ಸಂಗ್ರಹ ಚಿತ್ರ 
ದೇಶ

ಡಿಆರ್ ಡಿಒ ದಿಂದ ಭೂದಾಳಿ ಸಾಮರ್ಥ್ಯದ ಬ್ರಹ್ಮೋಸ್ ಕ್ಷಿಪಣಿ ಯಶಸ್ವೀ ಪರೀಕ್ಷೆ

ಭಾರತೀಯ ರಕ್ಷಣಾ ಮತ್ತು ಸಂಶೋಧನಾ ಸಂಸ್ಥೆ ಡಿಆರ್ ಡಿಒ ಭಾರತದ ಅತ್ಯಂತ ಯಶಸ್ವೀ ಕ್ಷಿಪಣಿ ಬ್ರಹ್ಮೋಸ್ ನ ಭೂದಾಳಿ ಮಾದರಿಯ ಪ್ರಯೋಗ ಯಶಸ್ವಿಯಾಗಿ ನೆರವೇರಿಸಿದೆ.

450 ಕಿಮೀ ದೂರದ ಗುರಿಗಳನ್ನು ಹೊಡೆದುರುಳಿಸಬಲ್ಲ ಸಾಮರ್ಥ್ಯದ ಬ್ರಹ್ಮೋಸ್ ಕ್ಷಿಪಣಿ

ನವದೆಹಲಿ: ಭಾರತೀಯ ರಕ್ಷಣಾ ಮತ್ತು ಸಂಶೋಧನಾ ಸಂಸ್ಥೆ ಡಿಆರ್ ಡಿಒ ಭಾರತದ ಅತ್ಯಂತ ಯಶಸ್ವೀ ಕ್ಷಿಪಣಿ ಬ್ರಹ್ಮೋಸ್ ನ ಭೂದಾಳಿ ಮಾದರಿಯ ಪ್ರಯೋಗ ಯಶಸ್ವಿಯಾಗಿ ನೆರವೇರಿಸಿದೆ.

ಒಡಿಶಾದ ಬಾಲಾಸೋರ್ ನಲ್ಲಿ ಬ್ರಹ್ಮೋಸ್ ಭೂದಾಳಿ ಮಾದರಿ ಕ್ಷಿಪಣಿಯನ್ನು ಇಂದು ಪರೀಕ್ಷೆಗೊಳಪಡಿಸಲಾಗಿದ್ದು, ಪರೀಕ್ಷೆಯಲ್ಲಿ ಕ್ಷಿಪಣಿ ಯಶಸ್ವಿಯಾಗಿ ಗುರಿ ಮುಟ್ಟಿದೆ ಎನ್ನಲಾಗಿದೆ. ಕ್ಷಿಪಣಿ ರವಾನೆ, ಸಂಗ್ರಹಣೆ ಮತ್ತು ಉಡಾವಣೆಗಾಗಿ ಸಾರಿಗೆ ಉಡಾವಣಾ ಡಬ್ಬಿ (ಟಿಎಲ್‌ಸಿ-ಟ್ರಾನ್ಸ್ ಪೋರ್ಟ್ ಲಾಂಚ್ ಕ್ಯಾನಿಸ್ಟರ್) ಮೂಲಕ ಉಡಾವಣೆ ಮಾಡಲಾಯಿತು. ಭೂ ದಾಳಿ ಸಾಮರ್ಥ್ಯದ ಈ ಬ್ರಹ್ಮೋಸ್ ಕ್ಷಿಪಣಿ ಸುಮಾರು 450 ಕಿಮೀ ದೂರದ ಗುರಿಗಳನ್ನು ಹೊಡೆದುರುಳಿಸಬಲ್ಲ ಸಾಮರ್ಥ್ಯ ಹೊಂದಿದೆ. ಅಂತೆಯೇ ಆಗಸದಲ್ಲಿ ಗರಿಷ್ಠ 15 ಕಿ.ಮೀ ಎತ್ತರದವರೆಗೂ ಹಾರುವ ಈ ಕ್ಷಿಪಣಿ ಭೂಮಿಯ ಮೇಲ್ಮೈ ಮೇಲೆ ಕನಿಷ್ಠ 15 ಮೀಟರ್ ಎತರದಲ್ಲಿ ಹಾರಾಟ ನಡೆಸುವ ಸಾಮರ್ಥ್ಯಹೊಂದಿದೆ.

ಈ ಬ್ರಹ್ಮೋಸ್ ಕ್ಷಿಪಣಿ ಅಪ್ ಗ್ರೇಡೆಡ್ ಗೈಡೆಡ್ ಸಿಸ್ಟಮ್ ಹೊಂದಿದ್ದು, ಇದರಿಂದ ಕ್ಷಿಪಣಿ ಗುರಿಗಳ ಮೇಲೆ ನಿಖರವಾಗಿ ದಾಳಿ ಮಾಡುವಂತೆ ನಿಯಂತ್ರಿಸಬಹುದಾಗಿದೆ.2017 ಮಾರ್ಚ್ 11ರಂದು ಈ ಕ್ಷಿಪಣಿಯನ್ನು ಮೊದಲ ಬಾರಿಗೆ ಪರೀಕ್ಷೆಗೆ ಒಳಪಡಿಸಲಾಗಿತ್ತು.  ಇದೀಗ ಅದರ ದೂರಗಾಮಿ ಸಾಮರ್ಥ್ಯವನ್ನು ವೃದ್ಧಿಸಿ ಮತ್ತೆ ಪರೀಕ್ಷೆಗೊಳಪಡಿಸಲಾಗಿದೆ. ಈ ಕ್ಷಿಪಣಿಯ ವಿಶೇಷತೆ ಎಂದರೆ ಈ ಹಿಂದಿನ 290 ಕಿ.ಮೀ ದೂರ ಸಾಮರ್ಥ್ಯದ ಕ್ಷಿಪಣಿ ಬಳಕೆ ಮಾಡುತ್ತಿದ್ದ ಅಷ್ಟೇ ಪ್ರಮಾಣದ ಇಂಧನವನ್ನು ಈ ಕ್ಷಿಪಣಿಯೂ ಬಳಕೆ ಮಾಡಿಕೊಂಡು 450 ಕಿ.ಮೀ ದೂರದ ಗುರಿಗಳನ್ನು ಯಶಸ್ವಿಯಾಗಿ ಛಿದ್ರ ಮಾಡುತ್ತದೆ. 

ಅಲ್ಲದೆ ಕ್ಷಿಪಣಿಯ ಇಂಧನ ಬಳಕೆಯನ್ನು ಕಂಪ್ಯೂಟರ್ ಆಧಾರಿತ ಪ್ರೋಗ್ರಾಮ್ ಗಳಿಂದ ನಿಯಂತ್ರಿಸಬಹುದು ಎಂದು ವಿಜ್ಞಾನಿಗಳು ಹೇಳಿದ್ದಾರೆ. ಅಂತೆಯೇ ಈ ಕ್ಷಿಪಣಿಯು ಸುಮಾರು 200 ರಿಂದ 300 ಕಿಲೋಗ್ರಾಂ ತೂಕದ ಸಿಡಿತಲೆಗಳನ್ನು ಹೊತ್ತೊಯ್ಯು ಸಾಮರ್ಥ್ಯವನ್ನು ಕೂಡ ಹೊಂದಿದೆ. 

ಇನ್ನು ಈ ಭೂ ದಾಳಿ ಸಾಮರ್ಥ್ಯದ ಕ್ಷಿಪಣಿಯು ಫೈರ್ ಅಂಡ್ ಫರ್ಗೆಟ್ (ಕ್ಷಿಪಣಿ ಉಡಾಯಿಸಿ, ಮರೆತು ಬಿಡಿ) ಸಾಮರ್ಥ್ಯವನ್ನು ಹೊಂದಿದೆ. ಅಂದರೆ ನಿಖರ ದಾಳಿಯನ್ನು ಕ್ಷಿಪಣಿಗೆ ತೋರಿ ಉಡಾವಣೆ ಮಾಡಿದರೆ ಕ್ಷಿಪಣಿ ಆ ಗುರಿಯು ಹೇಗೇ ಚಲಿಸಿದರೂ ಅದನ್ನು ಕ್ಷಣ ಮಾತ್ರದಲ್ಲಿ ಛಿದ್ರ ಮಾಡುತ್ತದೆ. ಇದಕ್ಕೆ ಕ್ಷಿಪಣಿಯಲ್ಲಿನ ನ್ಯಾವಿಗೇಷನ್ ಪ್ರೋಗ್ರಾಂ ಸಹಾಯಕವಾಗುತ್ತದೆ. ಅಲ್ಲದೆ ಈ ಕ್ಷಿಪಣಿಯು ಭೂಮಿ, ಸಮುದ್ರದ ಮೇಲಿನ ಗುರಿಗಳನ್ನು ಹೊಡೆದುರುಳಿಸುವ ಸಾಮರ್ಥ್ಯವನ್ನು ಹೊಂದಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT