ಕೇಂದ್ರ ಚುನಾವಣಾ ಆಯೋಗ 
ದೇಶ

ಕೊರೋನಾ ವೈರಸ್ ಲಾಕ್ ಡೌನ್ ಹಿನ್ನಲೆ: ರಾಜ್ಯಸಭೆ ಚುನಾವಣೆ ಮುಂದೂಡಿದ ಚುನಾವಣಾ ಆಯೋಗ

ಕೊರೋನಾ ವೈರೆಸ್ ಭೀತಿಯ ಹಿನ್ನೆಲೆಯಲ್ಲಿ ದೇಶಾದ್ಯಂತ ಲಾಕ್ ಡೌನ್ ಹೇರಿರುವ ಹಿನ್ನಲೆಯಲ್ಲಿ ಕೇಂದ್ರ ಚುನಾವಣಾ ಆಯೋಗ ರಾಜ್ಯಸಭೆ ಚುನಾವಣೆಯನ್ನು ಅನಿರ್ದಿಷ್ಠಾವಧಿಗೆ ಮುಂದೂಡಿದೆ.

ನವದೆಹಲಿ: ಕೊರೋನಾ ವೈರೆಸ್ ಭೀತಿಯ ಹಿನ್ನೆಲೆಯಲ್ಲಿ ದೇಶಾದ್ಯಂತ ಲಾಕ್ ಡೌನ್ ಹೇರಿರುವ ಹಿನ್ನಲೆಯಲ್ಲಿ ಕೇಂದ್ರ ಚುನಾವಣಾ ಆಯೋಗ ರಾಜ್ಯಸಭೆ ಚುನಾವಣೆಯನ್ನು ಅನಿರ್ದಿಷ್ಠಾವಧಿಗೆ ಮುಂದೂಡಿದೆ.

ಇದೇ ವಿಚಾರವಾಗಿ ಕಳೆದ ಮಾರ್ಚ್ 24ರಂದು ಸಭೆ ನಡೆಸಿದ್ದ ಚುನಾವಣಾ ಆಯೋಗ ಮಾರ್ಚ್ 31ರ ಬಳಿಕ ಈ ಕುರಿತು ನಿರ್ಧಾರ ಪ್ರಕಟಿಸುವುದಾಗಿ ಹೇಳಿತ್ತು. ಆದರೆ ಈಗಲೂ ಪರಿಸ್ಥಿತಿ ಸುಧಾರಿಸಿದ ಕಾರಣ ಮತ್ತು ಚುನಾವಣೆ ನಡೆಸಲು ಪೂರಕ ವಾತಾವರಣವಿಲ್ಲದ ಕಾರಣದ  ಅನಿರ್ದಿಷ್ಠಾವಧಿಗೆ ಚುನಾವಣೆಯನ್ನು ಮುಂದೂಡಿದೆ. ಈ ಹಿಂದೆ ಘೋಷಣೆಯಾದಂತೆ ಕಳೆದ ಮಾರ್ಚ್ 26ರಂದೇ ರಾಜ್ಯಸಭೆ ಚುನಾವಣೆ ನಡೆಯಬೇಕಿತ್ತು. ಆದರೆ ಕೊರೊನಾ ಭೀತಿಯ ಹಿನ್ನೆಲೆಯಲ್ಲಿ ಚುನಾವಣೆಯನ್ನು ಮುಂದೂಡಿತ್ತು. ದೇಶದ ವಿವಿಧ ರಾಜ್ಯಗಳ ಒಟ್ಟು 18 ರಾಜ್ಯಸಭಾ  ಸ್ಥಾನಗಳಿಗೆ ನಡೆಯಬೇಕಿದ್ದ ಚುನಾವಣೆಯನ್ನು ಮುಂದೂಡಲಾಗಿದೆ.

ರಾಜ್ಯಸಭೆ ಚುನಾವಣೆ ವೇಳೆ ಅಭ್ಯರ್ಥಿಗಳು, ಅಭ್ಯರ್ಥಿಗಳ ಏಜೆಂಟರು, ಚುನಾವಣಾ ಅಧಿಕಾರಿಗಳು ಹಾಗೂ ಶಾಸಕರು ಒಂದೆಡೆ ಸೇರಬೇಕಾಗುತ್ತದೆ. ಕೊರೊನಾ ವೈರಸ್ ಹರಡುತ್ತಿರುವ ಈ ಕಠಿಣ ಸಂದರ್ಭದಲ್ಲಿ ಎಲ್ಲರನ್ನೂ ಒಂದು ಕಡೆ ಸೇರಿಸುವುದು ಉಚಿತವಲ್ಲ. ಈ ಕಾರಣಕ್ಕೆ  ಚುನಾವಣೆಯನ್ನೇ ಮುಂದೂಡಿರುವುದಾಗಿ ಚುನಾವಣಾ ಆಯೋಗ ಸ್ಪಷ್ಟಪಡಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT