ಸಂಗ್ರಹ ಚಿತ್ರ 
ದೇಶ

ಅನಿವಾಸಿಗಳಿಗೆ ಆಧಾರ್ ಕಾರ್ಡ್: 182 ದಿನಗಳ ಕಾಯುವಿಕೆ ಇನ್ನಿಲ್ಲ!

ಅಧಿಕೃತ ಭಾರತೀಯ ಪಾಸ್‌ಪೋರ್ಟ್ ಹೊಂದಿರುವ ಯಾವುದೇ ಅನಿವಾಸಿ ಭಾರತೀಯರು (ಎನ್‌ಆರ್‌ಐ) ಅವರು ಭಾರತಕ್ಕೆ ಆಗಮಿಸಿದ 182 ದಿನ ಕಾಯದೆಯೂ ಆಧಾರ್‌ಗೆ ಅರ್ಜಿ ಸಲ್ಲಿಸಬಹುದು, ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸುತ್ತಿದೆ.

ನವದೆಹಲಿ: ಅಧಿಕೃತ ಭಾರತೀಯ ಪಾಸ್‌ಪೋರ್ಟ್ ಹೊಂದಿರುವ ಯಾವುದೇ ಅನಿವಾಸಿ ಭಾರತೀಯರು (ಎನ್‌ಆರ್‌ಐ) ಅವರು ಭಾರತಕ್ಕೆ ಆಗಮಿಸಿದ 182 ದಿನ ಕಾಯದೆಯೂ ಆಧಾರ್‌ಗೆ ಅರ್ಜಿ ಸಲ್ಲಿಸಬಹುದು, ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸುತ್ತಿದೆ.

ಈ ಅಧಿಸೂಚನೆ ಸಂಬಂಧ  ವಿಶಿಷ್ಟ ಗುರುತು ಸಂಖ್ಯೆ ಪ್ರಾಧಿಕಾರ (ಯುಐಡಿಎಐ) "ಭಾರತಕ್ಕೆ ಬಂದ ನಂತರ ಎನ್‌ಆರ್‌ಐಗೆ ಆಧಾರ್ ಸಂಖ್ಯೆಯನ್ನು ಪಡೆಯಲು ಅರ್ಹರಾಗಲಿದ್ದಾರೆ"ಎಂದು ಸುತ್ತೋಲೆ ಹೊರಡಿಸಿದೆ.

ಅರ್ಜಿ ಸಲ್ಲಿಕೆ ವಿಧಾನಗಳು ಹೆಚ್ಚೆನೂ ಬದಲಾಗದೆ ಉಳಿಯಲಿದೆ. ಭಾರತೀಯ ಪಾಸ್‌ಪೋರ್ಟ್ ಹೊಂದಿರುವ ಎನ್‌ಆರ್‌ಐಗಳು ಈಗ ಆಗಮನದ ನಂತರ ಅಷ್ಟೇ ಬೇಗ  ಬಯೋಮೆಟ್ರಿಕ್ ಐಡಿಗೆ ಅರ್ಜಿ ಸಲ್ಲಿಸಬಹುದು ಅಥವಾ ಪೂರ್ವ ನೇಮಕಾತಿಯನ್ನು ನಿಗದಿಪಡಿಸಿ ಹೀಗಾಗಿ 182 ದಿನಗಳ ಕಡ್ಡಾಯ ಕಾಯುವಿಕೆಯ ಅವಧಿ ಇಲ್ಲವಾಗುತ್ತದೆ. 

ಭಾರತೀಯ ಪಾಸ್‌ಪೋರ್ಟ್ ಅನ್ನು ಗುರುತಿನ ಪುರಾವೆ(ಐಡಿ ಪ್ರೂಫ್), ವಿಳಾಸದ ಪುರಾವೆ (ಪಿಒಎ) ಮತ್ತು ಜನ್ಮ ದಿನಾಂಕ ಪುರಾವೆಯಾಗಿ ಸ್ವೀಕರಿಸಲಾಗುತ್ತದೆ ಎಂದು ಯುಐಡಿಎಐ ಸುತ್ತೋಲೆಯಲ್ಲಿ ತಿಳಿಸಲಾಗಿದೆ.

ಎನ್‌ಆರ್‌ಐಗಳ ಪಾಸ್‌ಪೋರ್ಟ್  ಭಾರತೀಯ ವಿಳಾಸವನ್ನು ಹೊಂದಿಲ್ಲದಿದ್ದರೆ, ಇತರ ಯಾವುದೇ ಯುಐಡಿಎಐ-ಅನುಮೋದಿತ ಪಿಒಎ ದಾಖಲೆಗಳನ್ನು ವಿಳಾಸದ ಪುರಾವೆಯಾಗಿ ಸಲ್ಲಿಸಲು ಅವರಿಗೆ ಅವಕಾಶ ನೀಡಲಾಗುವುದು

ಜುಲೈ 5 ರಂದು ತಮ್ಮ ಬಜೆಟ್ ಭಾಷಣದಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ "ಭಾರತಕ್ಕೆ ಬಂದ ನಂತರ ಭಾರತೀಯ ಪಾಸ್‌ಪೋರ್ಟ್‌ಗಳೊಂದಿಗೆ ಅನಿವಾಸಿ ಭಾರತೀಯರಿಗೆ ಆಧಾರ್ ಕಾರ್ಡ್  ನಿಡಬೇಕೆಂದು ನಾನು ಪ್ರತಿಪಾದಿಸುವೆ " ಎಂದದ್ದನ್ನು ನಾವಿಲ್ಲಿ ಸ್ಮರಿಸಬಹುದು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'Health camp' ಚಿಕಿತ್ಸೆಯಿಂದ ಕಾಲು ಕಳೆದುಕೊಂಡ ಮಹಿಳೆ! ಪೊಲೀಸರಿಗೆ ದೂರು, ಅಭಿಷೇಕ್ ಬ್ಯಾನರ್ಜಿ ವಿರುದ್ಧ ಕೇಸ್ ದಾಖಲು

ನನ್ನ ಜೊತೆ ಮರ್ಯಾದೆಯಿಂದ ಮಾತಾಡು: ಸ್ವಿಟ್ಜರ್ಲೆಂಡ್ ವಿರುದ್ಧದ ಪಂದ್ಯದ ನಡುವೆ ರೆಫರಿ ವಿರುದ್ಧ ಮೆಸ್ಸಿ ವಾಗ್ವಾದ, Video

ಅಸ್ಸಾಂ: ರೋಡ್ ರೋಲರ್ ಬಳಸಿ ಸೀಜ್ ಮಾಡಿದ್ದ 472 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶಪಡಿಸಿದ ಸಿಎಂ ಹಿಮಂತ ಬಿಸ್ವಾ ಶರ್ಮಾ! Video

Iranಗೆ ಅಮೆರಿಕಾ ಬಿಗ್ ಶಾಕ್: 140 ಗುರಿಗಳ ಮೇಲೆ ಭಾರೀ ವೈಮಾನಿಕ ದಾಳಿ; Gulf ರಾಷ್ಟ್ರಗಳತ್ತ ಕ್ಷಿಪಣಿ ಹಾರಿಸಿ Tehran ತಿರುಗೇಟು..!

KSRTC ಬಸ್‌ನಲ್ಲಿ ಯುವತಿಗೆ ಲೈಂಗಿಕ ಕಿರುಕುಳ: ಆರೋಪಿಗೆ ಧರ್ಮದೇಟು, ವಿಡಿಯೋ ವೈರಲ್