ಸಾಂದರ್ಭಿಕ ಚಿತ್ರ 
ದೇಶ

ವಿಶ್ವಸಂಸ್ಥೆಯಲ್ಲಿ ಮೋದಿ ಭಾಷಣ: ಗಡಿಯಲ್ಲಿ ಕದನ ವಿರಾಮ ಉಲ್ಲಂಘಿಸಿದ ಪಾಕ್

ಪ್ರಧಾನಿ ನರೇಂದ್ರ ಮೋದಿ ಹಾಗೂ ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಅವರು ಶುಕ್ರವಾರ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯನ್ನು ಉದ್ದೇಶಿಸಿ ಮಾತನಾಡುತ್ತಿರುವ ಹಿನ್ನೆಲೆಯಲ್ಲಿ ಪಾಕ್ ಸೇನೆ ಜಮ್ಮು ಮತ್ತು ಕಾಶ್ಮೀರದ ಗಡಿ ನಿಯಂತ್ರಣ ರೇಖೆ ಬಳಿ ಕದನ ವಿರಾಮ ಉಲ್ಲಂಘಿಸಿದೆ ಎಂದು ವರದಿಗಳು ತಿಳಿಸಿವೆ.

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಹಾಗೂ ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಅವರು ಶುಕ್ರವಾರ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯನ್ನು ಉದ್ದೇಶಿಸಿ ಮಾತನಾಡುತ್ತಿರುವ ಹಿನ್ನೆಲೆಯಲ್ಲಿ ಪಾಕ್ ಸೇನೆ ಜಮ್ಮು ಮತ್ತು ಕಾಶ್ಮೀರದ ಗಡಿ ನಿಯಂತ್ರಣ ರೇಖೆ ಬಳಿ ಕದನ ವಿರಾಮ ಉಲ್ಲಂಘಿಸಿದೆ ಎಂದು ವರದಿಗಳು ತಿಳಿಸಿವೆ.

ಇಂದು ಬೆಳಗ್ಗೆ ರಾಜೋರಿ ಜಿಲ್ಲೆಯ ನೌಶೆರಾ ಸೆಕ್ಟರ್ ನಲ್ಲಿ ಪಾಕ್ ಸೇನೆ ಕದನ ವಿರಾಮ ಉಲ್ಲಂಘಿಸಿ ಅಪ್ರಚೋದಿತ ಗುಂಡಿನ ದಾಳಿ ನಡೆಸಿದ ಎಂದು ಭಾರತೀಯ ಸೇನೆಯ ಮೂಲಗಳು ತಿಳಿಸಿವೆ.

ಗುಂಡಿನ ದಾಳಿಯಲ್ಲಿ ಯಾವುದೇ ಪ್ರಾಣಹಾನಿ ಅಥವಾ ಗಾಯಗಳಾಗಿರುವ ಬಗ್ಗೆ ಇದುವರೆಗೂ ವರದಿಯಾಗಿಲ್ಲ.

ಕೇಂದ್ರ ಸರ್ಕಾರ ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನ ರದ್ದುಗೊಳಿಸಿದ ಬಳಿಕ ಪಾಕ್ ಸೇನೆ ಪದೇಪದೆ ಕದನ ವಿರಾಮ ಉಲ್ಲಂಘಿಸುತ್ತಿದ್ದು, ಉಗ್ರರನ್ನು ಭಾರತದೊಳಗೆ ನುಗ್ಗಿಸುವ ಉದ್ದೇಶದಿಂದ ಪಾಕ್ ಸೇನೆ ಪದೇಪದೆ ಕದನ ವಿರಾಮ ಉಲ್ಲಂಘಿಸುತ್ತಿದೆ ಎಂದು ಸೇನಾ ಮೂಲಗಳು ತಿಳಿಸಿವೆ.

ಆಗಸ್ಟ್ 5ರಂದು 370ನೇ ವಿಧಿ ರದ್ದುಗೊಳಿಸಿದ ಬಳಿಕ ಕೇಂದ್ರ ಕಾಶ್ಮೀರದಲ್ಲಿ ಭಾರಿ ಸಂಖ್ಯೆಯಲ್ಲಿ ಭದ್ರತಾ ಪಡೆಗಳನ್ನು ನಿಯೋಜಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಪಶ್ಚಿಮ ಏಷ್ಯಾದ ಉದ್ವಿಗ್ನತೆ ನಡುವೆ ಮೋದಿ- ಪೆಜೆಶ್ಕಿಯನ್ ಮಾತುಕತೆ: ದೀರ್ಘಕಾಲೀನ, ಪರಸ್ಪರ ಲಾಭದಾಯಕ ಕಾರ್ಯತಂತ್ರಕ್ಕೆ ಒತ್ತು

ಲೋಕೋಪಯೋಗಿ ಇಲಾಖೆಯಲ್ಲಿ 'ಲಂಚ'; ವಿದೇಶಿ ಷೇರು ಹೂಡಿಕೆ ಇತ್ಯಾದಿ; ಸತೀಶ್ ಜಾರಕಿಹೊಳಿ ಮನೆಯಲ್ಲಿ ಸಿಕ್ಕಿದ್ದೇನು? EDಯಿಂದ ಅಧಿಕೃತ ಹೇಳಿಕೆ

ಬದರಿನಾಥದ 'ತಪ್ತ ಕುಂಡ'ದಲ್ಲಿ 108 ಬಾರಿ ಧಾರ್ಮಿಕ ಸ್ನಾನ: ರಾಜಸ್ಥಾನದ ಇಬ್ಬರು ವೃದ್ಧೆಯರು ಸಾವು!

BRICS 2026: ಪುಟಿನ್-ಮೋದಿ ಮಾತುಕತೆ: ಕಪ್ಪು ಸಮುದ್ರದಲ್ಲಿ ಭಾರತೀಯರ ಸುರಕ್ಷತೆಯ ವಿಷಯ ಪ್ರಸ್ತಾಪ ರಷ್ಯಾ ಅಧ್ಯಕ್ಷ ಹೇಳಿದ್ದೇನು?

ಬ್ರಿಕ್ಸ್ ಶೃಂಗಸಭೆ: ಭಾರಿ ಭದ್ರತೆ, ಐಷಾರಾಮಿ ವಿಮಾನದಲ್ಲಿ ನವದೆಹಲಿಗೆ ಆಗಮಿಸಿದ ಪುಟಿನ್! "ಡೂಮ್ಸ್ ಡೇ' ವಿಶೇಷತೆ ಏನು ಗೊತ್ತಾ? Video