ಸಂಗ್ರಹ ಚಿತ್ರ 
ದೇಶ

ಶಂಖ , ಜಾಗಟೆಯಾಯಿತು, ಏಪ್ರಿಲ್ 5 ರಂದು ಮೋದಿ ನೀಡಿದ ಮತ್ತೊಂದು ಟಾಸ್ಕ್ ಏನು..?

ಚಪ್ಪಾಳೆ, ಶಂಖ, ಜಾಗಟೆ ಬಳಿಕ ಕೊರೊನಾ ವಿರುದ್ಧದ ಹೋರಾಟಕ್ಕೆ ಪ್ರಧಾನಿ ಮೋದಿಯವರು ಜನತೆಗೆ ಮತ್ತೊಂದು ಟಾಸ್ಕ್ ನೀಡಿದ್ದಾರೆ. 

ನವದೆಹಲಿ: ಚಪ್ಪಾಳೆ, ಶಂಖ, ಜಾಗಟೆ ಬಳಿಕ ಕೊರೊನಾ ವಿರುದ್ಧದ ಹೋರಾಟಕ್ಕೆ ಪ್ರಧಾನಿ ಮೋದಿಯವರು ಜನತೆಗೆ ಮತ್ತೊಂದು ಟಾಸ್ಕ್ ನೀಡಿದ್ದಾರೆ. 

ಇದೆ 5 ರಂದು ರಾತ್ರಿ 9 ಗಂಟೆಗೆ ಸರಿಯಾಗಿ ದೇಶದ ಜನತೆ ಮನೆಯಲ್ಲಿನ ಲೈಟ್ ಗಳನ್ನು ಆರಿಸಿ, 9 ನಿಮಿಷಗಳ ಕಾಲ ದೀಪ, ಮೊಂಬತ್ತಿ ಹಚ್ಚಿ, ಎಲ್ಲರೂ ಅಂಧಕಾರ, ಮಹಾಮಾರಿ ಕರೋನ ತೊಲಗಿಸಲು ಸಹಕರಿಸಿ ಎಂದು ಪ್ರಧಾನಿ ದೇಶವಾಸಿಗಳಲ್ಲಿ ಮನವಿ ಮಾಡಿದ್ದಾರೆ.

ಇಂದು ವಿಡಿಯೋ ಸಂದೇಶ ಬಿಡುಗಡೆ ಮಾಡಿರುವ ಪ್ರಧಾನಿ, ಲಾಕ್ ಡೌನ್ ಜಾರಿಯಾಗಿ ಇಂದಿಗೆ 10 ದಿನಗಳಾಗಿವೆ. ಕಳೆದೆ 22 ರಂದು ಜನತಾ ಕರ್ಫ್ಯೂಗೆ ಕರೆ ನೀಡಲಾಗಿತ್ತು. ಇದನ್ನು ದೇಶದ ಜನತೆ ಯಶಸ್ವಿಯೂಗೊಳಿಸಿದ್ದು ಇದನ್ನು ಈಗ ವಿಶ್ವವೇ ಅನುಸರಿಸಿತ್ತು.

ಇದೀಗ ಜನತೆಗೆ ಮತ್ತೊಂದು ಟಾಸ್ಕ್ ನೀಡಿರುವ ಮೋದಿಯವರು, ರಸ್ತೆಗಿಳಿಯದೆ, ತಮ್ಮ ತಮ್ಮ ಮನೆಗಳ ಮಹಡಿಗಳ ಮೇಲೆಯೇ ನಿಂತು ಮುಂಬತ್ತಿ, ಮೊಬೈಲ್ ಟಾರ್ಚ್, ಇತರೆ ಟಾರ್ಚ್ ಗಳನ್ನು ಬಳಸಿ, ಕೊರೋನಾ ವಿರುದ್ಧದ ಹೋರಾಟದಲ್ಲಿ ಒಗ್ಗಟ್ಟು ಪ್ರದರ್ಶಿಸುವಂತೆ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT