ಸಂಗ್ರಹ ಚಿತ್ರ 
ದೇಶ

ತಬ್ಲಿಘಿ ಸದಸ್ಯರು ಚಿಕಿತ್ಸೆಗೆ ಸಹಕಾರ ನೀಡುತ್ತಿಲ್ಲ: ದೆಹಲಿ ಸರ್ಕಾರಕ್ಕೆ ವೈದ್ಯರಿಂದ ಮಾಹಿತಿ

ವಿವಿಧ ಆಸ್ಪತ್ರೆಗಳಲ್ಲಿ ದಾಖಲಾಗಿರುವ ತಬ್ಲಿಘಿ ಸದಸ್ಯರು ಚಿಕಿತ್ಸೆಗೆ ಸಹಕಾರ ನೀಡುತ್ತಿಲ್ಲ ಎಂದು ವೈದ್ಯರು ದೆಹಲಿ ಸರ್ಕಾರದ ಬಳಿ ತಮ್ಮ ಅಳಲನ್ನು ತೋಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ. 

ನವದೆಹಲಿ: ವಿವಿಧ ಆಸ್ಪತ್ರೆಗಳಲ್ಲಿ ದಾಖಲಾಗಿರುವ ತಬ್ಲಿಘಿ ಸದಸ್ಯರು ಚಿಕಿತ್ಸೆಗೆ ಸಹಕಾರ ನೀಡುತ್ತಿಲ್ಲ ಎಂದು ವೈದ್ಯರು ದೆಹಲಿ ಸರ್ಕಾರದ ಬಳಿ ತಮ್ಮ ಅಳಲನ್ನು ತೋಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ. 

ಮರ್ಕಜ್ ನಿಂದ ಸ್ಥಳಾಂತರಗೊಂಡಿರುವ  ಜನರು ಈಗಾಗಲೇ ದೆಹಲಿ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಚಿಕಿತ್ಸೆ ನೀಡಲು ಸಹಕಾರ ನೀಡುತ್ತಿಲ್ಲ. ವೈದ್ಯಕೀಯ ಸಿಬ್ಬಂದಿಗಳೊಂದಿಗೆ ದುರ್ವರ್ತನೆ ತೋರುತ್ತಿದ್ದಾರೆ. ಹೀಗಾಗಿ ತಬ್ಲಿಘಿ ಸದಸ್ಯರು ದಾಖಲಾಗಿರುವ ಆಸ್ಪತ್ರೆಗಳ ಹೊರಗೆ ಭದ್ರತೆ ಹಾಗೂ ಆಸ್ಪತ್ರೆಯ ಸುತ್ತಮುತ್ತಲು ಭದ್ರತೆ ನೀಡುವಂತೆ ಸರ್ಕಾರದ ಬಳಿ ಮನವಿ ಮಾಡಿಕೊಂಡಿದ್ದಾರೆ. 

ಕೊರೋನಾ ಸೋಂಕು ಪೀಡಿತರಾಗಿ ದೆಹಲಿಯ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವ ಈ ಕಾರ್ಯಕರ್ತರು ಔಷದಿ ಸೇವಿಸಲು ನಿರಾಕರಿಸುತ್ತಿದ್ದಾರೆ. ಅಲ್ಲದೆ, ವೈದ್ಯಕೀಯ ಸಿಬ್ಬಂದಿಗಳೊಂದಿಗೆ ಅನುಚಿತವಾಗಿ ನಡೆದುಕೊಳ್ಳುತ್ತಿದ್ದಾರೆಂದು ಪತ್ರದಲ್ಲಿ ತಿಳಿಸಿದ್ದಾರೆ. 

ಈ ನಡುವೆ ಉತ್ತರಪ್ರದೇಶದ ಗಾಜಿಯಾಬಾದ್ ಆಸ್ಪತ್ರೆಯಲ್ಲಿ ಮಹಿಳಾ ನರ್ಸ್ ಗಳ ಜೊತೆಗೆ ಅನುಚಿತವಾಗಿ ವರ್ತಿಸಿದ ತಬ್ಲೀಘಿ ಜಮಾತ್ ಸದಸ್ಯರ ವಿರುದ್ಧ ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ ಪ್ರಕರಣ ದಾಖಲಿಸುವಂತೆ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಆದೇಶಿಸಿದ್ದಾರೆ. ಅಲ್ಲದೆ, ರಾಜ್ಯದಲ್ಲಿ ಇನ್ನು ಮುಂದೆ ವೈರಸ್ ಸೋಂಕಿತ ಅಥವಾ ಶಂಕಿತ ತಬ್ಲೀಘಿ ಸದಸ್ಯರಿಗೆ ಚಿಕಿತ್ಸೆ ನೀಡುವ ಅಥವಾ ಕ್ವಾರಂಟೈನ್ ಮಾಡುವ ಸ್ಥಳಗಳಿಗೆ ಮಹಿಳಾ ನರ್ಸ್ಗಳು ಮತ್ತು ಮಹಿಳಾ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಬಾರದು. ಪುರುಷ ಸಿಬ್ಬಂದಿಯನ್ನು ಮಾತ್ರ ನಿಯೋಜಿಸಬೇಕು ಎಂದೂ ನಿರ್ದೇಶನ ನೀಡಿದ್ದಾರೆ. 

ಗಾಜಿಯಾಬಾದ್ ಜಿಲ್ಲಾಸ್ಪತ್ರೆಯಲ್ಲಿ ಕ್ವಾರಂಟೈನ್ ನಲ್ಲಿರುವ ಕೆಲ ತಬ್ಲೀಘಿ ಸದಸ್ಯರು ಗುರುವಾರ ವೈದ್ಯಕೀಯ ಸಿಬ್ಬಂದಿಯ ಮೇಲೆ ಉಗುಲುವುದು, ಅವರನ್ನು ನಿಂದಿಸುವುದು, ಮಹಿಳಾ ನರ್ಸ್ ಗಳ ಬಂದಾಗ ಬೆತ್ತಲೆ ಓಡಾಡುವುದು ಮುಂತಾದ ರೀತಿಯಲ್ಲಿ ಅನುಚಿತವಾಗಿ ವರ್ತಿಸಿದ್ದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

SCROLL FOR NEXT