ಸಂಗ್ರಹ ಚಿತ್ರ 
ದೇಶ

ಬಿರುಗಾಳಿಗೆ ತೀವ್ರವಾಗಿ ಅಲುಗಾಡಿದ ಏರ್ ಇಂಡಿಯಾ ವಿಮಾನಗಳು, ಭೀತಿಗೊಳಗಾದ ಪ್ರಯಾಣಿಕರು

ಬಿರುಗಾಳಿ ಪರಿಣಾಮ ರಾಜಧಾನಿ ದೆಹಲಿಯಿಂದ ವಿಜಯವಾಡಕ್ಕೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನ ತೀವ್ರವಾಗಿ ಅಲುಗಾಡಿದ್ದು, ವಿಮಾನದಲ್ಲಿದ್ದ ಪ್ರಯಾಣಿಕರು ಭೀತಿಗೊಳಗಾದ ಘಟನೆ ಭಾನುವಾರ ನಡೆದಿದೆ.

ನವದೆಹಲಿ: ಬಿರುಗಾಳಿ ಪರಿಣಾಮ ರಾಜಧಾನಿ ದೆಹಲಿಯಿಂದ ವಿಜಯವಾಡಕ್ಕೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನ ತೀವ್ರವಾಗಿ ಅಲುಗಾಡಿದ್ದು, ವಿಮಾನದಲ್ಲಿದ್ದ ಪ್ರಯಾಣಿಕರು ಭೀತಿಗೊಳಗಾದ ಘಟನೆ ಭಾನುವಾರ ನಡೆದಿದೆ. 

ದೆಹಲಿಯಿಂದ-ವಿಜಯವಾಡಕ್ಕೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನದಲ್ಲಿ ಸುಮಾರು 172 ಪ್ರಯಾಣಿಕರಿದ್ದರು. ವಿಮಾನ ಇದ್ದಕ್ಕಿದ್ದಂತೆ ಅಲುಗಾಡಿದ್ದರಿಂದ ಪ್ರಯಾಣಿಕರಿಗೆ ತಮ್ಮ ಜೀವವೇ ಬಾಯಿಗೆ ಬಂದಂತಾಗಿದೆ. ವಿಮಾನ ಅಲುಗಾಡಿದ ಪರಿಣಾಮ ಒಳಭಾಗದಲ್ಲಿ ಹಾನಿಗಳಾಗಿವೆ. ಕೆಲ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ವಿಮಾನ ಸುರಕ್ಷಿತವಾಗಿ ಲ್ಯಾಂಡ್ ಆದ ಕಾರಣ ಪ್ರಯಾಣಿಕರೆಲ್ಲರೂ ಸುರಕ್ಷಿತರಾಗಿದ್ದಾರೆಂದು ತಿಳಿದುಬಂದಿದೆ. 

ಎಐ-467 ವಿಮಾನ ದೆಹಲಿಯಿಂದ ವಿಜಯವಾಡಕ್ಕೆ ತೆರಳುವ ವೇಳೆ ಅಲುಗಾಡಿದೆ. ಅಲುಗಾಡಿದ ಪರಿಣಾಮ ವಿಮಾನದ ಹೊರಕವಚಕ್ಕೆ ಸ್ವಲ್ಪಮಟ್ಟಿಗೆ ಹಾನಿಯಾಗಿದ್ದು, ಯಾವುದೇ ಅಪಾಯ ಸಂಭವಿಸಿಲ್ಲ, ವಿಮಾನವನ್ನು ಅಧಿಕಾರಿಗಳು ಪರಿಶೀಲನೆ ನಡೆಸಿದ್ದು, ತನಿಖೆಗೆ ಆದೇಶಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT