ಸಂಗ್ರಹ ಚಿತ್ರ 
ದೇಶ

ಕೊರೋನಾ ಪೀಡಿತ ವ್ಯಕ್ತಿಗಳು ಹತ್ತಿದಲ್ಲಿದ್ದರೆ ಕೂಡಲೇ ನಿಮಗೆ ಅಲರ್ಟ್ ನೀಡುತ್ತ ಈ ಆ್ಯಪ್...!

ವೈರಸ್ ತಟ್ಟುವ ಬಗ್ಗೆ ಮುನ್ನೆಚ್ಚರಿಕೆ ನೀಡು ಹಾಗೂ ಸೋಂಕು ತಗುಲಿರುವ ವ್ಯಕ್ತಿ ನಿಮ್ಮ ಹತ್ತಿರದಲ್ಲಿದ್ದರೆ ಮಾಹಿತಿ ನೀಡುವ ಆ್ಯಪ್ ವೊಂದನ್ನು ಕೇಂದ್ರ ಸರ್ಕಾರ ಗುರುವಾರ ಬಿಡುಗಡೆ ಮಾಡಿದೆ. 

ನವದೆಹಲಿ: ವೈರಸ್ ತಟ್ಟುವ ಬಗ್ಗೆ ಮುನ್ನೆಚ್ಚರಿಕೆ ನೀಡು ಹಾಗೂ ಸೋಂಕು ತಗುಲಿರುವ ವ್ಯಕ್ತಿ ನಿಮ್ಮ ಹತ್ತಿರದಲ್ಲಿದ್ದರೆ ಮಾಹಿತಿ ನೀಡುವ ಆ್ಯಪ್ ವೊಂದನ್ನು ಕೇಂದ್ರ ಸರ್ಕಾರ ಗುರುವಾರ ಬಿಡುಗಡೆ ಮಾಡಿದೆ. 

ದೇಶದಲ್ಲಿ ಕೊರೋನಾ ವ್ಯಾಪಕವಾಗುತ್ತಿರುವ ಹಿನ್ನೆಲೆಯಲ್ಲಿ ಮಹಾಮಾರಿಯನ್ನು ತಡೆಗಟ್ಟಲು ಆರೋಗ್ಯ ಸೇತು ಎನ್ನು ಆ್ಯಪ್'ನ್ನು ಕೇಂದ್ರ ಸರ್ಕಾರ ಆರಂಭಿಸಿದೆ. ಈ ಅಪ್ಲಿಕೇಶನ್ ಹಿಂದಿ, ಇಂಗ್ಲೀಷ್ ಹಾಗೂ ಇತರೆ 11 ಭಾಷೆಗಳಲ್ಲಿ ಏಕಕಾಲದಲ್ಲಿ ಪ್ರಾರಂಭಿಸಲಾಗಿದೆ. ಪ್ಲೇ ಸ್ಟೋರ್ ಮೂಲಕ ಉಚಿತವಾಗಿ ಈ ಆ್ಯಪ್ ನ್ನು ಡೌನ್ಲೋಡ್ ಮಾಡಿಕೊಳ್ಳಬಹುದಾಗಿದೆ. ಈ ಆ್ಯಪ್ ಮೂಲಕ ಕೊರೋನಾ ವೈರಸ್'ಗೆ ಸಂಬಂಧಿಸಿದ ಎಲ್ಲಾ ಮಾಹಿತಿಗಳು ನಿಮ್ಮ ಮೊಬೈಲ್ ನಲ್ಲಿ ಲಭ್ಯವಿರಲಿದೆ ಎಂದು ತಿಳಿದುಬಂದಿದೆ. 

ಸೋಂಕಿತನ ಮಾಹಿತಿ ದಾಖಲಿಸಿಕೊಂಡು, ಒಂದು ವೇಳೆ ನಿಮ್ಮ ಹತ್ತಿರ ಸೋಂಕಿತ ಇದ್ದರೆ, ಈ ಅ್ಯಪ್ ಸಂದೇಶ ರವಾನಿಸುತ್ತದೆ. ಯಾರಿಗಾದರೂ ಸೋಂಕು ತಗುಲಿದರೆ, ಅವರ ಮೊಬೈಲ್ ಸಂಖ್ಯೆಯನ್ನು ಆ್ಯಪ್ ನಲ್ಲಿ ಸಚಿವಾಲಯ ಅಪ್ಡೇಟ್ ಮಾಡಲಿದೆ. 

ಆ ಮೂಲಕ ಆ ವ್ಯಕ್ತಿ ಇರುವ ಪ್ರದೇಶಕ್ಕೆ ನೀವು ತೆರಳಿದರೆ ಆ್ಯಪ್ ಎಚ್ಚರಿಕೆ ನೀಡುತ್ತದೆ. ಅಲ್ಲದೇ, ನೀವು ಸೋಂಕಿತರು ಇರುವ ಪ್ರದೇಶಕ್ಕೆ ತೆರಳಿದರೆ, ಸೋಂಕು ತಟ್ಟುವ ಸಾಧ್ಯತೆಯನ್ನೂ ಆ್ಯಪ್ ನಿಮಗೆ ನೀಡಲಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಡಿಕೆಶಿ RSS ಗೀತೆ ಹೇಳಿದ್ದೂ ರಾಹುಲ್‌ ಗಾಂಧಿಗೆ ತಲುಪಲಿ: ಶಾಕ್ ಕೊಟ್ಟ ಸತೀಶ್‌ ಜಾರಕಿಹೊಳಿ ಹೇಳಿಕೆ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

SCROLL FOR NEXT