ಆರೋಗ್ಯ ಕಾರ್ಯಕರ್ತರ ಮೇಲೆ ದಾಳಿ(ಸಂಗ್ರಹ ಚಿತ್ರ) 
ದೇಶ

ಆರೋಗ್ಯ ಕಾರ್ಯಕರ್ತರ ಮೇಲೆ ಹಲ್ಲೆ ಮಾಡಿದವರ ವಿರುದ್ಧ ಎನ್‌ಎಸ್‌ಎ ಕಾಯ್ದೆಯಡಿ ಕಠಿಣ ಕ್ರಮ: ಯೋಗಿ ಆದಿತ್ಯನಾಥ್ ಸರ್ಕಾರದಿಂದ ಖಡಕ್ ತೀರ್ಮಾನ

ಕೊರೋನಾವೈರಸ್ ಲಾಕ್ ಡೌನ್ ಮಧ್ಯೆ ರಾಜ್ಯದಲ್ಲಿ ಪೊಲೀಸ್ ಸಿಬ್ಬಂದಿಗಳ ಮೇಲೆ ಹಲ್ಲೆ ನಡೆಸುವವರ ವಿರುದ್ಧ ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ ಕಠಿಣ ಕ್ರಮ ಕೈಗೊಳ್ಳುವಂತೆ ಉತ್ತರ ಪ್ರದೇಶ ಸರ್ಕಾರ ನಿರ್ದೇಶನ ನೀಡಿದೆ.

ಲಖನೌ: ಕೊರೋನಾವೈರಸ್ ಲಾಕ್ ಡೌನ್ ಮಧ್ಯೆ ರಾಜ್ಯದಲ್ಲಿ ಪೊಲೀಸ್ ಸಿಬ್ಬಂದಿಗಳ ಮೇಲೆ ಹಲ್ಲೆ ನಡೆಸುವವರ ವಿರುದ್ಧ ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ ಕಠಿಣ ಕ್ರಮ ಕೈಗೊಳ್ಳುವಂತೆ ಉತ್ತರ ಪ್ರದೇಶ ಸರ್ಕಾರ ನಿರ್ದೇಶನ ನೀಡಿದೆ.

ಆರೋಪಿಗಳ ವಿರುದ್ಧ ಎನ್‌ಎಸ್‌ಎ ಕಾಯ್ದೆಯಡಿ  ಪ್ರಕರಣ ದಾಖಲಿಸಲಾಗುವುದು ಎಂದು ಯೋಗಿ ಆದಿತ್ಯನಾಥ್ ನೇತೃತ್ವದ ಸರ್ಕಾರ ಹೇಳಿದ್ದು "ಲಾಕ್ ಡೌನ್ ಸಮಯದಲ್ಲಿ, ರಾಜ್ಯದ ಯಾವುದೇ ಸ್ಥಳದಲ್ಲಿ ಪೊಲೀಸರ ಮೇಲೆ ಹಲ್ಲೆ ನಡೆಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಅವರ ಮೇಲೆ ಎನ್ಎಸ್ಎ ಅಡಿಯಲ್ಲಿ ಪ್ರಕರಣ ದಾಖಲಿಸಲಾಗುವುದು" ಎಂದು ಅದು ಹೇಳಿದೆ.

ಈ ಹಿಂದೆ, ಮಧ್ಯಪ್ರದೇಶ ಸರ್ಕಾರವು ಆರೋಗ್ಯ ಕಾರ್ಯಕರ್ತರು ಅಥವಾ ಪೊಲೀಸರ ಮೇಲೆ ಹಲ್ಲೆ ನಡೆಸಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಬಗ್ಗೆ ಎಚ್ಚರಿಕೆ ನೀಡಿತ್ತು. ದೇಶದ ಹಲವಾರು ಭಾಗಗಳಲ್ಲಿ, ಶಂಕಿತ ಕೋವಿಡ್-19 ರೋಗಿಗಳು ಸ್ಥಳೀಯರೊಂದಿಗೆ ಆರೋಗ್ಯ ಕಾರ್ಯಕರ್ತರು ಮತ್ತು ತಮ್ಮ ಪ್ರದೇಶಗಳಿಗೆ ಭೇಟಿ ನೀಡುವ ಪೊಲೀಸರ ಮೇಲೆ ಹಲ್ಲೆ ನಡೆಸುತ್ತಿದ್ದಾರೆ

ಉತ್ತರ ಪ್ರದೇಶದ ರಾಂಪುರದ ತಾಂಡಾ ಪ್ರದೇಶದಲ್ಲಿ ಅಧಿಕಾರಿಗಳ ಮೇಲೆ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ ಹಿನ್ನೆಲೆಯಲ್ಲಿ ನಿನ್ನೆ ಮೂವರನ್ನು ವಶಕ್ಕೆ ಪಡೆಯಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!

ಕೊಡಗಿನಲ್ಲಿ ಭಾರಿ ಮಳೆ: ಹಾರಂಗಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು, ತಲಕಾವೇರಿಯಲ್ಲೂ ದಾಖಲೆಯ ವರ್ಷಧಾರೆ!

SIR ವೇಳೆ 1.08 ಕೋಟಿಗೂ ಅಧಿಕ ಮತದಾರರು ASDDO ಪಟ್ಟಿಗೆ: ಆಕ್ಷೇಪಣೆ ಸಲ್ಲಿಕೆ ಅವಧಿ ವಿಸ್ತರಿಸಬೇಕು- CECಗೆ ಸಿಎಂ ಶಿವಕುಮಾರ್ ಪತ್ರ!

ಕನಸು ಕೊನೆಗೂ ನನಸು: ಲಿಂಗ ಬದಲಿಸಿಕೊಂಡಿದ್ದ Anaya Bangarಗೆ ಕ್ರಿಕೆಟ್‌ಗೆ ಮರಳಲು ಗ್ರೀನ್ ಸಿಗ್ನಲ್!