ಸಂಗ್ರಹ ಚಿತ್ರ 
ದೇಶ

ಶಂಖ , ಜಾಗಟೆಯಾಯಿತು, ಏಪ್ರಿಲ್ 5 ರಂದು ಮೋದಿ ನೀಡಿದ ಮತ್ತೊಂದು ಟಾಸ್ಕ್ ಏನು..?

ಚಪ್ಪಾಳೆ, ಶಂಖ, ಜಾಗಟೆ ಬಳಿಕ ಕೊರೊನಾ ವಿರುದ್ಧದ ಹೋರಾಟಕ್ಕೆ ಪ್ರಧಾನಿ ಮೋದಿಯವರು ಜನತೆಗೆ ಮತ್ತೊಂದು ಟಾಸ್ಕ್ ನೀಡಿದ್ದಾರೆ. 

ನವದೆಹಲಿ: ಚಪ್ಪಾಳೆ, ಶಂಖ, ಜಾಗಟೆ ಬಳಿಕ ಕೊರೊನಾ ವಿರುದ್ಧದ ಹೋರಾಟಕ್ಕೆ ಪ್ರಧಾನಿ ಮೋದಿಯವರು ಜನತೆಗೆ ಮತ್ತೊಂದು ಟಾಸ್ಕ್ ನೀಡಿದ್ದಾರೆ. 

ಇದೆ 5 ರಂದು ರಾತ್ರಿ 9 ಗಂಟೆಗೆ ಸರಿಯಾಗಿ ದೇಶದ ಜನತೆ ಮನೆಯಲ್ಲಿನ ಲೈಟ್ ಗಳನ್ನು ಆರಿಸಿ, 9 ನಿಮಿಷಗಳ ಕಾಲ ದೀಪ, ಮೊಂಬತ್ತಿ ಹಚ್ಚಿ, ಎಲ್ಲರೂ ಅಂಧಕಾರ, ಮಹಾಮಾರಿ ಕರೋನ ತೊಲಗಿಸಲು ಸಹಕರಿಸಿ ಎಂದು ಪ್ರಧಾನಿ ದೇಶವಾಸಿಗಳಲ್ಲಿ ಮನವಿ ಮಾಡಿದ್ದಾರೆ.

ಇಂದು ವಿಡಿಯೋ ಸಂದೇಶ ಬಿಡುಗಡೆ ಮಾಡಿರುವ ಪ್ರಧಾನಿ, ಲಾಕ್ ಡೌನ್ ಜಾರಿಯಾಗಿ ಇಂದಿಗೆ 10 ದಿನಗಳಾಗಿವೆ. ಕಳೆದೆ 22 ರಂದು ಜನತಾ ಕರ್ಫ್ಯೂಗೆ ಕರೆ ನೀಡಲಾಗಿತ್ತು. ಇದನ್ನು ದೇಶದ ಜನತೆ ಯಶಸ್ವಿಯೂಗೊಳಿಸಿದ್ದು ಇದನ್ನು ಈಗ ವಿಶ್ವವೇ ಅನುಸರಿಸಿತ್ತು.

ಇದೀಗ ಜನತೆಗೆ ಮತ್ತೊಂದು ಟಾಸ್ಕ್ ನೀಡಿರುವ ಮೋದಿಯವರು, ರಸ್ತೆಗಿಳಿಯದೆ, ತಮ್ಮ ತಮ್ಮ ಮನೆಗಳ ಮಹಡಿಗಳ ಮೇಲೆಯೇ ನಿಂತು ಮುಂಬತ್ತಿ, ಮೊಬೈಲ್ ಟಾರ್ಚ್, ಇತರೆ ಟಾರ್ಚ್ ಗಳನ್ನು ಬಳಸಿ, ಕೊರೋನಾ ವಿರುದ್ಧದ ಹೋರಾಟದಲ್ಲಿ ಒಗ್ಗಟ್ಟು ಪ್ರದರ್ಶಿಸುವಂತೆ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT