ಸಂಗ್ರಹ ಚಿತ್ರ 
ದೇಶ

ಕಾಶ್ಮೀರದಲ್ಲಿ ಸಂವಹನ ಜಾಲ ಪುನರ್ ಸ್ಥಾಪಿಸುವಂತೆ ಮೋದಿಗೆ ಅಮೆರಿಕಾ ಕಾಂಗ್ರೆಸ್ಸಿಗರ ಒತ್ತಾಯ  

ಜಮ್ಮು- ಕಾಶ್ಮೀರದಲ್ಲಿನ ಮಾನವ ಹಕ್ಕುಗಳ ಪರಿಸ್ಥಿತಿ ಬಗ್ಗೆ ಭಾರತೀಯ ಮೂಲಕ ಅಮೆರಿಕಾದ ಚುನಾಯಿತ ಪ್ರತಿನಿಧಿ ಪ್ರಮೀಳಾ ಜೈಪಾಲ್ ಸೇರಿದಂತೆ ಇತರ 13 ಕಾಂಗ್ರೆಸ್ಸಿಗರು  ಕಳವಳ ವ್ಯಕ್ತಪಡಿಸಿದ್ದು,ಸಂವಹನ ಕಡಿತವನ್ನು ತೆರವುಗೊಳಿಸುವಂತೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಒತ್ತಾಯಿಸಿದ್ದಾರೆ.

ನವದೆಹಲಿ: ಜಮ್ಮು- ಕಾಶ್ಮೀರದಲ್ಲಿನ ಮಾನವ ಹಕ್ಕುಗಳ ಪರಿಸ್ಥಿತಿ ಬಗ್ಗೆ ಭಾರತೀಯ ಮೂಲಕ ಅಮೆರಿಕಾದ ಚುನಾಯಿತ ಪ್ರತಿನಿಧಿ ಪ್ರಮೀಳಾ ಜೈಪಾಲ್ ಸೇರಿದಂತೆ ಇತರ 13 ಕಾಂಗ್ರೆಸ್ಸಿಗರು  ಕಳವಳ ವ್ಯಕ್ತಪಡಿಸಿದ್ದು, ಸಂವಹನ ಕಡಿತವನ್ನು ತೆರವುಗೊಳಿಸುವಂತೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಒತ್ತಾಯಿಸಿದ್ದಾರೆ.

ಜಮ್ಮು- ಕಾಶ್ಮೀರದಲ್ಲಿರುವ ಕುಟುಂಬದೊಂದಿಗೆ ದೇಶದ ಇತರ ಕಡೆಗಳಲ್ಲಿ ವಾಸಿಸುತ್ತಿರುವ  ಸಹಸ್ರಾರು ಕುಟುಂಬ ಸದಸ್ಯರು ಸಂಪರ್ಕ ಸಾಧಿಸದಂತಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಸಂವಹನ ಜಾಲದ ಮೇಲಿನ ನಿರ್ಬಂಧವನ್ನು ತೆರವುಗೊಳಿಸಬೇಕೆಂದು ಒತ್ತಾಯಿಸಿರುವುದಾಗಿ ಜಂಟಿ ಹೇಳಿಕೆಯಲ್ಲಿ ಅಮೆರಿಕಾದ ಕಾಂಗ್ರೆಸ್ಸಿಗರು ತಿಳಿಸಿದ್ದಾರೆ. 

ಸಂವಿಧಾನದ 370ನೇ ವಿಧಿ ರದ್ದುಗೊಳಿಸಿ ಜಮ್ಮ- ಕಾಶ್ಮೀರ ಹಾಗೂ ಲಡಾಖ್ ಪ್ರದೇಶವನ್ನು ಕೇಂದ್ರಾಡಳಿತ ಪ್ರದೇಶವನ್ನಾಗಿ ಘೋಷಿಸಿದ ಬಳಿಕ ಆಗಸ್ಟ್ 5 ರಿಂದಲೂ ನಿರ್ಬಂಧ ಹೇರಲಾಗಿದೆ.

ಜಮ್ಮು- ಕಾಶ್ಮೀರದ ಜನತೆ ಕೂಡಾ ಇತರ ಭಾಗಗಳಲ್ಲಿನ ಜನರಂತೆ ತಮ್ಮ ಹಕ್ಕುಗಳನ್ನು ಅನುಭವಿಸುವ ಅಧಿಕಾರ ಹೊಂದಿದ್ದಾರೆ. ಭಾರತ ವಿಶ್ವದ ಅತ್ಯಂತ ದೊಡ್ಡ ಪ್ರಜಾಸತಾತ್ಮಕ ಹಾಗೂ ಅಮೆರಿಕಾದ ಪ್ರಮುಖ ಪಾಲುದಾರಿಕಾ ರಾಷ್ಟ್ರವಾಗಿದೆ. ಈ ನಂಬಿಕೆಯಿಂದಲೇ ಭಾರತ ಸರ್ಕಾರ ಕಣಿವೆ ರಾಜ್ಯದಲ್ಲಿ ಹೇರಿರುವ ನಿರ್ಬಂಧವನ್ನು ತೆರವುಗೊಳಿಸುವ ವಿಶ್ವಾಸ ಹೊಂದಿರುವುದಾಗಿ ಅವರು ಹೇಳಿದ್ದಾರೆ.

ಆಗಸ್ಟ್ 5 ರಿಂದಲೂ ಹಲವಾರು ರಾಜಕೀಯ ಮುಖಂಡರನ್ನು ಬಂಧಿಸಿ,  ಮೊಬೈಲ್ ಪೋನ್, ಇಂಟರ್ ನೆಟ್  ಮತ್ತಿತರ ಸಂಪರ್ಕ ಮಾಧ್ಯಮಗಳನ್ನು ಸ್ಥಗಿತಗೊಳಿಸಿರುವುದರಿಂದ ಅಮೆರಿಕಾ ಮತ್ತಿತರ ಕಡೆಗಳಲ್ಲಿ ವಾಸಿಸುತ್ತಿರುವ ಅವರ ಜಮ್ಮು- ಕಾಶ್ಮೀರದ ಕುಟುಂಬದ ಸದಸ್ಯರು ಸಂಪರ್ಕ ಸಾಧಿಸದಂತಾಗಿದೆ ಎಂದು ಅಮೆರಿಕಾ ಕಾಂಗ್ರೆಸ್ ಸದಸ್ಯರು ಕಳವಳ ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ವಿಶ್ವಕಪ್ ವಿಜೇತ ಕರ್ನಾಟಕದ ಅಂಧ ಕ್ರಿಕೆಟ್ ಆಟಗಾರ್ತಿಯರಿಗೆ ತಲಾ 10 ಲಕ್ಷ ರೂ ನಗದು, ಸರ್ಕಾರಿ ಉದ್ಯೋಗ: ಸಿಎಂ ಸಿದ್ದರಾಮಯ್ಯ ಘೋಷಣೆ

ನಾಯಕತ್ವ ಬದಲಾವಣೆ ಬಗ್ಗೆ ಸಾರ್ವಜನಿಕವಾಗಿ ಚರ್ಚಿಸಲು ಸಾಧ್ಯವಿಲ್ಲ: ಮಲ್ಲಿಕಾರ್ಜುನ ಖರ್ಗೆ

ಸ್ಮೃತಿ ಮಂಧಾನ ಮದುವೆ ಮುಂದೂಡಿಕೆಗೆ ಅಸಲಿ ಕಾರಣ? ಮತ್ತೊಂದು ಹೆಣ್ಣಿನೊಂದಿಗೆ ಮೋಹ, ನಂಬಿಕೆ ದ್ರೋಹ; ಬಯಲಾಯ್ತು ಪಲಾಶ್'ನ ಅಸಲಿ ರಂಗಿನಾಟ!

ಅಯೋಧ್ಯ ಧ್ವಜಾರೋಹಣ ನೆರವೇರಿಸಿದ್ದು ಹೇಗೆ?: ಸ್ವಿಚ್ ಅಥವಾ ಹಗ್ಗ ಬಳಸದ ಪ್ರಧಾನಿ; ಈ ಅದ್ಭುತ Video ನೋಡಿ..

SCROLL FOR NEXT