಾನವೂ ಹೆಚ್ಚಲಿದೆ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

'ನಂಗೇ ಕೊಡಿ ಎಂದು ನಾನೇನು ಕೇಳಿಲ್ಲ..': ನೊಬೆಲ್ ಶಾಂತಿ ಪ್ರಶಸ್ತಿ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತು!

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

2nd test, Day 2: 518 ರನ್ ಗಳಿಗೆ ಭಾರತ ಇನ್ನಿಂಗ್ಸ್ ಡಿಕ್ಲೇರ್!

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

SCROLL FOR NEXT