ಕಿಶನ್ ರೆಡ್ಡಿ 
ದೇಶ

ಭಾರತದೊಂದಿಗೆ ಯುದ್ದಕ್ಕಿಳಿದರೇ ಪಾಕಿಸ್ಥಾನ ವಿಶ್ವ ಭೂಪಟದಿಂದಲೇ ಮಾಯವಾಗಲಿದೆ: ಕಿಶನ್ ರೆಡ್ಡಿ

ಭಾರತದೊಂದಿಗೆ ಯುದ್ದ ಮಾಡುವ ಸಾಹಸ ತೋರಿಸಿದರೆ ಪಾಕಿಸ್ಥಾನ ವಿಶ್ವ ಭೂಪಟದಿಂದಲೇ ಮಾಯವಾಗಲಿದೆ ಎಂದು ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಕಿಶನ್ ರೆಡ್ಡಿ ಹೇಳಿದ್ದಾರೆ.

ಕಾಕಿನಾಡ: ಭಾರತದೊಂದಿಗೆ ಯುದ್ದ ಮಾಡುವ ಸಾಹಸ ತೋರಿಸಿದರೆ ಪಾಕಿಸ್ಥಾನ ವಿಶ್ವ ಭೂಪಟದಿಂದಲೇ ಮಾಯವಾಗಲಿದೆ ಎಂದು ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಕಿಶನ್ ರೆಡ್ಡಿ ಹೇಳಿದ್ದಾರೆ.

ಆಂಧ್ರಪ್ರದೇಶದ ಕಾಕಿನಾಡದಲ್ಲಿ ‘ಜನ್ ಜಾಗರಣ್’ ಕಾರ್ಯಕ್ರಮದಲ್ಲಿ ಮಾತನಾಡಿದ ಕಿಶನ್ ರೆಡ್ಡಿ, ಒಂದು ವೇಳೆ ಯುದ್ದ ನಡೆದರೆ ಪಾಕಿಸ್ಥಾನ ಸರ್ವನಾಶವಾಗಲಿದೆ ಎಂದು ಭವಿಷ್ಯ ನುಡಿದಿದ್ದಾರೆ.

ನರೇಂದ್ರ ಮೋದಿ ನೇತೃತ್ವದ ಸರಕಾರ ಭಾರತದ ಸಾರ್ವಭೌಮತ್ವ ಮತ್ತು ಸಮಗ್ರತೆಯನ್ನು ಎತ್ತಿ ಹಿಡಿಯುತ್ತಿದೆ. ನಮ್ಮದು ದೇಶ ಪ್ರೇಮದ ಸರ್ಕಾರ ಎಂದು ಕಿಶನ್ ರೆಡ್ಡಿ ತಿಳಿಸಿದ್ದಾರೆ.

ಪಾಕ್ ಆಕ್ರಮಿತ ಕಾಶ್ಮೀರದ ವಿಷಯದಲ್ಲಿ ಮಾತನಾಡಿದ ಅವರು ಸಮಯ ಬಂದಾಗ ಸರಿಯಾದ ನಿರ್ಧಾರ ಕೈಗೊಳ್ಳುವುದಾಗಿ ಹೇಳಿದರು.

ಜಮ್ಮು ಮತ್ತು  ಕಾಶ್ಮಿರದಲ್ಲಿ ಆರ್ಟಿಕಲ್ 370 ರದ್ದಾದ ನಂತರ ಯಾವುದೇ ರೀತಿಯ ಗಲಭೆ ಅಥವಾ ದೊಂಬಿಗಳಾಗಿಲ್ಲ. ಇದು ಹೆಮ್ಮೆಯ ವಿಷಯ ಎಂದು ಹೇಳಿದ್ದಾರೆ.

ಜಮ್ಮು ಮತ್ತು  ಕಾಶ್ಮಿರದಲ್ಲಿ ಆರ್ಟಿಕಲ್ 370 ನೇ ವಿಧಿಯನ್ನು ಜಾರಿಗೆ  ತಂದಿದ್ದರಿಂದ ಕಳೆದ 70 ವರ್ಷಗಳಲ್ಲಿ , ಭಯೋತ್ಪಾದನೆ, ರಕ್ತಪಾತ, ಬಾಂಬ್ ಬ್ಲಾಸ್ಟ್ ಮುಂತಾದ ಅಹಿತಕರ ಘಟನೆಗಳು ನಡೆದಿದೆಯೇ ಹೊರತು ಯಾವುದೇ ಅಭಿವೃದ್ದಿಯಾಗಿಲ್ಲ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ