ದೇಶ

ಬಿಜೆಪಿ 40ನೇ ಸಂಸ್ಥಾಪನಾ ದಿನ: ಕೊರೋನಾ ವಿರುದ್ಧ ಹೋರಾಡಿ, ನಿರ್ಗತಿಕರಿಗೆ ಸಹಾಯ ಮಾಡಿ ಎಂದು ಕಾರ್ಯಕರ್ತರಿಗೆ ಮೋದಿ ಕರೆ

Sumana Upadhyaya

ನವದೆಹಲಿ: ಸೋಮವಾರ ಭಾರತೀಯ ಜನತಾ ಪಾರ್ಟಿಯ 40ನೇ ಸ್ಥಾಪನಾ ದಿನ. ಈ ಸಂದರ್ಭದಲ್ಲಿ ಕೊರೋನಾ ಪೀಡಿತರಿಗೆ ಮತ್ತು ನಿರ್ಗತಿಕರಿಗೆ ಸಹಾಯ ಮಾಡಿ ಎಂದು ಬಿಜೆಪಿ ಕಾರ್ಯಕರ್ತರಿಗೆ ಪ್ರಧಾನಿ ಮೋದಿ ಕರೆ ನೀಡಿದ್ದಾರೆ.

ಪಕ್ಷ ಕಟ್ಟಲು ದಶಕಗಳ ಕಾಲ ಶ್ರಮಿಸಿದ ಕಾರ್ಯಕರ್ತರ ಕೊಡುಗೆಗಳನ್ನು ಸ್ಮರಿಸಿದ ಪ್ರಧಾನಿ, ಇಂತಹ ಕಾರ್ಯಕರ್ತರಿಂದಲೇ ಇಂದು ಪಕ್ಷ ಅಧಿಕಾರಕ್ಕೆ ಬಂದು ದೇಶದ ಜನರ ಸೇವೆ ಸಲ್ಲಿಸಲು ಅವಕಾಶ ಸಿಕ್ಕಿದೆ. ಅವರಲ್ಲಿ ಅನೇಕರು ಇಂದು ಗತಿಸಿದ್ದಾರೆ. ಅವರಿಗೆ ಗೌರವ ಪೂರ್ವಕ ನಮನಗಳು ಎಂದು ಪ್ರಧಾನಿ ಹೇಳಿಕೊಂಡಿದ್ದಾರೆ.

ಕೋವಿಡ್-19 ಹಿನ್ನೆಲೆಯಲ್ಲಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಹೊರಡಿಸಿರುವ ಮಾರ್ಗಸೂಚಿಗಳನ್ನು ಚಾಚೂ ತಪ್ಪದೇ ಪಾಲಿಸಬೇಕು ಎಂದು ಮನವಿ ಮಾಡಿರುವ ಪ್ರಧಾನಿ ಮೋದಿ, ಸಂಕಷ್ಟದಲ್ಲಿರುವ ಜನತೆಗೆ ಸ್ಪಂದಿಸುವ ಮೂಲಕ ಈ ಸಮರವನ್ನು ಗೆಲ್ಲಲು ಸಿದ್ಧರಾಗಬೇಕು ಎಂದು ಕಾರ್ಯಕರ್ತರನ್ನು ಹುರಿದುಂಬಿಸಿದ್ದಾರೆ. ಕಾರ್ಯಕರ್ತರು ಸಾಮಾಜಿಕ ಅಂತರವನ್ನು ಪಾಲಿಸಿ ಇತರರಿಗೂ ಪಾಲಿಸುವಂತೆ ಪ್ರೇರಣೆ ನೀಡಿ ಎಂದು ಮನವಿ ಮಾಡಿದರು.

SCROLL FOR NEXT