ಸುಧೀರ್  ಮುಂಗಂತಿವಾರ್ 
ದೇಶ

ಸೋನಿಯಾ, ಸಿಂಗ್ ಗೆ 'ಚಿದಂಬರಂ ರಹಸ್ಯ' ಬಯಲಾಗುವ ಭಯ: ಬಿಜೆಪಿ ಮುಖಂಡ

ಚಿದಂಬರಂ  ರಹಸ್ಯ ಬಯಲಾಗುವ ಭೀತಿಯಿಂದ ಸೋನಿಯಾ ಗಾಂಧಿ ಹಾಗೂ ಮನ್ ಮೋಹನ್ ಸಿಂಗ್  ಇಂದು ತಿಹಾರ್ ಜೈಲಿಗೆ ಭೇಟಿ ನೀಡಿ ಚಿದಂಬರಂ ಅವರನ್ನು ಭೇಟಿಯಾಗಿದ್ದಾರೆ ಎಂದು ಬಿಜೆಪಿ ಮುಖಂಡ ಹಾಗೂ ಮಹಾರಾಷ್ಟ್ರ ಹಣಕಾಸು ಸಚಿವ ಸುದೀರ್ ಮುಂಗಂತಿವಾರ್ ಟೀಕಿಸಿದ್ದಾರೆ.

ನಾಗ್ಪುರ: ಚಿದಂಬರಂ  ರಹಸ್ಯ ಬಯಲಾಗುವ ಭೀತಿಯಿಂದ ಸೋನಿಯಾ ಗಾಂಧಿ ಹಾಗೂ ಮನ್ ಮೋಹನ್ ಸಿಂಗ್  ಇಂದು ತಿಹಾರ್ ಜೈಲಿಗೆ ಭೇಟಿ ನೀಡಿ ಚಿದಂಬರಂ ಅವರನ್ನು ಭೇಟಿಯಾಗಿದ್ದಾರೆ ಎಂದು ಬಿಜೆಪಿ ಮುಖಂಡ ಹಾಗೂ ಮಹಾರಾಷ್ಟ್ರ ಹಣಕಾಸು ಸಚಿವ ಸುಧೀರ್ ಮುಂಗಂತಿವಾರ್ ಟೀಕಿಸಿದ್ದಾರೆ.

ತಮ್ಮ ರಹಸ್ಯಗಳನ್ನೆಲ್ಲಾ ಚಿದಂಬರಂ ಏಲ್ಲಿ ಬಾಯ್ಬಿಡುತ್ತಾರೋ ಎಂಬ ಆತಂಕದಿಂದ ಸೋನಿಯಾ ಗಾಂಧಿ ಹಾಗೂ ಮನ್ ಮೋಹನ್ ಸಿಂಗ್ ಜೈಲ್ಲಿನಲ್ಲಿರುವ ಚಿದಂಬರಂ ಅವರನ್ನು ಭೇಟಿಯಾಗಿದ್ದಾರೆ ಎಂದು ಸುದ್ದಿಸಂಸ್ಥೆಯೊಂದಕ್ಕೆ ಮುಂಗಂತಿವಾರ್ ಹೇಳಿದ್ದಾರೆ.

ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಇಂದು ಬೆಳಗ್ಗೆ ಸೋನಿಯಾ ಗಾಂಧಿ ಹಾಗೂ ಮನ್ ಮೋಹನ್ ಸಿಂಗ್  ಹಾಗೂ ಕಾರ್ತಿ ಚಿದಂಬರಂ ತಿಹಾರ್ ಜೈಲಿನಲ್ಲಿರುವ ಚಿದಂಬರಂ ಅವರನ್ನು ಭೇಟಿಯಾಗಿದ್ದರು.

ಮುಂಬರುವ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಹಾಗೂ ಶಿವಸೇನಾ ಮೈತ್ರಿ ಮಾಡಿಕೊಳ್ಳಲಿದ್ದು, ಲೂಟಿ ಮಾಡಿರುವ ಕಾಂಗ್ರೆಸ್ ಹಾಗೂ ಎನ್ ಸಿಪಿ ಮೇಲೆ ಜನ ವಿಶ್ವಾಸ ಇಟ್ಟುಕೊಂಡಿಲ್ಲ ಎಂದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

SCROLL FOR NEXT