ಗೌತಮ್ ಗಂಭೀರ್ 
ದೇಶ

ವಂಚನೆ ಪ್ರಕರಣ: ಬಿಜೆಪಿ ಸಂಸದ ಗೌತಮ್ ಗಂಭೀರ್ ಸೇರಿ ಹಲವರ ವಿರುದ್ಧ ಚಾರ್ಚ್ ಶೀಟ್!

ವಂಚನೆ ಪ್ರಕರಣ ಸಂಬಂಧ ಮಾಜಿ ಕ್ರಿಕೆಟಿಗ, ಸಂಸದ ಗೌತಮ್ ಗಂಭೀರ್ ಸೇರಿ ಹಲವರ ವಿರುದ್ಧ ದೆಹಲಿ ಪೊಲೀಸರು ಚಾರ್ಚ್ ಶೀಟ್ ಸಲ್ಲಿಸಿದ್ದಾರೆ.

ನವದೆಹಲಿ: ವಂಚನೆ ಪ್ರಕರಣ ಸಂಬಂಧ ಮಾಜಿ ಕ್ರಿಕೆಟಿಗ, ಸಂಸದ ಗೌತಮ್ ಗಂಭೀರ್ ಸೇರಿ ಹಲವರ ವಿರುದ್ಧ ದೆಹಲಿ ಪೊಲೀಸರು ಚಾರ್ಚ್ ಶೀಟ್ ಸಲ್ಲಿಸಿದ್ದಾರೆ. 

ಗೌತಮ್ ಗಂಭೀರ್ ಬ್ರಾಂಡ್ ಅಂಬಾಸೆಡರ್ ಆಗಿದ್ದ ರಿಯಲ್ ಎಸ್ಟೇಟ್ ಸಮೂಹ ರುದ್ರ ಬಿಲ್ಡ್ ವೆಲ್ ಯೋಜನೆಯ ವಿರುದ್ಧ ವಂಚನೆ, ದುರುಪಯೋಗ ಮತ್ತು ಸಂಚು ರೂಪಿಸಿದ ಆರೋಪ ದಾಖಲಿಸಲಾಗಿತ್ತು. ಪ್ರಕರಣ ಸಂಬಂಧ ದೆಹಲಿ ಪೊಲೀಸರು ಎಫ್ಐಆರ್ ದಾಖಲಿಸಿದ್ದರು. 

ಗಾಜಿಯಾಬಾದ್ ನ ಇಂದಿರಾಪುರಂ ಪ್ರದೇಶದಲ್ಲಿ ರುದ್ರ ಸಮೂಹ ಸಂಸ್ಥೆಯೂ ಫ್ಲಾಟ್ ನಿರ್ಮಾಣ ಯೋಜನೆಗಾಗಿ 2011ರಲ್ಲಿ ಖರೀದಿ ಆಸಕ್ತರಿಂದ ಕೋಟಿಗಟ್ಟಲೆ ಹಣ ಹೂಡಿಕೆ ಮಾಡಿಸಿಕೊಂಡಿತ್ತು. ಆದರೆ ಈ ಯೋಜನೆ ಆರಂಭವಾಗಿರಲಿಲ್ಲ. ಇದರಿಂದ ವಂಚನೆಗೊಳಗಾಗಿದ್ದ ಜನರು ಕಂಪನಿ ವಿರುದ್ಧ ದೂರು ನೀಡಿದ್ದರು. 

2016ರಲ್ಲಿ ಕಂಪನಿ ವಿರುದ್ಧ ದೂರು ದಾಖಲಾಗಿದ್ದು ಗೌತಮ್ ಗಂಭೀರ್ ಅವರು ರುದ್ರ ಬಿಲ್ಡ್ ವೆಲ್ ರಿಯಾಲಿಟಿ ಕಂಪನಿಯ ಬ್ರಾಂಡ್ ಅಂಬಾಸೆಡರ್ ಜೊತೆ ನಿರ್ದೇಶಕನೂ ಆಗಿದ್ದರಿಂದ ಅವರ ವಿರುದ್ಧ ದೂರು ದಾಖಲಾಗಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

ಸಂಭಾಲ್ ದೇವಸ್ಥಾನದಿಂದ ಸಾಯಿಬಾಬಾ ವಿಗ್ರಹಕ್ಕೆ ಗೇಟ್ ಪಾಸ್! ಗಂಗಾ ನದಿಯಲ್ಲಿ ವಿಸರ್ಜನೆ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

SCROLL FOR NEXT