ಜೀತೇಂದ್ರ ಸಿಂಗ್ 
ದೇಶ

ಕಾಶ್ಮೀರದ ರಾಜಕಾರಣಿಗಳನ್ನು18 ತಿಂಗಳಿಗೂ ಹೆಚ್ಚು ಕಾಲ ಗೃಹ ಬಂಧನದಲ್ಲಿರಿಸಲ್ಲ -ಜೀತೇಂದ್ರ ಸಿಂಗ್

ಕಾಶ್ಮೀರದ ರಾಜಕಾರಣಿಗಳನ್ನು 18 ತಿಂಗಳಿಗೂ ಹೆಚ್ಚಿನ ಕಾಲ ಗೃಹ ಬಂಧನದಲ್ಲಿ ಇರಿಸಿಕೊಳ್ಳುವುದಿಲ್ಲ ಎಂದು ಕೇಂದ್ರ ಸಚಿವ ಜೀತೇಂದ್ರ ಸಿಂಗ್ ಹೇಳಿದ್ದಾರೆ.

ನವದಹಲಿ: ಕಾಶ್ಮೀರದ ರಾಜಕಾರಣಿಗಳನ್ನು 18 ತಿಂಗಳಿಗೂ ಹೆಚ್ಚಿನ ಕಾಲ ಗೃಹ ಬಂಧನದಲ್ಲಿ ಇರಿಸಿಕೊಳ್ಳುವುದಿಲ್ಲ , ಜಮ್ಮು- ಕಾಶ್ಮೀರದ ರಾಜಕಾರಣಿಗಳನ್ನು ಬಂಧಿಸಿಲ್ಲ, ಆದರೆ, ಅವರನ್ನು ಗೃಹ ಬಂಧನದಲ್ಲಿಟ್ಟಿರುವುದಾಗಿ ಎಂದು ಕೇಂದ್ರ ಸಚಿವ ಜೀತೇಂದ್ರ ಸಿಂಗ್ ಹೇಳಿದ್ದಾರೆ.

ಕಣಿವೆ ರಾಜ್ಯದ ರಾಜಕಾರಣಿಗಳನ್ನು  ವಿಐಪಿ ಬಂಗ್ಲೆಗಳಲ್ಲಿ ಇರಿಸಲಾಗಿದ್ದು, ಹಾಲಿವುಡ್ ಸಿನಿಮಾಗಳ ಸಿಡಿಗಳನ್ನು ಅವರಿಗೆ ನೀಡಿದ್ದೇವೆ. ಜಿಮ್ ಸೌಲಭ್ಯ ಕೂಡಾ ಕಲ್ಪಿಸಲಾಗಿದೆ. ಅವರನ್ನು 18 ತಿಂಗಳಿಗೂ ಹೆಚ್ಚಿನ ಕಾಲ ಗೃಹ ಬಂಧನದಲ್ಲಿ ಇರಿಸುವುದಿಲ್ಲ ಎಂದು ಅವರು ತಿಳಿಸಿದ್ದಾರೆ.

ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ರದ್ದುಗೊಳಿಸಿ ಎರಡು ಕೇಂದ್ರಾಡಳಿತ ಪ್ರದೇಶಗಳನ್ನಾಗಿ ವಿಭಜಿಸಿದ ನಂತರ ಆಗಸ್ಟ್ 5 ರಿಂದಲೂ ಜಮ್ಮು- ಕಾಶ್ಮೀರದ ಮಾಜಿ ಮುಖ್ಯಮಂತ್ರಿಗಳಾದ ಓಮರ್ ಅಬ್ದುಲಾ, ಮೆಹಬೂಬಾ ಮುಫ್ತಿ ಸೇರಿದಂತೆ ಹಲವು ರಾಜಕಾರಣಿಗಳನ್ನು  ಗೃಹ ಬಂಧನದಲ್ಲಿ ಇರಿಸಲಾಗಿದೆ. 

ಪಾಕ್ ಆಕ್ರಮಿತ ಕಾಶ್ಮೀರ ನಮ್ಮದು, ಜಮ್ಮು- ಕಾಶ್ಮೀರ ವ್ಯಾಪ್ತಿಯನ್ನು ಇತ್ಯರ್ಥಪಡಿಸುವಲ್ಲಿ ನಾವು ಬದ್ಧವಾಗಿದ್ದೇವೆ. ಈ ಸಂಬಂಧ 1994ರಲ್ಲಿ ಸಂಸತ್ತಿನಲ್ಲಿ ನಿರ್ಣಯವನ್ನು ಅಂಗೀಕರಿಸಲಾಗಿದೆ ಎಂದು ಜಿತೇಂದ್ರ ಸಿಂಗ್  ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್! Video

Nepal Floods: ನೇಪಾಳದ ವಿನಾಶಕಾರಿ ಪ್ರವಾಹಕ್ಕೆ ಇದೇನಾ ಕಾರಣ? ಉಪಗ್ರಹ ಚಿತ್ರಗಳಲ್ಲಿ ಸ್ಫೋಟಕ ಸುಳಿವು!

'Chhatron Ki Goonj' ಕಾರ್ಯಕ್ರಮದ ವೇಳೆ Rahul Gandhi ಮಾಡಿದ 29 ತಪ್ಪುಗಳ ದಾಖಲೆ ನೀಡಿದ ಜೂಟ್ ಕಿ ಗೂಂಜ್ ವೆಬ್​ಸೈಟ್!

ಆರ್ ಎಸ್ ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಕಾರ್ಯಕ್ರಮಕ್ಕೆ ವಿರೋಧ: ಮೇಯರ್ ಮಮ್ದಾನಿ ವಿರುದ್ಧ ಅಮೆರಿಕದ ಖ್ಯಾತ ಗಾಯಕಿ ಕಿಡಿ!

ನೇಪಾಳದಲ್ಲಿ ಭೀಕರ ಪ್ರವಾಹ: ಬಿಹಾರ, ಉತ್ತರ ಪ್ರದೇಶದಲ್ಲಿ NDRF ಹೈ ಅಲರ್ಟ್; ನದಿ ಪಾತ್ರದಲ್ಲಿ ಕಟ್ಟೆಚ್ಚರ