ವೆಂಕಯ್ಯ ನಾಯ್ಡು 
ದೇಶ

ಹೆಚ್ಚು ಭಾಷೆ ಕಲಿಯಿರಿ, ಮಾತೃ ಭಾಷೆ ಮರೆಯದಿರಿ: ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು

ಜನರು ಸಾಧ್ಯವಾದಷ್ಟು ಹೆಚ್ಚು ಭಾಷೆಗಳನ್ನು ಕಲಿಯಬೇಕು ಯಾವುದೇ ಭಾಷೆಯನ್ನು ಬಲವಂತವಾಗಿ ಹೇರಬಾರದು,ಅದೆ ರೀತಿ ಯಾವುದೇ ನಿರ್ದಿಷ್ಟ ಭಾಷೆಯ ವಿರುದ್ಧ ಕಠಿಣ ವಿರೋಧವೂ ಇರಬಾರದು ಎಂದು ಉಪರಾಷ್ಟಪತಿ ಎಂ.ವೆಂಕಯ್ಯ ನಾಯ್ಡು ಅವರು ಕರೆ ನೀಡಿದ್ದಾರೆ.

ನವದೆಹಲಿ: ಜನರು ಸಾಧ್ಯವಾದಷ್ಟು ಹೆಚ್ಚು ಭಾಷೆಗಳನ್ನು ಕಲಿಯಬೇಕು ಯಾವುದೇ ಭಾಷೆಯನ್ನು ಬಲವಂತವಾಗಿ ಹೇರಬಾರದು,ಅದೆ ರೀತಿ ಯಾವುದೇ ನಿರ್ದಿಷ್ಟ ಭಾಷೆಯ ವಿರುದ್ಧ ಕಠಿಣ ವಿರೋಧವೂ ಇರಬಾರದು ಎಂದು ಉಪರಾಷ್ಟಪತಿ ಎಂ.ವೆಂಕಯ್ಯ ನಾಯ್ಡು ಅವರು ಕರೆ ನೀಡಿದ್ದಾರೆ.

ಶಾರದಾ ರೆಸಿಡೆನ್ಶಿಯಲ್ ಶಾಲೆಯ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದ ಅವರು, ಭಾರತವು ಅನೇಕ ವೈವಿಧ್ಯ ಸಮೃದ್ಧ ಭಾಷೆಗಳಿಂದ ಕೂಡಿದೆ ಹೆಚ್ಚುಭಾಷೆ ಕಲಿತರೂ ಮಾತೃಭಾಷೆಗೆ ಮಹತ್ವ ಕೊಡಬೇಕು,ಮರೆಯಬಾರದು ಎಂದೂ ವಿದ್ಯಾರ್ಥಿಗಳು ಮತ್ತು ಶಿಕ್ಷಕರಿಗೆ ಒತ್ತಿ ಹೇಳಿದರು. ಶಿಕ್ಷಣ ಮತ್ತು ಉತ್ತಮ ಕಲಿಕೆಯ ಅನುಭವ ಸಂಸ್ಕೃತಿ, ಪರಂಪರೆ, ಭಾಷೆ ಮತ್ತು ಪಾಕ ಪದ್ಧತಿಯ ವಿವಿಧ ಅಂಶಗಳನ್ನು ತಿಳಿದುಕೊಳ್ಳಲು ಎಲ್ಲಾ ಪ್ರಮುಖ ಪ್ರವಾಸಿ ಸ್ಥಳಗಳಿಗೆ ಭೇಟಿ ನೀಡುವಂತೆ ವಿದ್ಯಾರ್ಥಿಗಳಿಗೆ ಅವರು ಸಲಹೆ ಮಾಡಿದರು. 

ದೇಶಿಯ ಪ್ರವಾಸೋದ್ಯಮ ಉತ್ತೇಜಿಸಲು 2022 ರ ವೇಳೆಗೆ ಭಾರತದ 15 ಪ್ರವಾಸಿ ಸ್ಥಳಗಳಿಗೆ ಭೇಟಿ ನೀಡುವಂತೆ ಪ್ರಧಾನಿ ನರೇಂದ್ರ ಮೋದಿ ಅವರು ನೀಡಿದ ಕರೆಯನ್ನು ಉಲ್ಲೇಖಿಸಿದ ಅವರು ಭಾರತದ ಐತಿಹಾಸಿಕ,ಆಧ್ಯಾತ್ಮಿಕ, ರಮಣೀಯ ಪ್ರವಾಸಿ ಸ್ಥಳಗಳಿಗೆ ಭೇಟಿ ನೀಡಿ ಸಾಂಸ್ಕೃತಿಕ ಪರಂಪರೆ ಅನ್ವೇಷಿಸಲು ಸಲಹೆ ನೀಡಿ ಇದರಿಂದ ವಿದ್ಯಾರ್ಥಿಗಳ ಜ್ಞಾನವೂ ಹೆಚ್ಚಲಿದೆ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಂದಿಕೊಳ್ಳಲು ಸಾಧ್ಯವಿಲ್ಲ ಎಂದು ಯಾರು ಹೇಳಿದ್ದು?': ಅಮೆರಿಕ ವ್ಯಾಪಾರ ಒಪ್ಪಂದದ ಅನಿಶ್ಚಿತತೆ ನಡುವೆಯೇ ಹೊಸ ಮಾರುಕಟ್ಟೆಗಳತ್ತ ಭಾರತ ಕಣ್ಣು!

ಯುವನಿಧಿಗೆ ನಿರುದ್ಯೋಗಿ ವಿದ್ಯಾರ್ಥಿಗಳ ನೋಂದಣಿ ನೋಡ್ತಿದ್ದರೆ ಆತಂಕಕಾರಿ, ಶಿಕ್ಷಣದಲ್ಲಿ ಬದಲಾವಣೆ ಅಗತ್ಯ: ವಿಟಿಯು ಉಪಕುಲಪತಿ

1st ODI: ಮಿಚೆಲ್ ಸ್ಫೋಟಕ ಭರ್ಜರಿ ಬ್ಯಾಟಿಂಗ್, ಭಾರತಕ್ಕೆ ಗೆಲ್ಲಲು ಬೃಹತ್ ಗುರಿ ನೀಡಿದ ಕಿವೀಸ್

2010ರಲ್ಲಿ ಆರ್ಡರ್ ಮಾಡಿದ್ದ ನೋಕಿಯಾ ಫೋನ್ ಗಳು 16 ವರ್ಷ ಬಳಿಕ ಡೆಲಿವರಿ, ಬೇಸ್ತು ಬಿದ್ದ ಅಂಗಡಿ ಮಾಲೀಕ.. ಕಾರಣ ಯುದ್ಧ!

ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ, ವಿಡಿಯೋ ಹರಿಬಿಟ್ಟ ಆರೋಪಿಗಳು: ಹುಬ್ಬಳ್ಳಿ ಪೊಲೀಸರಿಂದ ಮೂವರ ಬಂಧನ!

SCROLL FOR NEXT