ಸಾಂದರ್ಭಿಕ ಚಿತ್ರ 
ದೇಶ

ಕೊರೋನಾ ವೈರಸ್ ಗಾಳಿಯಲ್ಲಿ ಹರಡುವಿಕೆಗೆ ಯಾವುದೇ ಪುರಾವೆಗಳಿಲ್ಲ,ಸಾಮಾಜಿಕ ಅಂತರ ಕಾಯ್ದುಕೊಳ್ಳಿ-ಕೇಂದ್ರ ಸರ್ಕಾರ

ಕೊರೋನಾವೈರಸ್ ಸೋಂಕು ಗಾಳಿಯಲ್ಲಿ ಹರಡುವಿಕೆಗೆ ಸಂಬಂಧಿಸಿದಂತೆ ಯಾವುದೇ ಪುರಾವೆಗಳಿಲ್ಲ, ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವಂತೆ ಕೇಂದ್ರ ಸರ್ಕಾರ ಜನರಿಗೆ ಸಲಹೆ ನೀಡಿದೆ.

ನವದೆಹಲಿ: ಕೊರೋನಾವೈರಸ್ ಸೋಂಕು ಗಾಳಿಯಲ್ಲಿ ಹರಡುವಿಕೆಗೆ ಸಂಬಂಧಿಸಿದಂತೆ ಯಾವುದೇ ಪುರಾವೆಗಳಿಲ್ಲ, ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವಂತೆ ಕೇಂದ್ರ ಸರ್ಕಾರ ಜನರಿಗೆ ಸಲಹೆ ನೀಡಿದೆ.

ಗಾಳಿಯಲ್ಲಿ ಸೋಂಕು ಹರಡುವಿಕೆ ಸಂಬಂಧಿಸಿದಂತೆ ಈವರೆಗೂ ಯಾವುದೇ ಪುರಾವೆಗಳು ಸಿಕ್ಕಿಲ್ಲ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಮಿತಿ ಸ್ಪಷ್ಟಪಡಿಸಿದೆ. 

ಈ ಮಧ್ಯೆ  ತಬ್ಲೀಘಿ  ಘಟನೆಯಿಂದಾಗಿ ಕೊರೋನಾ ವೈರಸ್ ಪ್ರಕರಣಗಳ ಸಂಖ್ಯೆ ದ್ವಿಗುಣವಾಗಿರುವುದಾಗಿ ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ಪ್ರಸ್ತುತ 4.1 ದಿನಗಳಲ್ಲಿ ಕೊರೋನಾ ಸೋಂಕು ಪ್ರಕರಣಗಳು ಸಂಖ್ಯೆ ದ್ವಿಗುಣವಾಗುತ್ತಿದೆ. ಆದರೆ ತಬ್ಲೀಘಿ ಜಮಾತ್  ಘಟನೆಯಿಂದಾಗಿ ಹೆಚ್ಚುವರಿ ಪ್ರಕರಣಗಳು ವರದಿಯಾಗದಿದ್ದರೆ, ದ್ವಿಗುಣಗೊಳಿಸುವ ಪ್ರಮಾಣ 7.4 ದಿನಗಳು ಆಗಿರುತಿತ್ತು ಎಂದು  ಕೇಂದ್ರ ಆರೋಗ್ಯ  ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಜಂಟಿ ಕಾರ್ಯದರ್ಶಿ ಲಾವ್ ಅಗರ್ ವಾಲ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಕೋವಿಡ್ 19 ಸೋಂಕು ತಗುಲಿದ 267 ಜನರು ಗುಣಮುಖರಾಗಿದ್ದಾರೆ. ಶನಿವಾರದಿಂದ 11 ಸಾವು, 472 ಹೊಸ ಪ್ರಕರಣಗಳು ವರದಿಯಾಗಿದ್ದು, 79 ಜನರು ಮೃತಪಟ್ಟಿದ್ದಾರೆ ಎಂದು ವಿವರಿಸಿದರು. 

 24 ರಾಜ್ಯಗಳು, 399 ಜಿಲ್ಲೆಗಳಲ್ಲಿ ಈ ಸೋಂಕು ಕಂಡುಬಂದಿದ್ದು, ಹಾಟ್ ಸ್ಪಟ್ ಗಳಲ್ಲಿ ಬಪರ್ ವಲಯ ಹಾಗೂ ನಿರ್ಬಂಧಿತ ಪ್ರದೇಶಗಳನ್ನು ಗುರುತಿಸಲಾಗಿದೆ. ನಿರ್ಬಂಧಿತ ಪ್ರದೇಶಗಳ ಕಡೆಯಲ್ಲಿರುವ ಎಲ್ಲಾ ಶಾಲೆಗಳು, ಕಾಲೇಜುಗಳನ್ನು ಬಂದ್ ಮಾಡಲಾಗಿದೆ. ಕೋವಿಡ್ ಪರೀಕ್ಷೆಯನ್ನು ಅಯುಷ್ಮನ್ ಭಾರತ್ ಯೋಜನೆ ವ್ಯಾಪ್ತಿಗೊಳ್ಳಪಡಿಸಲಾಗುವುದು ಎಂದು ಅಗರ್ ವಾಲ್ ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal floods: ಸಾವಿನ ಸಂಖ್ಯೆ 157ಕ್ಕೇರಿಕೆ, 750ಕ್ಕೂ ಅಧಿಕ ಮಂದಿ ನಾಪತ್ತೆ, ನೇಪಾಳಕ್ಕೆ ಭಾರತ ನೆರವು! ಸಹಾಯವಾಣಿ ಬಿಡುಗಡೆ

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್! Video

ನೇಪಾಳ ಪ್ರವಾಹ: ಭಾರತಕ್ಕೆ ದೊಡ್ಡ ಆತಂಕವಿಲ್ಲ, ಜಲಾಶಯಗಳ ನೀರಿನ ಮಟ್ಟ ಇಳಿಕೆ: ಕೇಂದ್ರ ಸ್ಪಷ್ಟನೆ

Sugar Price: ಈರುಳ್ಳಿ ಬೆನ್ನಲ್ಲೇ ಇದೀಗ ಸಕ್ಕರೆ ಶಾಕ್: ಕೆಜಿಗೆ 65 ರೂ ದಾಟಿದ ದರ, ಗ್ರಾಹಕರ ಜೇಬಿಗೆ 'ಸಿಹಿ ಕಹಿ'!

2nd Test: ಬೌಂಡರಿ ಲೈನ್ ಬಳಿ ದುರ್ವರ್ತನೆ ತೋರಿದ್ದ ಲಂಕಾ ಆಟಗಾರ Prabath Jayasuriyaಗೆ ಬರೆ ಹಾಕಿದ ICC!