ದೇಶ

1-8 ವರೆಗಿನ ತರಗತಿಗಳ ವಿದ್ಯಾರ್ಥಿಗಳ ತೇರ್ಗಡೆ ಮಾಡಲು ಸಿಬಿಎಸ್ಇ ಗೆ ಸೂಚನೆ 

Srinivas Rao BV

ನವದೆಹಲಿ: 1-8 ವರೆಗಿನ ತರಗತಿಗಳ ವಿದ್ಯಾರ್ಥಿಗಳನ್ನು ಮುಂದಿನ ತರಗತಿಗಳಿಗೆ ತೇರ್ಗಡೆ ಮಾಡುವಂತೆ ಸಿಬಿಎಸ್ಇ ಗೆ ಕೇಂದ್ರ ಮಾನವ ಸಂಪನ್ಮೂಲ ಸಚಿವಾಲಯ ಸೂಚನೆ ನೀಡಿದೆ. 

ಕೊರೋನಾ ವೈರಸ್ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಮುಂದಿನ ತರಗತಿಗಳಿಗೆ ವಿದ್ಯಾರ್ಥಿಗಳನ್ನು ತೇರ್ಗಡೆ ಮಾಡುವಂತೆ ಸೂಚನೆ ನೀಡಲಾಗಿದೆ ಎಂದು ಕೇಂದ್ರ ಮಾನವ ಸಂಪನ್ಮೂಲ ಇಲಾಖೆ ಸಚಿವ ರಮೇಶ್ ಪೋಖ್ರಿಯಾಲ್ ಟ್ವೀಟ್ ಮೂಲಕ ತಿಳಿಸಿದ್ದಾರೆ. 
 

9-11 ತರಗತಿ ಶಾಲೆಗಳ ವಿದ್ಯಾರ್ಥಿಗಳನ್ನು ಈ ವರೆಗೂ ನಡೆಸಲಾದ ಶಾಲಾ ಆಧಾರಿತ ಮೌಲ್ಯಮಾಪನಗಳ ಆಧಾರದಲ್ಲಿ ಮುಂದಿನ ತರಗತಿಗಳಿಗೆ ತೇರ್ಗಡೆ ಮಾಡಲಾಗುವುದು ತೇರ್ಗಡೆಯಾಗದೇ ಇರುವವರು ಆನ್ ಲೈನ್ ಅಥವಾ ಆಫ್ ಲೈನ್ ನಲ್ಲಿ ಶಾಲಾ ಆಧಾರಿತ ಪರೀಕ್ಷೆಗಳನ್ನು ತೆಗೆದುಕೊಳ್ಳಬಹುದು ಎಂದು ಸಚಿವರು ತಿಳಿಸಿದ್ದಾರೆ. 

SCROLL FOR NEXT