ಐಐಟಿ ಮದ್ರಾಸ್ ನಲ್ಲಿ ಪ್ರಧಾನಿ ನರೇಂದ್ರ ಮೋದಿ 
ದೇಶ

ಜಾಗತಿಕ ಬಳಕೆಗೆ ಪರಿಹಾರ ಕಂಡುಹಿಡಿಯುವ ಗುರಿ ಮತ್ತು ಬದ್ಧತೆ ಭಾರತದ ಮುಂದಿದೆ: ಪ್ರಧಾನಿ ಮೋದಿ 

ವಿಶ್ವಾದ್ಯಂತ ಎಲ್ಲರ ಬಳಕೆಗಾಗಿ ಭಾರತೀಯ ಸಂಶೋಧನಾ ಪರಿಸರ ವ್ಯವಸ್ಥೆ ಸಹಾಯವಾಗುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಶ್ಲಾಘಿಸಿದ್ದಾರೆ. 

ಚೆನ್ನೈ: ವಿಶ್ವಾದ್ಯಂತ ಎಲ್ಲರ ಬಳಕೆಗಾಗಿ ಭಾರತೀಯ ಸಂಶೋಧನಾ ಪರಿಸರ ವ್ಯವಸ್ಥೆ ಸಹಾಯವಾಗುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಶ್ಲಾಘಿಸಿದ್ದಾರೆ.


ಚೆನ್ನೈಯ ಐಐಟಿ ಮದ್ರಾಸ್ ನಲ್ಲಿಂದು ಮೋದಿಯವರು ಸಿಂಗಾಪುರ-ಭಾರತ ಹ್ಯಾಕಥಾನ್ 2019ನ್ನು ಉದ್ದೇಶಿಸಿ ಮಾತನಾಡಿ, ಶಾಲಾ ಹಂತದಿಂದ ಉನ್ನತ ಶಿಕ್ಷಣ, ಸಂಶೋಧನೆಯವರೆಗಿನ ಪರಿಸರ ವ್ಯವಸ್ಥೆಯನ್ನು ರಚಿಸಲಾಗಿದ್ದು ಅದು ಸಂಶೋಧನೆಗೆ ಮಾಧ್ಯಮವಾಗಿ ಕೆಲಸ ಮಾಡುತ್ತಿದೆ. ಸ್ಟಾರ್ಟ್ ಅಪ್ ವ್ಯವಸ್ಥೆಯಲ್ಲಿ ಪ್ರಮುಖ ಮೂರು ದೇಶಗಳ ಸಾಲಿನಲ್ಲಿ ನಮ್ಮ ದೇಶ ಮೂರನೇ ಸ್ಥಾನದಲ್ಲಿದೆ ಎಂದರು.


ಭಾರತವು 5 ಟ್ರಿಲಿಯನ್ ಅಮೆರಿಕನ್ ಡಾಲರ್ ಆರ್ಥಿಕತೆ ಮತ್ತು ನಾವೀನ್ಯತೆ ಪಡೆಯಲು ಸಜ್ಜಾಗಿದ್ದು, ಸ್ಟಾರ್ಟ್ ಅಪ್ ಗಳು ನಿರ್ಣಾಯಕ ಪಾತ್ರ ವಹಿಸುತ್ತವೆ ಎಂದು ಹೇಳಿದರು.


ನಾವು ಎರಡು ದೊಡ್ಡ ಕಾರಣಗಳಿಗಾಗಿ ನಾವೀನ್ಯತೆ ಮತ್ತು ಕಾಲಾವಧಿಯನ್ನು ಪ್ರೋತ್ಸಾಹಿಸುತ್ತಿದ್ದೇವೆ - ಒಂದು ಜೀವನವನ್ನು ಸುಲಭಗೊಳಿಸಲು ಭಾರತದ ನಾವೀನ್ಯ ಪರಿಸರ ವ್ಯವಸ್ಥೆ ಮೂಲಕ ಪರಿಹಾರಗಳನ್ನು ಕಂಡುಹಿಡಿಯುವುದು ಮತ್ತು ಇನ್ನೊಂದು ಇಡೀ ವಿಶ್ವದ ಜಾಗತಿಕ ಬಳಕೆಗಳಿಗೆ ಪರಿಹಾರ ಒದಗಿಸುವುದು. ಭಾರತದ ಮುಂದೆ ಈ ಎರಡು ಗುರಿ ಮತ್ತು ಬದ್ಧತೆಗಳಿವೆ ಎಂದು ಹೇಳಿದರು.


ಹ್ಯಾಕಥಾನ್ ನಲ್ಲಿ ಭಾಗಿಯಾದವರು ಒಂದು ಕ್ಯಾಮರಾ ಸೃಷ್ಟಿ ಮಾಡಿರುವುದನ್ನು ಉಲ್ಲೇಖಿಸಿದ ಅವರು ಇದು ನಮ್ಮ ಸಂಸತ್ತಿಗೆ ಉಪಯೋಗವಾಗಬಹುದು. ಲೋಕಸಭಾಧ್ಯಕ್ಷ ಓಂ ಬಿರ್ಲಾ ಅವರ ಜೊತೆ ಈ ಕುರಿತು ಮಾತನಾಡುತ್ತೇನೆ. ಸಂಸತ್ತಿನಲ್ಲಿ ಯಾರು ಗಮನವಿಟ್ಟು ಕೇಳುತ್ತಾರೆ, ಯಾರು ಏನು ಮಾಡುತ್ತಾರೆ ಎಂದು ತಿಳಿದುಕೊಳ್ಳಲು ಈ ಕ್ಯಾಮರಾ ಸಹಾಯವಾಗಬಹುದು ಎಂದಾಗ ಸಭೆಯಲ್ಲಿದ್ದವರು ನಗೆಗಡಲಲ್ಲಿ ತೇಲಿಹೋದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಜೂನ್ 30ರೊಳಗೆ ಮುಗಿಸಿ: ರಾಜ್ಯ ಸರ್ಕಾರಕ್ಕೆ 'ಸುಪ್ರೀಂ' ಗಡುವು

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

ಕ್ರಿಕೆಟ್ ಇತಿಹಾಸದಲ್ಲೇ ಮೊದಲು: ಅಂತಾರಾಷ್ಟ್ರೀಯ ಕ್ರಿಕೆಟ್ ಲೀಗ್ ನಲ್ಲಿ ಜೊತೆಯಾಗಿ ಕಣಕ್ಕಿಳಿದ ಅಪ್ಪ-ಮಗ.. ಯಾರಿವರು?

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

SCROLL FOR NEXT