ಕ್ವಾರಂಟೈನ್ ಕೇಂದ್ರ 
ದೇಶ

ದೆಹಲಿ: ಪ್ರಾಣ ಪಣಕ್ಕಿಟ್ಟು ಕೊರೋನಾ ವಿರುದ್ಧ ಹೋರಾಡುತ್ತಿರುವ ವೈದ್ಯರ ಮೇಲೆ ಉಗುಳುತ್ತಿರುವ ಕ್ವಾರಂಟೈನ್ ನಲ್ಲಿರುವ ಜಮಾತ್ ಕಾರ್ಯಕರ್ತರು!

ತಮ್ಮ ಪ್ರಾಣವನ್ನೇ ಪಣಕ್ಕಿಟ್ಟು ಸೋಂಕಿತರ ರಕ್ಷಣೆ ಮಾಡಲು ಹಗಲು ರಾತ್ರಿ ದುಡಿಯುತ್ತಿರುವ ವೈದ್ಯರು ಮತ್ತು ವೈದ್ಯಕೀಯ ಸಿಬ್ಬಂದಿಗಳ ಮೇಲೆ ಕ್ವಾರಂಟೈನ್ ನಲ್ಲಿರುವ ಜಮಾತ್ ಕಾರ್ಯಕರ್ತರು ಉಗುಳುತ್ತಿರುವ ಘೋರ ಘಟನೆ ದೆಹಲಿಯಲ್ಲಿ ನಡೆದಿದೆ.

ನವದೆಹಲಿ: ತಮ್ಮ ಪ್ರಾಣವನ್ನೇ ಪಣಕ್ಕಿಟ್ಟು ಸೋಂಕಿತರ ರಕ್ಷಣೆ ಮಾಡಲು ಹಗಲು ರಾತ್ರಿ ದುಡಿಯುತ್ತಿರುವ ವೈದ್ಯರು ಮತ್ತು ವೈದ್ಯಕೀಯ ಸಿಬ್ಬಂದಿಗಳ ಮೇಲೆ ಕ್ವಾರಂಟೈನ್ ನಲ್ಲಿರುವ ಜಮಾತ್ ಕಾರ್ಯಕರ್ತರು ಉಗುಳುತ್ತಿರುವ ಘೋರ ಘಟನೆ ದೆಹಲಿಯಲ್ಲಿ ನಡೆದಿದೆ.

ದೆಹಲಿಯ ನಿಜಾಮುದ್ದೀನ್ ಪ್ರದೇಶದಲ್ಲಿರುವ ತಬ್ಲೀಘಿ ಜಮಾತ್ ಮಸೀದಿಯಿಂದ ವಶಕ್ಕೆ ಪಡೆಯಲಾದ ತಬ್ಲೀಘಿ ಜಮಾತ್ ಕಾರ್ಯಕರ್ತರನ್ನು ಕ್ವಾರಂಟೈನ್ ಮಾಡಲಾಗಿದ್ದು, ಅವರ ಮೇಲ್ವಿಚಾರಣೆ ಮತ್ತು ಚಿಕಿತ್ಸೆಗಾಗಿ ವೈದ್ಯರು ಮತ್ತು ವೈದ್ಯಕೀಯ ಸಿಬ್ಬಂದಿಗಳನ್ನು ನೇಮಕ  ಮಾಡಲಾಗಿದೆ. ಆದರೆ ಈ ವೈದ್ಯರು ಮತ್ತು ಸಿಬ್ಬಂದಿಗಳ ವಿರುದ್ಧವೇ ಜಮಾತ್ ಕಾರ್ಯಕರ್ತರು ಅಸಭ್ಯವಾಗಿ ವರ್ತಿಸುತ್ತಿದ್ದು, ವೈದ್ಯರು ಮತ್ತು ವೈದ್ಯಕೀಯ ಸಿಬ್ಬಂದಿಗಳ ಮೇಲೆ ಅವಾಚ್ಯ ಶಬ್ಧಗಳಿಂದ ನಿಂದಿಸಿ ಉಗುತ್ತಿದ್ದಾರೆ.

ದೆಹಲಿಯಲ್ಲಿರುವ ರೈಲ್ವೇ ಇಲಾಖೆಯ ಕ್ವಾರಂಟೈನ್ ವಿಭಾಗದಲ್ಲಿ ಈ ಘಟನೆ ನಡೆದಿದ್ದು, ಕ್ವಾರಂಟೈನ್ ಗೃಹದಲ್ಲಿ ಅಡ್ಡಾದಿಡ್ಡಿ ಓಡಾಡತ್ತಿದ್ದ ಕಾರ್ಯಕರ್ತರನ್ನು ಸಿಬ್ಬಂದಿ ತಡೆದಿದ್ದರು. ಈ ವೇಳೆ ಸಿಬ್ಬಂದಿಗಳೊಂದಿಗೆ ಅವರು ವಾಗ್ವಾದ ನಡೆಸಿದ್ದು, ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಅಲ್ಲದೆ  ಊಟದ ವಿಚಾರವಾಗಿ ಮತ್ತೆ ತಗಾದೆ ತೆಗೆದು ವೈದ್ಯರು ಸಿಬ್ಬಂದಿಗಳ ಮೇಲೆ ಉಗುಳಿದ್ದಾರೆ ಎಂದು ಉತ್ತರ ರೈಲ್ವೆ ಅಧಿಕಾರಿ ದೀಪಕ್ ಕುಮಾರ್ ತಿಳಿಸಿದ್ದಾರೆ. ಅಲ್ಲದೆ ಜಮಾತ್ ಕಾರ್ಯಕರ್ತರನ್ನು ಬೇರೆ ಸೂಕ್ತ ಸ್ಥಳಗಳಿಗೆ ರವಾನೆ ಮಾಡುವಂತೆ ಜಿಲ್ಲಾಧಿಕಾರಿಗಳಿಗೆ ಸಿಬ್ಬಂದಿಗಳು ಮನವಿ  ಮಾಡಿದ್ದಾರೆ. 

ಈ ವಿಚಾರ ತಿಳಿಯುತ್ತಿದ್ದಂತೆಯೇ ಜಮಾತ್ ಕಾರ್ಯಕರ್ತರು ಇರುವ ಕ್ವಾರಂಟೈನ್ ಕೇಂದ್ರಕ್ಕೆ ಇಂದು ಸಂಜೆ 4 ಪೊಲೀಸ್ ಪೇದೆಗಳು, 6 ಶಸ್ತ್ರಸಜ್ಜಿತ ಸಿಆರ್ ಪಿಎಫ್ ಯೋಧರು, ಪಿಸಿಆರ್ ವ್ಯಾನ್ ಅನ್ನು ಕರ್ತವ್ಯ ಪಾಲನೆಗೆ ನಿಯೋಜಿಸಲಾಗಿದೆ. ಪ್ರಸ್ತುತ ಈ ಕ್ವಾರಂಟೈನ್ ಕೇಂದ್ರದಲ್ಲಿ  ಒಟ್ಟು 167 ಜಮಾತ್ ಕಾರ್ಯಕರ್ತರನ್ನು ಇಡಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT