ಚಿನ್ಮಯಾನಂದ್ 
ದೇಶ

ಅತ್ಯಾಚಾರ ಪ್ರಕರಣ: ಬಿಜೆಪಿ ನಾಯಕ, ಮಾಜಿ ಕೇಂದ್ರ ಸಚಿವ ಚಿನ್ಮಯಾನಂದ್ ಜಾಮೀನು ಅರ್ಜಿ ವಜಾ

ಕಾನೂನು ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿದ ಆರೋಪ ಮೇಲೆ ಬಂಧನಕ್ಕೊಳಗಾಗಿರುವ ಮಾಜಿ ಕೇಂದ್ರ ಸಚಿವ ಹಾಗೂ ಬಿಜೆಪಿ ನಾಯಕ ಸ್ವಾಮಿ ಚಿನ್ಮಯಾನಂದ್ ಅವರ ಜಾಮೀನು ಅರ್ಜಿಯನ್ನು...

ಶಹಜಾನ್ಪುರ್: ಕಾನೂನು ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿದ ಆರೋಪ ಮೇಲೆ ಬಂಧನಕ್ಕೊಳಗಾಗಿರುವ ಮಾಜಿ ಕೇಂದ್ರ ಸಚಿವ ಹಾಗೂ ಬಿಜೆಪಿ ನಾಯಕ ಸ್ವಾಮಿ ಚಿನ್ಮಯಾನಂದ್ ಅವರ ಜಾಮೀನು ಅರ್ಜಿಯನ್ನು ಉತ್ತರ ಪ್ರದೇಶ ಕೋರ್ಟ್ ವಜಾಗೊಳಿಸಿದೆ.

ಜಾಮೀನು ಕೋರಿ ಚಿನ್ಮಯಾನಂದ್ ಅವರು ಸಲ್ಲಿಸಿದ್ದ ಅರ್ಜಿಯನ್ನು ಶಹಜಾನ್ಪುರ್ ಚೀಫ್ ಜ್ಯುಡಿಷಿಯಲ್ ಮ್ಯಾಜಿಸ್ಟ್ರೇಟ್ ಅವರು ವಜಾಗೊಳಿಸಿದ್ದಾರೆ ಮತ್ತು ಜಾಮೀನಿಗಾಗಿ ಸೆಷನ್ಸ್ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸುವಂತೆ ಸೂಚಿಸಿರುವುದಾಗಿ ಆರೋಪಿ ಪರ ವಕೀಲ ಓಂ ಸಿಂಗ್ ಅವರು ತಿಳಿಸಿದ್ದಾರೆ.

ಇದೇ ವೇಳೆ ಸ್ವಾಮಿ ಚಿನ್ಮಯಾನಂದ್ ಅವರಿಗೆ ಹಣಕ್ಕೆ ಬೇಡಿಕೆಯಿಟ್ಟ ಆರೋಪದ ಮೇಲೆ ಬಂಧನಕ್ಕೊಳಗಾಗಿರುವ ಸಂಜಯ್, ಸಚಿನ್​ ಮತ್ತು ವಿಕ್ರಂ ಎಂಬ ಜಾಮೀನು ಅರ್ಜಿಯನ್ನು ಸಹ ಕೋರ್ಟ್ ವಜಾಗೊಳಿಸಿದೆ.

ಮಾಜಿ ಕೇಂದ್ರ ಸಚಿವ ಸ್ವಾಮಿ ಚಿನ್ಮಯಾನಂದ್ ಅವರು ಒಂದು ವರ್ಷಗಳ ಕಾಲ ತನ್ನ ಮೇಲೆ ನಿರಂತರ ಅತ್ಯಾಚಾರ ಎಸಗಿದ್ದಾರೆ ಎಂದು ಶೆಹಜಾನ್ಪುರದ ಕಾನೂನು ವಿದ್ಯಾರ್ಥಿನಿ ಆರೋಪಿಸಿದ್ದರು. ಈ ಸಂಬಂಧ ವಿದ್ಯಾರ್ಥಿನಿ ಪೊಲೀಸರಿಗೆ ದೂರು ನೀಡಿ, ಕೋರ್ಟ್ ನಲ್ಲಿ ಹೇಳಿಕೆ ದಾಖಲಿಸಿದ ನಂತರ ಆರೋಪಿ ಚಿನ್ಮಯಾನಂದ್ ಅವರನ್ನು ಎಸ್ಐಟಿ ಅಧಿಕಾರಿಗಳು ಕಳೆದ ಶುಕ್ರವಾರ ಬಂಧಿಸಿದ್ದರು. ಬಳಿಕ ಆರೋಪಿಯನ್ನು 14 ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

West-Asia war: 48 ಗಂಟೆಗಳಲ್ಲಿ ಹೋರ್ಮುಜ್ ಜಲಸಂಧಿ ತೆರೆಯದಿದ್ದರೆ ಇರಾನ್‌ನಲ್ಲಿ ನರಕ ಸೃಷ್ಟಿಸುತ್ತೇವೆ; Trump ಕೊನೇಯ ಎಚ್ಚರಿಕೆ!

ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಕಾಂಗ್ರೆಸ್‌ 'ಪ್ರಚೋದನಕಾರಿ' ಹೇಳಿಕೆ; ಭಾರತೀಯರ ಸುರಕ್ಷತೆಗೆ ಅಪಾಯ: ಪ್ರಧಾನಿ ಮೋದಿ

'ನೀವೇನು ಸುರಕ್ಷಿತ ಅಲ್ಲ': ಟ್ರಂಪ್ 48 ಗಂಟೆಗಳ ಕೊನೆ ಎಚ್ಚರಿಕೆ ಬೆನ್ನಲ್ಲೆ CIA Station ಗೆ ಡ್ರೋನ್ ನುಗ್ಗಿಸಿ ಇರಾನ್; 1 ನಿಮಿಷದ ಅಂತರದಲ್ಲಿ 2 ಸ್ಫೋಟ!

Sex Video ಪ್ರಕರಣ: ಡಿಸಿಎಂಗೆ 17 ಬಾರಿ ಕರೆ ಮಾಡಿದ ಸ್ವಯಂ ಘೋಷಿತ 'ದೇವಮಾನವ'; CDR ಬಿಡುಗಡೆ

ಭಾರತದ ರಾಜತಂತ್ರಕ್ಕೆ ಜಗತ್ತೇ ನಿಬ್ಬೆರಗು: ಸಂಘರ್ಷದ ನಡುವೆ ಯಾರಿಗೂ ಸಿಗದ ಸೌಲಭ್ಯ!; Hormuz ದಾಟಿದ 8ನೇ ಹಡಗು; ಇರಾನ್ ನಿಂದ ವಿಶೇಷ ಸಂದೇಶ!

SCROLL FOR NEXT