ಆರೋಗ್ಯ, ರೋಗ ನಿರೋಧಕ ಶಕ್ತಿಗೆ ಈ ಪದಾರ್ಥ 
ದೇಶ

ಆರೋಗ್ಯ, ರೋಗ ನಿರೋಧಕ ಶಕ್ತಿಗೆ ಈ ಪದಾರ್ಥಗಳ ಬಳಸಿ: ಆಯುಷ್ ಸಚಿವಾಲಯ

ಜೀರಿಗೆ, ಕೊತ್ತಂಬರಿ ಹಾಗೂ ಬೆಳ್ಳುಳ್ಳಿಯನ್ನು ತಮ್ಮ ಆಹಾರದಲ್ಲಿ ಉಪಯೋಗಿಸಬೇಕು ಎಂದು ಆಯುಷ್ ಸಚಿವಾಲಯ ಸಲಹೆ ನೀಡಿದೆ. ದೇಹದ ಆರೋಗ್ಯ ಉತ್ತಮಗೊಳ್ಳಲು, ರೋಗ ನಿರೋಧಕ ಶಕ್ತಿ ಸುಧಾರಿಸಲು ಈ ಪದಾರ್ಥಗಳು ಪ್ರಮುಖ ಪಾತ್ರವಹಿಸುತ್ತವೆ

ನವದೆಹಲಿ: ಕೊರೊನಾ ವೈರಸ್ ಇಡೀ ಪ್ರಪಂಚವನ್ನು ನಡುಗಿಸುತ್ತಿದೆ. ಮಹಾಮಾರಿ ಸೋಂಕಿನಿಂದ ಸಾವಿರಾರು ಜನರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಕೋವಿಡ್ -19 ರೋಗ ಬರದಂತೆ ತಡೆಯಲು ರೋಗನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳುವುದು ಮುಖ್ಯ ಎಂದು ಆಯುಷ್ ಸಚಿವಾಲಯ ಸಲಹೆ ನೀಡಿದೆ.

ಇದಕ್ಕಾಗಿ ಕಾಯಿಸಿದ ನೀರು ಕುಡಿಯಬೇಕು. ಪ್ರಾಣಾಯಾಮ ಹಾಗೂ 30 ನಿಮಿಷ ಧ್ಯಾನ ಮಾಡಬೇಕು ಎಂದು ಸಚಿವಾಲಯ ತಿಳಿಸಿದೆ. ಇದಲ್ಲದೆ, ಜೀರಿಗೆ, ಕೊತ್ತಂಬರಿ ಹಾಗೂ ಬೆಳ್ಳುಳ್ಳಿಯನ್ನು ತಮ್ಮ ಆಹಾರದಲ್ಲಿ ಉಪಯೋಗಿಸಬೇಕು ಎಂದು ಆಯುಷ್ ಸಚಿವಾಲಯ ಸಲಹೆ ನೀಡಿದೆ. ದೇಹದ ಆರೋಗ್ಯ ಉತ್ತಮಗೊಳ್ಳಲು, ರೋಗ ನಿರೋಧಕ ಶಕ್ತಿ ಸುಧಾರಿಸಲು ಈ ಪದಾರ್ಥಗಳು ಪ್ರಮುಖ ಪಾತ್ರವಹಿಸುತ್ತವೆ ಎಂದು ಸಚಿವಾಲಯ ತಿಳಿಸಿದೆ. 

ಆಯುಷ್ ಸಚಿವಾಲಯದ ಸೂಚನೆಗಳನ್ನು ಎಲ್ಲರೂ ಪಾಲಿಸಬೇಕೆಂದು ಪ್ರಧಾನಿ ನರೇಂದ್ರ ಮೋದಿ ಕೋರಿದ್ದಾರೆ. ಕೋವಿಡ್ -19 ಶಮನಕ್ಕೆ ಪ್ರಸ್ತುತ ಯಾವುದೇ ಔಷಧಿ ಇಲ್ಲ. ರೋಗ ಗುಣಪಡಿಸುವುದಕ್ಕಿಂತ ಅದನ್ನು ಬರದಂತೆ ತಡೆಗಟ್ಟುವುದು ಉತ್ತಮ ಎಂದು ನಮಗೆಲ್ಲರಿಗೂ ತಿಳಿದಿದೆ. ಆದ್ದರಿಂದ ಆಯುಷ್ ಸಚಿವಾಲಯ ನೀಡಿದ ಸಲಹೆಗಳನ್ನು ಅನುಸರಿಸಿ ಎಂದು ಮೋದಿ ಟ್ವೀಟ್ ಮಾಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಾಂವಿಧಾನಿಕ ಕರ್ತವ್ಯಗಳು ಪ್ರಜಾಪ್ರಭುತ್ವದ ಅಡಿಪಾಯ: ದೇಶದ ನಾಗರಿಕರಿಗೆ ಪ್ರಧಾನಿ ಮೋದಿ ಪತ್ರ

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್​ ನ್ಯೂಸ್​: ಹಳದಿ ಮಾರ್ಗದ ಸಂಚಾರ ಸೋಮವಾರ ಬೆಳಗ್ಗೆ 5 ಗಂಟೆಯಿಂದಲೇ ಶುರು..!

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಸಿಎಂ ಹುದ್ದೆ ಗುದ್ದಾಟ: ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಗೆ ಹೈಕಮಾಂಡ್ ದೆಹಲಿಗೆ ಬುಲಾವ್ ಸಾಧ್ಯತೆ

ನವೆಂಬರ್ 28ರಂದು ಉಡುಪಿಗೆ ಪ್ರಧಾನಿ ಮೋದಿ: ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್‌ವರೆಗೆ ರೋಡ್ ಶೋ

SCROLL FOR NEXT