ಸಾಂದರ್ಭಿಕ ಚಿತ್ರ 
ದೇಶ

ತೆಲಂಗಾಣದಲ್ಲಿ ಮತ್ತೆ ಮೂವರ ಸಾವು, 30 ಹೊಸ ಪ್ರಕರಣ: ಆತಂಕದಲ್ಲಿ ಜನ

ತೆಲಂಗಾಣದಲ್ಲಿ ಕೊರೊನಾ ಸೋಂಕಿನಿಂದಾಗಿ  ಬುಧವಾರ ಮೂವರು ಸಾವಿಗೀಡಾಗಿದ್ದಾರೆ. ಇವರೆಲ್ಲರೂ ಕಳೆದ ತಿಂಗಳು ದೆಹಲಿಯ ನಿಜಾಮುದ್ದೀನ್‌ ಪ್ರದೇಶದಲ್ಲಿ ನಡೆದಿದ್ದ ತಬ್ಲೀಗ್‌ ಜಮಾತ್‌ನ ಧಾರ್ಮಿಕ ಸಭೆಯಲ್ಲಿ ಭಾಗವಹಿಸಿದ್ದರು. 

ಹೈದರಾಬಾದ್ : ತೆಲಂಗಾಣದಲ್ಲಿ ಕೊರೊನಾ ಸೋಂಕಿನಿಂದಾಗಿ  ಬುಧವಾರ ಮೂವರು ಸಾವಿಗೀಡಾಗಿದ್ದಾರೆ. ಇವರೆಲ್ಲರೂ ಕಳೆದ ತಿಂಗಳು ದೆಹಲಿಯ ನಿಜಾಮುದ್ದೀನ್‌ ಪ್ರದೇಶದಲ್ಲಿ ನಡೆದಿದ್ದ ತಬ್ಲೀಗ್‌ ಜಮಾತ್‌ನ ಧಾರ್ಮಿಕ ಸಭೆಯಲ್ಲಿ ಭಾಗವಹಿಸಿದ್ದರು. 

ಕೋವಿಡ್‌–19 ದೃಢಪಟ್ಟ ಮೂವತ್ತು ಹೊಸ ಪ್ರಕರಣಗಳು ತೆಲಂಗಾಣದಲ್ಲಿ ವರದಿಯಾಗಿರುವುದಾಗಿ ಗುರುವಾರ ಮುಖ್ಯಮಂತ್ರಿ ಕೆ.ಚಂದ್ರಶೇಖರ್‌ ರಾವ್ ಕಚೇರಿಯ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಲಾಗಿದೆ. 

ಸೋಂಕಿನಿಂದಾಗಿ ಈ ಹಿಂದೆ ರಾಜ್ಯದಲ್ಲಿ ಮೃತಪಟ್ಟಿರುವ ಆರು ಮಂದಿ ಸಹ ತಬ್ಲೀಗ್‌ ಜಮಾತ್‌ನ ಧಾರ್ಮಿಕ ಸಭೆಯಲ್ಲಿ ಭಾಗಿವಹಿಸಿದ್ದರು. ಬುಧವಾರ ಮೂವರು ಸಾವಿಗೀಡಾಗುವ ಮೂಲಕ ಒಟ್ಟು ಸಾವಿನ ಸಂಖ್ಯೆ 9ಕ್ಕೆ ಏರಿಕೆಯಾಗಿದೆ. ಪ್ರಸ್ತುತ ಸೋಂಕು ದೃಢಪಟ್ಟಿರುವ ಎಲ್ಲ 30 ಮಂದಿಯೂ ದೆಹಲಿಯ ನಿಜಾಮುದ್ದೀನ್‌ಗೆ ಭೇಟಿ ನೀಡಿದ ಹಿನ್ನೆಲೆ ಹೊಂದಿದ್ದಾರೆ. 

ದೇಶದ ಎಲ್ಲ ರಾಜ್ಯಗಳು ಹಾಗೂ ಕೇಂದ್ರಾಡಳಿ ಪ್ರದೇಶಗಳು ಬಿಡುಗಡೆ ಮಾಡಿರುವ ಮಾಹಿತಿ ಪ್ರಕಾರ, ಕಳೆದ ತಿಂಗಳು ನಿಜಾಮುದ್ದೀನ್‌ನಲ್ಲಿ ನಡೆದ ಸಭೆಯಲ್ಲಿ ಸುಮಾರು 8,500 ಮಂದಿ ಭಾಗಿಯಾಗಿದ್ದು, ಅವರೆಲ್ಲರ ಗುರುತು ಪತ್ತೆ ಮಾಡಬೇಕಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 30 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಡಿಕೆಶಿ RSS ಗೀತೆ ಹೇಳಿದ್ದೂ ರಾಹುಲ್‌ ಗಾಂಧಿಗೆ ತಲುಪಲಿ: ಶಾಕ್ ಕೊಟ್ಟ ಸತೀಶ್‌ ಜಾರಕಿಹೊಳಿ ಹೇಳಿಕೆ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

SCROLL FOR NEXT