ಅಧಿರ್ ರಂಜನ್ ಚೌದರಿ 
ದೇಶ

ಲೈಟ್ ಆರಿಸುವುದಿಲ್ಲ... ಮೇಣದ ಬತ್ತಿ ಬೆಳಗುವುದೂ ಇಲ್ಲ: ಅಧಿರ್ ರಂಜನ್ ಚೌಧುರಿ

ಭಾನುವಾರ ರಾತ್ರಿ 9 ಗಂಟೆಗೆ ವಿದ್ಯುತ್ ದೀಪಗಳನ್ನು 9 ನಿಮಿಷಗಳ ಕಾಲ ಆರಿಸಬೇಕೆಂದು ಪ್ರಧಾನಿ ನರೇಂದ್ರ ಮೋದಿ ದೇಶದ ಜನತೆಗೆ ನೀಡಿರುವ ಕರೆಗೆ ಲೋಕಸಭೆಯ ಕಾಂಗ್ರೆಸ್ ನಾಯಕ ಅಧಿರ್ ರಂಜನ್ ಚೌಧುರಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ. 

ನವದೆಹಲಿ: ಭಾನುವಾರ ರಾತ್ರಿ 9 ಗಂಟೆಗೆ ವಿದ್ಯುತ್ ದೀಪಗಳನ್ನು 9 ನಿಮಿಷಗಳ ಕಾಲ ಆರಿಸಬೇಕೆಂದು ಪ್ರಧಾನಿ ನರೇಂದ್ರ ಮೋದಿ ದೇಶದ ಜನತೆಗೆ ನೀಡಿರುವ ಕರೆಗೆ ಲೋಕಸಭೆಯ ಕಾಂಗ್ರೆಸ್ ನಾಯಕ ಅಧಿರ್ ರಂಜನ್ ಚೌಧುರಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ. 

ಕೊರೋನಾ (ಕೋವಿಡ್ -೧೯) ವಿರುದ್ದದ ಹೋರಾಟಕ್ಕೂ, ಮನೆಗಳ ದೀಪಗಳನ್ನು 9 ನಿಮಿಷ ಆರಿಸುವುದಕ್ಕೂ ಏನು ಸಂಬಂಧವಿದೆ? ಎಂದು ಅವರು ಪ್ರಶ್ನಿಸಿದ್ದಾರೆ. ನಾನು ಮನೆಯ ಲೈಟುಗಳನ್ನು ಆರಿಸುವುದಿಲ್ಲ,... ಮೇಣದ ಬತ್ತಿಯನ್ನು ಬೆಳಗಿಸುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದರು. ನಾನು ಈ ರೀತಿ ಮಾಡಿದರೆ ಕೆಲವರು ನನ್ನನ್ನು ದೇಶದ್ರೋಹಿ ಎಂದು ಕರೆಯುತ್ತಾರೆ, ಅದನ್ನು ಎದುರಿಸಲು ನಾನು ಸಿದ್ದವಾಗಿದ್ದೇನೆ ಎಂದು ಹೇಳಿದ್ದಾರೆ.

ಮನೆಯ ದೀಪಗಳನ್ನು ಆರಿಸಿ, ಮೇಣದ ಬತ್ತಿ ಬೆಳಗಿಸುವುದಕ್ಕೂ, ಕೊರೋನಾ ವಿರುದ್ದ ಹೋರಾಟ ನಡೆಸುವುದಕ್ಕೂ ಯಾವುದೇ ಸಂಬಂಧ ಇಲ್ಲ. ನಾನು ಲೈಟುಗಳನ್ನು ಆರಿಸುವುದಿಲ್ಲ. ಮೇಣದಬತ್ತಿಗಳನ್ನು ಬೆಳಗಿಸುವುದಿಲ್ಲ. ಆದರೆ, ನಾನು ಕೊರೋನಾ ವಿರುದ್ಧ ಹೋರಾಡುತ್ತಿದ್ದೇನೆ. ಎಂದು ಅಧಿರ್ ರಂಜನ್ ಚೌಧುರಿ ಹೇಳಿದ್ದಾರೆ.

ಇದೊಂದು ರಾಜಕೀಯ ಗಿಮಿಕ್ ಅಷ್ಟೆ. ಪ್ರಧಾನಿ ಮೋದಿ ಸಾಂಕ್ರಾಮಿಕ ರೋಗವನ್ನು ರಾಜಕೀಯ ಲಾಭಕ್ಕೆ ಬಳಸಿಕೊಳ್ಳುತ್ತಿದ್ದಾರೆ ಎಂದು ಕಾಂಗ್ರೆಸ್ ನಾಯಕ ಆರೋಪಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

SCROLL FOR NEXT