ಕೇಂದ್ರ ಚುನಾವಣಾ ಆಯೋಗ 
ದೇಶ

ಕೊರೋನಾ ವೈರಸ್ ಲಾಕ್ ಡೌನ್ ಹಿನ್ನಲೆ: ರಾಜ್ಯಸಭೆ ಚುನಾವಣೆ ಮುಂದೂಡಿದ ಚುನಾವಣಾ ಆಯೋಗ

ಕೊರೋನಾ ವೈರೆಸ್ ಭೀತಿಯ ಹಿನ್ನೆಲೆಯಲ್ಲಿ ದೇಶಾದ್ಯಂತ ಲಾಕ್ ಡೌನ್ ಹೇರಿರುವ ಹಿನ್ನಲೆಯಲ್ಲಿ ಕೇಂದ್ರ ಚುನಾವಣಾ ಆಯೋಗ ರಾಜ್ಯಸಭೆ ಚುನಾವಣೆಯನ್ನು ಅನಿರ್ದಿಷ್ಠಾವಧಿಗೆ ಮುಂದೂಡಿದೆ.

ನವದೆಹಲಿ: ಕೊರೋನಾ ವೈರೆಸ್ ಭೀತಿಯ ಹಿನ್ನೆಲೆಯಲ್ಲಿ ದೇಶಾದ್ಯಂತ ಲಾಕ್ ಡೌನ್ ಹೇರಿರುವ ಹಿನ್ನಲೆಯಲ್ಲಿ ಕೇಂದ್ರ ಚುನಾವಣಾ ಆಯೋಗ ರಾಜ್ಯಸಭೆ ಚುನಾವಣೆಯನ್ನು ಅನಿರ್ದಿಷ್ಠಾವಧಿಗೆ ಮುಂದೂಡಿದೆ.

ಇದೇ ವಿಚಾರವಾಗಿ ಕಳೆದ ಮಾರ್ಚ್ 24ರಂದು ಸಭೆ ನಡೆಸಿದ್ದ ಚುನಾವಣಾ ಆಯೋಗ ಮಾರ್ಚ್ 31ರ ಬಳಿಕ ಈ ಕುರಿತು ನಿರ್ಧಾರ ಪ್ರಕಟಿಸುವುದಾಗಿ ಹೇಳಿತ್ತು. ಆದರೆ ಈಗಲೂ ಪರಿಸ್ಥಿತಿ ಸುಧಾರಿಸಿದ ಕಾರಣ ಮತ್ತು ಚುನಾವಣೆ ನಡೆಸಲು ಪೂರಕ ವಾತಾವರಣವಿಲ್ಲದ ಕಾರಣದ  ಅನಿರ್ದಿಷ್ಠಾವಧಿಗೆ ಚುನಾವಣೆಯನ್ನು ಮುಂದೂಡಿದೆ. ಈ ಹಿಂದೆ ಘೋಷಣೆಯಾದಂತೆ ಕಳೆದ ಮಾರ್ಚ್ 26ರಂದೇ ರಾಜ್ಯಸಭೆ ಚುನಾವಣೆ ನಡೆಯಬೇಕಿತ್ತು. ಆದರೆ ಕೊರೊನಾ ಭೀತಿಯ ಹಿನ್ನೆಲೆಯಲ್ಲಿ ಚುನಾವಣೆಯನ್ನು ಮುಂದೂಡಿತ್ತು. ದೇಶದ ವಿವಿಧ ರಾಜ್ಯಗಳ ಒಟ್ಟು 18 ರಾಜ್ಯಸಭಾ  ಸ್ಥಾನಗಳಿಗೆ ನಡೆಯಬೇಕಿದ್ದ ಚುನಾವಣೆಯನ್ನು ಮುಂದೂಡಲಾಗಿದೆ.

ರಾಜ್ಯಸಭೆ ಚುನಾವಣೆ ವೇಳೆ ಅಭ್ಯರ್ಥಿಗಳು, ಅಭ್ಯರ್ಥಿಗಳ ಏಜೆಂಟರು, ಚುನಾವಣಾ ಅಧಿಕಾರಿಗಳು ಹಾಗೂ ಶಾಸಕರು ಒಂದೆಡೆ ಸೇರಬೇಕಾಗುತ್ತದೆ. ಕೊರೊನಾ ವೈರಸ್ ಹರಡುತ್ತಿರುವ ಈ ಕಠಿಣ ಸಂದರ್ಭದಲ್ಲಿ ಎಲ್ಲರನ್ನೂ ಒಂದು ಕಡೆ ಸೇರಿಸುವುದು ಉಚಿತವಲ್ಲ. ಈ ಕಾರಣಕ್ಕೆ  ಚುನಾವಣೆಯನ್ನೇ ಮುಂದೂಡಿರುವುದಾಗಿ ಚುನಾವಣಾ ಆಯೋಗ ಸ್ಪಷ್ಟಪಡಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ವಲಸೆ ವೀಸಾ ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಲಸೆ ನೀತಿ ಮತ್ತಷ್ಟು ಕಠಿಣ, ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌..!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಡವರ ಬದುಕಿಗೆ ಬೆಲೆ ಏರಿಕೆ ಬರೆ: ‘ಅಚ್ಛೇ ದಿನ್ ಆಯ್ತು ದುಬಾರಿ ದಿನ್: ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!