ನಟ ಕಮಲ್ ಹಾಸನ್ 
ದೇಶ

ನೋಟ್ ಅಮಾನ್ಯೀಕರಣದ ತಪ್ಪು ಪುನರಾವರ್ತನೆ: ಲಾಕ್ ಡೌನ್ ನಿರ್ಧಾರವನ್ನು ಟೀಕಿಸಿದ ಕಮಲ್ ಹಾಸನ್

ಕೋವಿಡ್-19 ಸಾಂಕ್ರಾಮಿಕ ಕಾಯಿಲೆ ಹರಡದಂತೆ ತೆಡೆಗಟ್ಟುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ 21 ದಿನಗಳ ಕಾಲ ದೇಶಾದ್ಯಂತ ಹೇರಲಾದ ನಿರ್ಬಂಧ ಅವರ ತಪ್ಪು ನಿರ್ಧಾರಗಳಲ್ಲಿ ಒಂದಾಗಿದೆ ಎಂದು ನಟ, ರಾಜಕಾರಣಿ ಕಮಲ್ ಹಾಸನ್ ಟೀಕಿಸಿದ್ದಾರೆ

ಚೆನ್ನೈ: ಕೋವಿಡ್-19 ಸಾಂಕ್ರಾಮಿಕ ಕಾಯಿಲೆ ಹರಡದಂತೆ ತೆಡೆಗಟ್ಟುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ  21 ದಿನಗಳ ಕಾಲ ದೇಶಾದ್ಯಂತ ಹೇರಲಾದ ನಿರ್ಬಂಧ ಅವರ ತಪ್ಪು ನಿರ್ಧಾರಗಳಲ್ಲಿ ಒಂದಾಗಿದೆ ಎಂದು ನಟ, ರಾಜಕಾರಣಿ ಕಮಲ್ ಹಾಸನ್ ಟೀಕಿಸಿದ್ದಾರೆ

ಮಕ್ಕಳ್ ನಿಧಿ ಮೈಯಂ ಪಕ್ಷದ ಸ್ಥಾಪಕರು ಆಗಿರುವ ಕಮಲ್ ಹಾಸನ್, ಪ್ರಧಾನಿ ನರೇಂದ್ರ ಮೋದಿಗೆ ಅವರಿಗೆ ಬಹಿರಂಗ ಪತ್ರ ಬರೆದಿದ್ದು, ನೋಟ್ ಅಮಾನ್ಯೀಕರಣದ ತಪ್ಪನ್ನು ಪುನರಾವರ್ತನೆ ಮಾಡಲಾಗಿದೆ ಎಂದು ಆರೋಪಿಸಿದ್ದಾರೆ.

ಜವಾಬ್ದಾರಿಯುತ ದೇಶದ ನಾಗರಿಕನಾಗಿ ಮಾರ್ಚ್ 23 ರಂದು ಬರೆದ ಮೊದಲ ಪತ್ರದಲ್ಲಿ ಸಮಾಜದ ದೀನ ದಲಿತರು, ದುರ್ಬಲರು ಮತ್ತು ಅವಲಂಬಿತರ ಬಗ್ಗೆಗಿನ ದೂರದೃಷ್ಟಿಯನ್ನು ಕಳೆದುಕೊಳ್ಳದಂತೆ ಕೋರಲಾಗಿತ್ತು. ಮಾರನೇ ದಿನವೇ ನೋಟ್ ಅಮಾನ್ಯೀಕರಣದ ಶೈಲಿಯಲ್ಲಿ ದಿಢೀರನೆ ದೇಶಾದ್ಯಂತ  ಲಾಕ್ ಡೌನ್ ಘೋಷಣೆ ಮಾಡಲಾಯಿತು.ಅಮಾನ್ಯೀಕರಣ ಘೋಷಣೆ ಮಾಡಿದಾಗಲೂ ನಿಮ್ಮ ಮೇಲೆ ನಂಬಿಕೆ ಇಟ್ಟಿದೆ. ಆದರೆ, ಅದು ತಪ್ಪು ಎಂಬುದನ್ನು ಸಮಯ ನಿರ್ಧರಿಸಿತು.ನೀವು ಕೂಡಾ ತಪ್ಪು ಮಾಡಿದ್ದೀರಿ ಎಂಬುದು ಸಮಯ ಸಾಕ್ಷಿಕರಿಸಿದೆ ಎಂದು ಪತ್ರದಲ್ಲಿ ಹೇಳಿದ್ದಾರೆ.

ನೋಟ್ ಅಮಾನ್ಯೀಕರಣದ ತಪ್ಪಿನ ಪುನರಾವರ್ತನೆಯಾಗುತ್ತಿದೆ ಎಂಬುದೇ ನನ್ನ ಆತಂಕಕ್ಕೆ ಕಾರಣವಾಗಿದೆ. ನೋಟ್ ಅಮಾನ್ಯೀಕರಣದಿಂದ  ಬಡವರ ಸಣ್ಣ ಉಳಿತಾಯ ಹಾಗೂ ಜೀವನೋಪಾಯದ ಮೇಲೆ ಕೆಟ್ಟ ಪರಿಣಾಮ ಬೀರಿದಂತೆ ಲಾಕ್ ಡೌನ್ ಕೂಡಾ ಅವರ ಜೀವನದ ಮೇಲೆ ಮಾರಕ ಪರಿಣಾಮ ಬೀರುತ್ತಿದ್ದು, ನಿಮ್ಮನ್ನು  ಹೊರತುಪಡಿಸಿ ಬಡವರಿಗೆ ಯಾರು ಕಾಣಿಸಲ್ಲ ಸರ್ ಎಂದು ಕಮಲ್ ಹಾಸನ್ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ನಿಮ್ಮ ಸುತ್ತಮುತ್ತಲಿನವರು ಬಾಲ್ಕನಿಗಳಲ್ಲಿ ನಿಂತು ದೀಪಗಳನ್ನು ಬೆಳಗಿಸುತ್ತಿದ್ದರೆ ಬಡವರು ಮುಂದಿನ ಊಟಕ್ಕಾಗಿ ರೊಟ್ಟಿ ತಯಾರಿಸಲು ಸಾಕಾಗುವಷ್ಟು  ತೈಲವನ್ನು ಸಂಗ್ರಹಿಸಲು ಹೆಣಗಾಡುತ್ತಿದ್ದಾರೆ. ದೇಶದ ಜನರನ್ನು ಶಾಂತಗೊಳಿಸುವ ನಿಟ್ಟಿನಲ್ಲಿ 
ನೀವು ಎರಡು ಬಾರಿ ದೇಶವನ್ನುದ್ದೇಶಿಸಿ ಮಾಡಿದ ಭಾಷಣ ಅಗತ್ಯವಾಗಿತ್ತು. ಆದರೆ, ಅದಕ್ಕಿಂತಲೂ ಹೆಚ್ಚಿನ ತುರ್ತು ಹಾಗೂ ಮುಖ್ಯವಾದ ಕೆಲಸ ಮಾಡಬೇಕಾಗಿದೆ ಎಂದು ನರೇಂದ್ರ ಮೋದಿ ಬಳಿ ಕಮಲ್ ಹಾಸನ್ ಹೇಳಿಕೊಂಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ವೆನೆಜುವೆಲಾ ಪರಿಸ್ಥಿತಿ ನಿಮಗೂ ಬರಬಹುದು.. ತಡ ಮಾಡದೇ ನಮ್ ಜೊತೆ ಒಪ್ಪಂದ ಮಾಡ್ಕೊಳ್ಳಿ': ಕ್ಯೂಬಾಗೂ Donald Trump ಎಚ್ಚರಿಕೆ!

ಒಂದು ವಾರದ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಸೋನಿಯಾ ಗಾಂಧಿ ಡಿಸ್ಚಾರ್ಜ್!

Tubelight in his head: ಹಿಮಂತಾ ಬಿಸ್ವಾ ಶರ್ಮಾ ವಿರುದ್ಧ AIMIM ಮುಖ್ಯಸ್ಥ ಓವೈಸಿ ಕಿಡಿ! ಏನಿದು ವಿವಾದ?

'ಒಬ್ಬ ಅಲ್ಲ.. ಭಾರತದ ಮೇಲೆ ದಾಳಿಗೆ ಸಾವಿರಾರು ಆತ್ಮಹತ್ಯಾ ಬಾಂಬರ್‌ಗಳು ಸಿದ್ಧ': ಪಾಕ್ ಮೂಲದ ಉಗ್ರ Masood Azhar ಆಡಿಯೋ ವೈರಲ್!

1st ODI: ನ್ಯೂಜಿಲೆಂಡ್ ವಿರುದ್ಧ ಭರ್ಜರಿ ಬ್ಯಾಟಿಂಗ್, ಸಚಿನ್ ತೆಂಡೂಲ್ಕರ್, ಸಂಗಕ್ಕಾರ ದಾಖಲೆ ಮುರಿದ Virat Kohli

SCROLL FOR NEXT