ಪ್ರಧಾನಿ ಮೋದಿ - ರಾಷ್ಟ್ರಪತಿ ರಾಮನಾಥ್ ಕೊವಿಂದ್ 
ದೇಶ

ಕೊವಿಡ್-19: ರಾಷ್ಟ್ರಪತಿ, ಪ್ರಧಾನಿ, ಉಪ ರಾಷ್ಟ್ರಪತಿ, ರಾಜ್ಯಪಾಲರ, ಸಂಸದರ ವೇತನ ಶೇ.30ರಷ್ಟು ಕಡಿತ

ದೇಶದಲ್ಲಿ ಮಹಾಮಾರಿ ಕೊರೋನಾ ವೈರಸ್ ವಿರುದ್ಧ ಹೋರಾಡುವುದಕ್ಕಾಗಿ ರಾಷ್ಟ್ರಪತಿ, ಉಪ ರಾಷ್ಟ್ರಪತಿ, ರಾಜ್ಯಪಾಲರ, ಕೇಂದ್ರ ಸಚಿವ ಹಾಗೂ ಸಂಸದರ ಒಂದು ವರ್ಷದ ವೇತನ, ಪಿಂಚಣಿ ಮತ್ತು ಭತ್ಯೆಯನ್ನು ಶೇ.30ರಷ್ಟು ಕಡಿತಗೊಳಿಸಲು ಕೇಂದ್ರ ಸಚಿವ ಸಂಪುಟ ಸೋಮವಾರ ಒಪ್ಪಿಗೆ ನೀಡಿದೆ.

ನವದೆಹಲಿ: ದೇಶದಲ್ಲಿ ಮಹಾಮಾರಿ ಕೊರೋನಾ ವೈರಸ್ ವಿರುದ್ಧ ಹೋರಾಡುವುದಕ್ಕಾಗಿ ರಾಷ್ಟ್ರಪತಿ, ಉಪ ರಾಷ್ಟ್ರಪತಿ, ರಾಜ್ಯಪಾಲರ, ಕೇಂದ್ರ ಸಚಿವ ಹಾಗೂ ಸಂಸದರ ಒಂದು ವರ್ಷದ ವೇತನ, ಪಿಂಚಣಿ ಮತ್ತು ಭತ್ಯೆಯನ್ನು ಶೇ.30ರಷ್ಟು ಕಡಿತಗೊಳಿಸಲು ಕೇಂದ್ರ ಸಚಿವ ಸಂಪುಟ ಸೋಮವಾರ ಒಪ್ಪಿಗೆ ನೀಡಿದೆ.

ಕೊರೋನಾ ವೈರಸ್ ಹರಡದಂತೆ ತಡೆಗಟ್ಟುವ ಹಾಗೂ ಇದರ ವಿರುದ್ಧದ ಕಾರ್ಯಾಚರಣೆಗೆ ಸಂಬಂಧಿಸಿದಂತೆ ಚರ್ಚಿಸುವ ಸಲುವಾಗಿ ಇಂದು ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ತುರ್ತು ಸಚಿವ ಸಂಪುಟ ಸಭೆ ಕರೆದಿದ್ದರು. ಈ ಸಭೆಯಲ್ಲಿ ಈ ಮಹತ್ವದ ನಿರ್ಧಾರ ತೆಗೆದುಕೊಳ್ಳಲಾಗಿದೆ.

ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ಅವರು, ಸಂಸದರ ಒಂದು ವರ್ಷದ ವೇತನ, ಪಿಂಚಣಿ ಮತ್ತು ಭತ್ಯೆ ಹಾಗೂ ಸಂಸದರ ನಿಧಿಯನ್ನು ಮುಂದಿನ ಎರಡು ವರ್ಷಗಳ ಕಾಲ ಸ್ಥಗಿತಗೊಳಿಸುವುದಕ್ಕಾಗಿ ಸುಗ್ರೀವಾಜ್ಞೆ ಹೊರಡಿಸಲು ಕೇಂದ್ರ ಸಂಪುಟ ಒಪ್ಪಿಗೆ ನೀಡಿದೆ ಎಂದು ತಿಳಿಸಿದರು.

ಮುಂದಿನ ಎರಡು ವರ್ಷಗಳ ಕಾಲ ಸಂಸದರ ನಿಧಿ ಸ್ಥಗಿತಗೊಳಿಸುವುದರಿಂದ ಸುಮಾರು 7900 ಕೋಟಿ ಹಾಗೂ ಸಂಸದರ ವೇತನ, ಪಿಂಚಣಿ ಮತ್ತು ಭತ್ಯೆಯಲ್ಲಿ ಶೇ. 30ರಷ್ಟು ಕಡಿತಗೊಳಿಸುವುದರಿಂದ ಸುಮಾರು 3 ಸಾವಿರ ಕೋಟಿ ರೂಪಾಯಿ ಕೊರೋನಾ ವಿರುದ್ಧದ ಹೋರಾಟಕ್ಕೆ ನೆರವಾಗಲಿದೆ ಎಂದು ಸಚಿವರು ತಿಳಿಸಿದರು.

ಕೊರೋನಾ ವಿರುದ್ಧ ಹೋರಾಡುವ ಸಲುವಾಗಿ ಹಣ ಹೊಂದಿಸಲು ಕೇಂದ್ರ ಸರ್ಕಾರ ಅನೇಕ ಮಾರ್ಗಗಳನ್ನು ಹುಡುಕಿದೆ. ವರ್ಷಕ್ಕೆ ಒಬ್ಬ ಸಂಸದರಿಗೆ 5 ಕೊಟಿ ರೂ. ಸಂಸದ ನಿಧಿ ಇರುತ್ತದೆ. ಎರಡೂ ವರ್ಷದ 10 ಕೋಟಿ ಹಣವನ್ನು ಕೇಂದ್ರ ಸರ್ಕಾರವೇ ಬಳಸಿಕೊಳ್ಳಲು ಸಂಪುಟದಲ್ಲಿ ನಿರ್ಧಾರ ತೆಗೆದುಕೊಳ್ಳಲಾಗಿದೆ. ಹೀಗಾಗಿ 2020-21 ಮತ್ತು 2021-22ಸಾಲಿನ ಸಂಸದರ ನಿಧಿ ಸಂಪೂರ್ಣವಾಗಿ ಕೊರೋನಾ ವಿರುದ್ಧದ ಹೋರಾಟಕ್ಕೆ ಬಳಕೆಯಾಗಲಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

SCROLL FOR NEXT