ನಿಜಾಮುದ್ದೀನ್ ಕೊರೋನಾ ಸೋಂಕಿತರನ್ನು ಆಸ್ಪತ್ರೆಗೆ ದಾಖಲಿಸುತ್ತಿರುವುದು 
ದೇಶ

ಕೊವಿಡ್-19: ದೇಶದಲ್ಲಿ ಶೇ.76 ರಷ್ಟು ಪುರುಷರಿಗೆ ಸೋಂಕು, 25 ಸಾವಿರ ತಬ್ಲಿಘಿ ಸದಸ್ಯರ, ಸಂಪರ್ಕದಲ್ಲಿದ್ದರಿಗೆ ಕ್ವಾರಂಟೈನ್

ಮಹಾಮಾರಿ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ ದೇಶಾದ್ಯಂತ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ ಒಟ್ಟು 693 ಹೊಸ ಪ್ರಕರಣಗಳು ಪತ್ತೆಯಾಗಿವೆ.

ನವದೆಹಲಿ: ಮಹಾಮಾರಿ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ ದೇಶಾದ್ಯಂತ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ ಒಟ್ಟು 693 ಹೊಸ ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ದೇಶದಲ್ಲಿ ಕೊರೋನಾ ವೈರಸ್  ಸೋಂಕಿತರ 4,067ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಸಚಿವಾಲಯದ ಅಂಕಿ-ಅಂಶಗಳು ತಿಳಿಸಿವೆ.

ಈ ಸಂಬಂಧ ಇಂದು ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಆರೋಗ್ಯ ಸಚಿವಾಲಯದ ಜಂಟಿ ಕಾರ್ಯದರ್ಶಿ ಲಾವ್ ಅಗರವಾಲ್‍ ಅವರು, ಭಾನುವಾರ ಸಂಜೆಯಿಂದ ಸಕ್ರಿಯ ಪ್ರಕರಣಗಳು 693 ರಷ್ಟು ಏರಿಕೆಯಾಗಿದ್ದು, ಒಟ್ಟು ಸಂಖ್ಯೆ ಇದುವರೆಗೆ 4,067 ರಷ್ಟಿದೆ. ಸಾವಿನ ಸಂಖ್ಯೆ 109ಕ್ಕೆ ಏರಿದ್ದು, ಭಾನುವಾರ ಸಂಜೆಯಿಂದ 23 ಸಾವುಗಳು ವರದಿಯಾಗಿವೆ ಎಂದು ಹೇಳಿದ್ದಾರೆ.

ದೇಶದಲ್ಲಿ ಕೊರೋನಾ ವೈರಸ್ ಸೋಂಕಿತರ ಪೈಕಿ ಶೇ. 76ರಷ್ಟು ಪುರುಷರು ಹಾಗೂ ಶೇ. 24ರಷ್ಟು ಮಹಿಳೆಯರಿದ್ದಾರೆ ಎಂದು ಅಗರವಾಲ್ ಅವರು ತಿಳಿಸಿದ್ದಾರೆ.

ನಿನ್ನೆ ಸಂಜೆಯಿಂದ 17ಕ್ಕೂ ಹೆಚ್ಚು ಮಂದಿ ಗುಣಮುಖರಾಗಿದ್ದು, ದೇಶಾದ್ಯಂತ ಸೋಂಕಿತ ಒಟ್ಟು 291 ಮಂದಿ ಗುಣಮುಖರಾಗಿದ್ದಾರೆ. ಒಂದೆರಡು ದಿನಗಳಿಂದ ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆ ಮುಂದುವರಿದಿದ್ದು, 780 ಸೋಂಕಿತ ಪ್ರಕರಣಗಳು ಮತ್ತು 45 ಸಾವುಗಳ ವರದಿಯೊಂದಿಗೆ ಮಹಾರಾಷ್ಟ್ರ ದೇಶದಲ್ಲೇ ಹೆಚ್ಚು ಬಾಧಿತ ರಾಜ್ಯವೆನಿಸಿದೆ. ನಂತರದ ಸ್ಥಾನದಲ್ಲಿರುವ ತಮಿಳುನಾಡಿನಲ್ಲಿ ದೃಢಪಟ್ಟ ಪ್ರಕರಣಗಳ ಸಂಖ್ಯೆ 621ಕ್ಕೆ ಏರಿದ್ದು, ಐವರು ಸಾವನ್ನಪ್ಪಿದ್ದಾರೆ. 

ಈ ಮಧ್ಯ, ಸುಮಾರು 25 ಸಾವಿರ ತಬ್ಲಿಘಿ ಜಮಾತ್ ಕಾರ್ಯಕರ್ತರು ಮತ್ತು ಅವರ ಸಂಪರ್ಕದಲ್ಲಿದ್ದವರನ್ನು ಕ್ವಾರಂಟೈನ್ ನಲ್ಲಿಡಲಾಗಿದೆ ಎಂದು ಕೇಂದ್ರ ಗೃಹ ಸಚಿವಾಲಯ ತಿಳಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

SCROLL FOR NEXT