ಮೋದಿ-ಟ್ರಂಪ್ 
ದೇಶ

ಟ್ರಂಪ್ ಪರ ಮೋದಿ ಚುನಾವಣಾ ಪ್ರಚಾರ: ಕಾಂಗ್ರೆಸ್ ಆರೋಪ

ಹ್ಯೂಸ್ಟನ್  ಹೌಡಿ ಮೋದಿ ಕಾರ್ಯಕ್ರಮದಲ್ಲಿ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪರವಾಗಿ ಪ್ರಧಾನಿ ನರೇಂದ್ರ ಮೋದಿ ಪ್ರಚಾರ ನಡೆಸುವ ಮೂಲಕ ಭಾರತೀಯ ವಿದೇಶಾಂಗ ನೀತಿಯ ತತ್ತ್ವ ಆದರ್ಶಗಳನ್ನು  ಉಲ್ಲಂಘಿಸಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ. 

ನವದೆಹಲಿ: ಹ್ಯೂಸ್ಟನ್  ಹೌಡಿ ಮೋದಿ ಕಾರ್ಯಕ್ರಮದಲ್ಲಿ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪರವಾಗಿ ಪ್ರಧಾನಿ ನರೇಂದ್ರ ಮೋದಿ ಪ್ರಚಾರ ನಡೆಸುವ ಮೂಲಕ ಭಾರತೀಯ ವಿದೇಶಾಂಗ ನೀತಿಯ ತತ್ತ್ವ ಆದರ್ಶಗಳನ್ನು  ಉಲ್ಲಂಘಿಸಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ. 

ಈ ಬಗ್ಗೆ ಸರಣಿ ಟ್ವೀಟ್ ಗಳನ್ನು ಮಾಡಿರುವ ಕಾಂಗ್ರೆಸ್ ಹಿರಿಯ ವಕ್ತಾರ ಆನಂದ್ ಶರ್ಮಾ, ಭಾರತದ ಪ್ರಧಾನಿಯಾಗಿ ಮೋದಿ ಅಮೆರಿಕಾದಲ್ಲಿದ್ದಾರೆ. ಆದರೆ, ಅಮೆರಿಕಾ ಚುನಾವಣೆಯಲ್ಲಿ ಸ್ಟಾರ್ ಪ್ರಚಾರಕರು ಅಲ್ಲ ಎಂದಿದ್ದಾರೆ.

ಬೇರೊಂದು ದೇಶದ ಚುನಾವಣೆಯಲ್ಲಿ ಮಧ್ಯಪ್ರವೇಶಿಸುವಂತಿಲ್ಲ ಎನ್ನುವ ಭಾರತೀಯ ವಿದೇಶಾಂಗ ನೀತಿಯ ತತ್ತ್ವಆದರ್ಶಗಳನ್ನು ಪ್ರಧಾನಿ ಮೋದಿ ಉಲ್ಲಂಘಿಸಿದ್ದಾರೆ ಎಂದು ಟೆಕ್ಸಾಸ್ ನಲ್ಲಿ ನಡೆದ ಹೌಡಿ- ಮೋದಿ ಕಾರ್ಯಕ್ರಮದ ಬಳಿಕ ಆನಂದ್ ಶರ್ಮಾ ಟ್ವೀಟ್ ಮಾಡಿದ್ದಾರೆ. 

ಭಾರತ ಹಾಗೂ ಅಮೆರಿಕಾ ಎರಡು ಪ್ರಜಾಸತಾತ್ಮಕ ರಾಷ್ಟ್ರವಾಗಿದ್ದು, ಟ್ರಂಪ್ ಪರ ಮೋದಿ ಪ್ರಚಾರ ನಡೆಸುವ ಮೂಲಕ ಉಭಯ ದೇಶಗಳ ಸೌರ್ವಭೌಮ ಹಾಗೂ ಪ್ರಜಾಸತಾತ್ಮಕ ನೀತಿಗಳನ್ನು ಉಲ್ಲಂಘಿಸಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

ಭಾರತದಲ್ಲಿ ಎಲ್ಲವೂ ಚೆನ್ನಾಗಿದೆ ಎಂದು ಹೇಳಿರುವ ನರೇಂದ್ರ ಮೋದಿ ವಿರುದ್ಧ ತಿಹಾರ್ ಜೈಲಿನಲ್ಲಿರುವ ಮಾಜಿ ಕೇಂದ್ರ ಸಚಿವ  ಚಿದಂಬರಂ ಕೂಡಾ ವಾಗ್ದಾಳಿ ನಡೆಸಿದ್ದಾರೆ.  ನಿರುದ್ಯೋಗ, ಉದ್ಯೋಗ ಕೊರತೆ, ಕಡಿಮೆ ವೇತನ, ಗುಂಪು ಹಲ್ಲೆ, ಕಾಶ್ಮೀರದಲ್ಲಿ ನಿರ್ಬಂಧ , ಪ್ರತಿಪಕ್ಷ ನಾಯಕರಿಗೆ ಜೈಲು ಹೊರತುಪಡಿಸಿದಂತೆ ಉಳಿದೆಲ್ಲವೂ ಭಾರತದಲ್ಲಿ ಚೆನ್ನಾಗಿದೆ ಎಂದು ಚಿದಂಬರಂ ತಮ್ಮ ಕುಟುಂಬದವರಿಂದ ಟ್ವೀಟ್ ಮಾಡಿಸಿದ್ದಾರೆ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT