ಸಂಗ್ರಹ ಚಿತ್ರ 
ದೇಶ

ನವರಾತ್ರಿ ಆರಂಭ: ದುರ್ಗೆ ಆರಾಧನೆಗೆ ಸಜ್ಜಾದ ದೇಶ, ಬೆಳಿಗ್ಗೆಯಿಂದಲೇ ದೇಗುಲಕ್ಕೆ ತೆರಳುತ್ತಿರುವ ಜನತೆ

ನವರಾತ್ರಿ ಭಾನುವಾರದಿಂದ ಆರಂಭವಾಗಿದ್ದು, ನವರೂಪದಲ್ಲಿನ ವಿವಿಧ ಶಕ್ತಿ ದೇವಿಯ ಆರಾಧನೆಗೆ ಇಡೀ ದೇಶ ಸಜ್ಜಾಗಿದೆ. ನವರಾತ್ರಿಯ ಮೊದಲ ದಿನವಾದ ಇಂದು ಬೆಳಿಗ್ಗೆಯಿಂದಲೇ ದೇಶದ ಮೂಲೆಮೂಲೆಗಳಲ್ಲಿರುವ ಜನತೆ ದೇವಸ್ಥಾನಗಳಿಗೆ ಭೇಟಿ ನೀಡುತ್ತಿದ್ದಾರೆ. 

ನವದೆಹಲಿ: ನವರಾತ್ರಿ ಭಾನುವಾರದಿಂದ ಆರಂಭವಾಗಿದ್ದು, ನವರೂಪದಲ್ಲಿನ ವಿವಿಧ ಶಕ್ತಿ ದೇವಿಯ ಆರಾಧನೆಗೆ ಇಡೀ ದೇಶ ಸಜ್ಜಾಗಿದೆ. ನವರಾತ್ರಿಯ ಮೊದಲ ದಿನವಾದ ಇಂದು ಬೆಳಿಗ್ಗೆಯಿಂದಲೇ ದೇಶದ ಮೂಲೆಮೂಲೆಗಳಲ್ಲಿರುವ ಜನತೆ ದೇವಸ್ಥಾನಗಳಿಗೆ ಭೇಟಿ ನೀಡುತ್ತಿದ್ದಾರೆ. 

ನವರುರ್ಗಿಯರ ಪ್ರಸಿದ್ಧ ನವ ದೇಗುಲಗಳಾದ ಮುಂಬೈ, ಮಹಾರಾಷ್ಟ್ರದಲ್ಲಿರುವ ಹೆಡ್ಡಾವ್ದೆ ಮಹಾಲಕ್ಷ್ಮೀ ದೇಗುಲ, ಉತ್ತರಪ್ರದೇಶ ವಾರಣಾಸಿಯಲ್ಲಿರುವ ಬ್ರಹ್ಮಚಾರಿಣಿ ದೇವಿ ದೇವಸ್ಥಾನ, ಚಂದ್ರಘಂಟಾ ದೇವಿ ದೇಗುಲ, ಕಾಲ್ಪುರ ನಗರದ ಜಿಲ್ಲೆಯೊಂದರಲ್ಲಿರುವ ಕೂಷ್ಮಾಂಡಾ ದೇವಿ ದೇಗುಲ, ಮೈಸೂರಿನಲ್ಲಿರುವ ಚಾಂಮುಡೇಶ್ವರಿ ದೇಗುಲ, ವಾರಣಾಸಿಯ ಸ್ಕಂದಮಾತಾ ದೇವಿ ದೇಗುಲ, ವಾರಣಾಸಿಯ ಕಾಲರಾತ್ರಿ ದೇವಿ ದೇಗುಲ, ಲುಧಿಯಾನಾದಲ್ಲಿರುವ ಮಹಾಗೌರಿ ದೇವಸ್ಥಾನ ಹಾಗೂ ಮಧ್ಯಪ್ರದೇಶದ ಸಾಗರದಲ್ಲಿರುವ ಸಿದ್ಧಿಧಾತ್ರಿ ದೇವಿಡಿ ದೇಗುಲಗಳಲ್ಲಿ ಈಗಾಗಲೇ ಜನರು ಸಾಗರೋಪಾದಿಯಲ್ಲಿ ಹರಿದು ಬರುತ್ತಿದ್ದಾರೆ. 

ಇನ್ನು ದೆಹಲಿಯಲ್ಲಿರುವ ಕಲ್ಕಾಜಿ ದೇಗುಲ ಹಾಗೂ ಜಂಡೆವಾಲನ್ ದೇಗುಲದಲ್ಲಿ ವಿಶೇಷ ಅಲಂಕಾರವನ್ನು ಮಾಡಲಾಗಿದ್ದು, ಬೆಳಿಗ್ಗೆಯಿಂದಲೇ ದೇಗುಲಕ್ಕೆ ಭೇಟಿ ನೀಡುತ್ತಿರುವ ಜನರು, ದರ್ಶನ ಪಡೆಯುತ್ತಿದ್ದಾರೆ. 

ಪ್ರಸಕ್ತ ಸಾಲಿನಲ್ಲಿ ನವರಾತ್ರಿಯನ್ನು ಸೆ.29ರಿಂದ ಅಕ್ಟೋಬರ್ 7ರವರೆಗೂ ಆಚರಿಸಲಾಗುತ್ತಿದೆ. ನವರೂದಲ್ಲಿನ ವಿವಿಧ ಶಕ್ತಿ ದೇವಿಯ ಆರಾಧನೆಯೇ ನವರಾತ್ರಿಯಾಗಿದೆ. ಶಕ್ತಿ ಸ್ವರೂಪಣಿಯಾದ ದುರ್ಗೆ ದುಷ್ಟ ಸಂಹಾರಕ್ಕಾಗಿ ಈ ಸಮಯದಲ್ಲಿ 9 ಅವತಾರಗಳನ್ನು ತಾಳುತ್ತಾಳೆ. ಅಧರ್ಮ ಅಳಿಸಿ ಧರ್ಮ ಸೃಷ್ಟಿಸುವ ದುರ್ಗೆ, ಕಡೆಯ ದಿನ ಶಾಂತ ಸ್ವರೂಪಳಾಗುತ್ತಾಳೆ. ದೇಶದೆಲ್ಲೆಡೆ ಒಂಬತ್ತು ದಿನಗಳ ಕಾಲ ದುರ್ಗೆಯ ಶಕ್ತಿ ಪೂಜೆ ನಡೆಯುತ್ತದೆ. ಅದರಲ್ಲಿಯೂ ಕರ್ನಾಟಕದ ದುರ್ಗೆಯನ್ನು ಚಾಮುಂಡೇಶ್ವರಿ ಸ್ವರೂಪದಲ್ಲಿ ದಸರಾ ಸಂಭ್ರಮವಾಗಿ ಆಚರಿಸಲಾಗುತ್ತದೆ. 

ಮೈಸೂರಿನ ನವರಾತ್ರಿ ದಸರಾ ಸಂಭ್ರಮ ವಿಶ್ವವಿಖ್ಯಾತವಾಗಿದ್ದು, ವಿಜಯ ದಶಮಿಯಂದು ನಡೆಯುವ ಜಂಬೂ ಸಾವರಿಯನ್ನು ನೋಡಲು ದೇಶ ಹಾಗೂ ವಿದೇಶದಿಂದ ಜನರು ಆಗಮಿಸುತ್ತಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಯುಕ್ರೇನ್-ರಷ್ಯಾ ಶಾಂತಿ ಒಪ್ಪಂದ ಸನಿಹ: ಸುಳಿವು ನೀಡಿದ ಯುಕ್ರೇನ್

2026 T20 ವಿಶ್ವಕಪ್: ಕೊಲಂಬೋದಲ್ಲಿ ಫೆ.15 ರಂದು ಭಾರತ- ಪಾಕ್ ಪಂದ್ಯ

ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು: ಸಿಎಂ, ಡಿಸಿಎಂ ಸಂತಾಪ

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ರಾಸಾಯನಿಕಗಳು, ಎಲೆಕ್ಟ್ರಾನಿಕ್ ಘಟಕಗಳ ಸುಲಭ ಲಭ್ಯತೆಯಿಂದ ಐಇಡಿ ಅಪಾಯ ಹೆಚ್ಚು: NSG

SCROLL FOR NEXT